ಆಜಂಗಢ:ಅಖೀಲೇಶ್‌ ಸುಲಭ ಹೋರಾಟ


Team Udayavani, May 11, 2019, 7:32 AM IST

13

ಉತ್ತರ ಪ್ರದೇಶದ ಆಜಂಗಢ ಲೋಕಸಭಾ ಕ್ಷೇತ್ರದ ವಿಶೇಷತೆಯೇ ಅದು. 1952ರಿಂದ ಇದುವರೆಗೆ ಒಂದೋ ಕಾಂಗ್ರೆಸ್‌, ಜನತಾ ಪರಿವಾರ, ಎಸ್‌ಪಿ ಅಥವಾ ಬಿಎಸ್‌ಪಿಯ ಹುರಿಯಾಳುಗಳೇ ಗೆದ್ದವರು. 1989ರ ಬಳಿಕ ಈ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷ ಅಥವಾ ಸಮಾಜವಾದಿ ಪಕ್ಷದ ಅಭ್ಯರ್ಥಿಗಳೇ ಗೆದ್ದಿದ್ದಾರೆ. 2009ರ ಚುನಾವಣೆಯಲ್ಲಿ ಮಾತ್ರ ಬಿಜೆಪಿಯಿಂದ ರಮಾಕಾಂತ್‌ ಯಾದವ್‌ ಅಭ್ಯರ್ಥಿಯಾಗಿದ್ದಾಗ ಕ್ಷೇತ್ರದಲ್ಲಿ ಕಮಲದ ಬಾವುಟ ಹಾರಾಡಿತ್ತು. ಕಳೆದ ಬಾರಿ ದೇಶಾದ್ಯಂತ ಮೋದಿ ಅಲೆ ಇದ್ದಾಗಲೂ ಇಲ್ಲಿ ಬಿಜೆಪಿ ಹುರಿಯಾಳು ಗೆದ್ದಿರಲಿಲ್ಲ.

ಈ ಬಾರಿ ಕಣದಲ್ಲಿರುವ ಹುರಿಯಾಳುಗಳು ಬದಲಾಗಿದ್ದಾರೆ. ಹಾಲಿ ಸಂಸದ ಮುಲಾಯಂ ಸಿಂಗ್‌ ಯಾದವ್‌ ಸ್ಥಾನದಲ್ಲಿ ಪುತ್ರ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್‌ ಯಾದವ್‌ ಒಂದು ಕೈ ನೋಡೋಣ ಎಂದು ಅಖಾಡಕ್ಕೆ ಇಳಿದಿದ್ದಾರೆ. ಅವರ ವಿರುದ್ಧ ಬಿಜೆಪಿ ವತಿಯಿಂದ ಭೋಜ್‌ಪುರಿ ಭಾಷೆಯ ಸಿನಿಮಾ ನಟ ದಿನೇಶ್‌ ಲಾಲ್ ಯಾದವ್‌ ನಿರಾಹುವಾ ಕಣದಲ್ಲಿದ್ದಾರೆ.

ಈ ಬಾರಿ ಅಖೀಲೇಶ್‌ ಯಾದವ್‌ಗೆ ಧನಾತ್ಮಕವಾಗಿರುವ ಅಂಶವೆಂದರೆ ಎಸ್‌ಪಿ-ಬಿಎಸ್‌ಪಿ ಮೈತ್ರಿ. ಬಿಎಸ್‌ಪಿ ನಾಯಕಿ ಮಾಯಾವತಿ ಕೂಡ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಅಖೀಲೇಶ್‌ ಯಾದವ್‌ ಪರವೇ ಏಕಕಂಠದಿಂದ ಮತ ಬೇಕೆನ್ನುತ್ತಿದ್ದಾರೆ.

ಹಿಂದಿನ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ ಬಿಜೆಪಿಯ ರಮಾಕಾಂತ್‌ ಯಾದವ್‌ ಅವರನ್ನು ಸೋಲಿಸಿ ಲೋಕಸಭೆ ಪ್ರವೇಶಿಸಿದ್ದಾರೆ. ಈ ಕ್ಷೇತ್ರದ ಮತದಾರರು ಇದುವರೆಗೆ 18 ಮಂದಿ ಸಂಸದರನ್ನು ಆಯ್ಕೆ ಮಾಡಿದ್ದಾರೆ. ಈ ಪೈಕಿ 12 ಮಂದಿ ಯಾದವ ಸಮುದಾಯಕ್ಕೆ ಸೇರಿದವರು ಎನ್ನುವುದು ಗಮನಾರ್ಹ.

ಜಾತಿ ಲೆಕ್ಕಾಚಾರ: ಮೇಲ್ವರ್ಗದ ಸಮುದಾಯದವರ ಸಂಖ್ಯೆ 2.90 ಲಕ್ಷ, ಒಬಿಸಿ ಸಮುಗಾಯದವರು 6.80 ಲಕ್ಷ, ದಲಿತ ಸಮುದಾಯಕ್ಕೆ ಸೇರಿದವರು 4.50 ಲಕ್ಷ ಮತ್ತು ಅಲ್ಪಸಂಖ್ಯಾತರು 3.10 ಲಕ್ಷ ಮಂದಿ ಇದ್ದಾರೆ.

ಐದು ಕ್ಷೇತ್ರಗಳು: ಗೋಪಾಲಪುರ, ಸಾಗ್ರಿ, ಮುಬಾರಕ್‌ಪುರ್‌, ಆಜಂಗಢ‌, ಮೆಹ್‌ನಗರ್‌ ಎಂಬ ಐದು ವಿಧಾನಸಭಾ ಕ್ಷೇತ್ರಗಳು ಈ ಲೋಕಸಭೆಯ ವ್ಯಾಪ್ತಿಯಲ್ಲಿವೆ. ಈ ಕ್ಷೇತ್ರದಲ್ಲಿ ಮೂರು ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಶಾಸಕರೇ ಇದ್ದಾರೆ. ಇನ್ನು ಎರಡರಲ್ಲಿ ಬಹುಜನ ಸಮಾಜವಾದಿ ಪಕ್ಷದ ಶಾಸಕರು ಇದ್ದಾರೆ.

ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ಕುತೂಹಲಕಾರಿ ಅಂಶವೆಂದರೆ, ಬಿಜೆಪಿ ಅಭ್ಯರ್ಥಿಯಾಗಿರುವ ದಿನೇಶ್‌ ಲಾಲ್ ಯಾದವ್‌ ನಿರಾಹುವಾ ಅವರಿಗೆ 2016ರಲ್ಲಿ ಅಖೀಲೇಶ್‌ ಯಾದವ್‌ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಪ್ರದೇಶ ಸರ್ಕಾರದ ಪ್ರತಿಷ್ಠಿತ ಯುವ ಪ್ರಶಸ್ತಿ ‘ಯಶ್‌ ಭಾರತಿ’ ಪ್ರಶಸ್ತಿ ನೀಡಿ ಗೌರವಿಸಿದ್ದರು. ‘ನಾನು ಮುಖ್ಯಮಂತ್ರಿಯಾಗಿದ್ದಾಗ ದಿನೇಶ್‌ ಲಾಲ್ ಯಾದವ್‌ಗೆ ಪ್ರಶಸ್ತಿ ನೀಡಿದ್ದೆ. ಅವರು ಈಗ ನನ್ನ ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಅವರು ಪ್ರಶಸ್ತಿಯ ಮೂಲಕ ಪ್ರತಿ ತಿಂಗಳು ನೀಡುತ್ತಿದ್ದ ಮೊತ್ತವನ್ನು ಹಿಂಪಡೆದವರ ಪರವಾಗಿ ಸ್ಪರ್ಧೆ ನಡೆಸುತ್ತಿದ್ದಾರೆ. ನನ್ನ ವಿರುದ್ಧ ಯಾರು ಸ್ಪರ್ಧೆ ಮಾಡಿದರೂ, ಚಿಂತೆ ಮಾಡುವುದಿಲ್ಲ’ ಎಂದು ಅಖೀಲೇಶ್‌ ಹೇಳಿಕೊಂಡಿದ್ದಾರೆ.

ಅಖೀಲೇಶ್‌ ಯಾದವ್‌ ನನಗೆ ಪ್ರಶಸ್ತಿ ಕೊಟ್ಟಿದ್ದಾರೆಂದು ಅವರಿಗೆ ಬೆಂಬಲ ಕೊಡಬೇಕಾಗಿಲ್ಲ. 12 ವರ್ಷಗಳಿಂದ ಭೋಜ್‌ಪುರಿ ಸಿನಿಮಾ ಕ್ಷೇತ್ರದಲ್ಲಿದ್ದೇನೆ ಎಂದು ದಿನೇಶ್‌ ಲಾಲ್ ಯಾದವ್‌ ತಿರುಗೇಟು ನೀಡುತ್ತಾರೆ. ಯಾದವ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್‌ ಆಗಿ ಮಾತ್ರ ಸಮಾಜವಾದಿ ಪಕ್ಷ ನೋಡುತ್ತದಷ್ಟೇ ಎನ್ನುವುದು ಅವರ ವಾದ. ಹಾಗಿದ್ದರೆ ಆಜಂಗಢದ ಜನ ಯಾರ ಪರ ವಾಲಬಹುದು ಎನ್ನುವ ಪ್ರಶ್ನೆಯಂತೂ ಎದುರಾಗುತ್ತದೆ. ಕೆಲವು ರಾಜಕೀಯ ಪಂಡಿತರ ಪ್ರಕಾರ ನಿರಾಹುವಾರನ್ನು ಅಖೀಲೇಶ್‌ ಯಾದವ್‌ರ ವಿರುದ್ಧ ಕಣಕ್ಕಿಳಿಸಿದ ಬಿಜೆಪಿಯ ನಿರ್ಧಾರವು ಮಾಸ್ಟರ್‌ ಸ್ಟ್ರೋಕ್‌ ಅಂತೆ. ಏಕೆಂದರೆ ಭೋಜಪುರಿ ಗಾಯಕನಿಗೆ ಯುವಕರು ಮತ್ತು ಮಧ್ಯಮ ಆದಾಯದ ಜನರ ಬೆಂಬಲವಿದೆ ಎನ್ನುತ್ತಾರವರು. ಆದರೆ ಬಿಜೆಪಿ ಅಭ್ಯರ್ಥಿ ತಮ್ಮ ರ್ಯಾಲಿಗಳಲ್ಲಿ ಜನಸಾಗರವನ್ನು ಸೆಳೆಯುತ್ತಿದ್ದಾರಾದರೂ, ಕ್ಷೇತ್ರದ ಜನ ಅಖೀಲೇಶ್‌ರ ಪರವಾಗಿ ಇದ್ದಾರೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಮೇ 12 ಕ್ಕೆ ಈ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.