ಮೊಯ್ಲಿ ಹ್ಯಾಟ್ರಿಕ್‌ ಸಾಧನೆಗೆ ಬಚ್ಚೇಗೌಡರ ಅಡ್ಡಗಾಲು

ರಣಾಂಗಣ: ಚಿಕ್ಕಬಳ್ಳಾಪುರ

Team Udayavani, Apr 9, 2019, 3:00 AM IST

moily-hat

ಚಿಕ್ಕಬಳ್ಳಾಪುರ: ಬಯಲುಸೀಮೆಯ ಬರದನಾಡು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ಬೇಸಿಗೆಯ ರಣಬಿಸಿಲನ್ನು ಮೀರಿಸಿದೆ. ಕಳೆದ ಬಾರಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಹಾಲಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.

ಕಣ ಚಿತ್ರಣ: ಮೈತ್ರಿ ಪಕ್ಷಗಳ ನಡುವಿನ ಸೀಟು ಹೊಂದಾಣಿಕೆ ವೇಳೆ ಕ್ಷೇತ್ರ ಉಳಿಸಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಂ.ವೀರಪ್ಪ ಮೊಯ್ಲಿ, ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಬಾರಿ ತ್ರಿಕೋನ ಸ್ಪರ್ಧೆ ನಡುವೆಯೂ ಮೊಯ್ಲಿ ವಿರುದ್ದ ಕೇವಲ 9,520 ಮತಗಳ ಅಂತರದಿಂದ ಸೋತಿದ್ದ ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ, ಬಿಜೆಪಿಯಿಂದ ಸ್ಪರ್ಧಿಸುವ ಮೂಲಕ ಎರಡನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಮೊಯ್ಲಿ 4,24,800 ಮತ ಪಡೆದರೆ, ಬಚ್ಚೇಗೌಡರು 4,15,280 ಮತ ಪಡೆದಿದ್ದರು. ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ 3,46339 ಮತ ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು. ಈ ಬಾರಿ ಅಖಾಡದಲ್ಲಿ ಒಟ್ಟು 15 ಮಂದಿ ಅಭ್ಯರ್ಥಿಗಳಿದ್ದು, ಕಣದಲ್ಲಿರುವ ಬಿಎಸ್ಪಿ ಹಾಗೂ ಸಿಪಿಎಂ ಪಕ್ಷದ ಅಭ್ಯರ್ಥಿಗಳು ಯಾರ ಸೋಲು, ಗೆಲುವಿಗೆ ಕಾರಣ ಆಗುತ್ತಾರೆ ಎನ್ನುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಇತಿಹಾಸದ ಪುಟ ತಿರುವಿದರೆ, ಚಿಕ್ಕಬಳ್ಳಾಪುರ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. ಕ್ಷೇತ್ರ ಅಸ್ವಿತ್ವಕ್ಕೆ ಬಂದ ನಂತರ ನಡೆದ 11 ಲೋಕಸಭಾ ಚುನಾವಣೆಗಳ ಪೈಕಿ 10ರಲ್ಲಿ ಕಾಂಗ್ರೆಸ್‌ ತನ್ನ ಪ್ರಾಬಲ್ಯ ಮೆರೆದಿದೆ. 1996ರಲ್ಲಿ ಮಾತ್ರ ಜನತಾದಳದಿಂದ ಆರ್‌.ಎಲ್‌.ಜಾಲಪ್ಪ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್‌ಗೆ ಮೈತ್ರಿ ಲಾಭ: ಈ ಬಾರಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಮೊಯ್ಲಿ ಸ್ಪರ್ಧಿಸಿರುವುದರಿಂದ ಅವರ ಗೆಲುವು ಸುಲಭ ಎನ್ನುವ ವಾದ ಕಾಂಗ್ರೆಸ್‌ ನಾಯಕರದು. ಕಾಂಗ್ರೆಸ್‌ಗೆ ಜೆಡಿಎಸ್‌ನೊಂದಿಗಿನ ಮೈತ್ರಿ ಬಲ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. ಕ್ಷೇತ್ರದಲ್ಲಿ ತನ್ನ ಸಾಂಪ್ರದಾಯಿಕ ಮತಗಳಾಗಿರುವ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಅದು ಹೆಚ್ಚಾಗಿ ಅವಲಂಬಿಸಿದೆ. ಜೊತೆಗೆ, ಸಂಸದರಾಗಿ ಮೊಯ್ಲಿ ಮಾಡಿರುವ ಕೆಲಸಗಳು ಅವರಿಗೆ ಪ್ಲಸ್‌ ಪಾಯಿಂಟ್‌.

ಬಿಜೆಪಿಗೆ ಮೋದಿ ಬಲ: ಇನ್ನು, ಮೋದಿ ಹವಾ ಜೊತೆಗೆ ಕ್ಷೇತ್ರದಲ್ಲಿ ಪ್ರಭಾವಿ ಸಮುದಾಯವಾಗಿರುವ ಒಕ್ಕಲಿಗ ಮತಗಳು ಬಚ್ಚೇಗೌಡರಿಗೆ ಅನುಕೂಲ ಎಂಬುದು ಬಿಜೆಪಿ ನಾಯಕರ ಅನಿಸಿಕೆ. ಹೀಗಾಗಿ, ಒಕ್ಕಲಿಗ ಮತಗಳನ್ನು ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ. ಕ್ಷೇತ್ರದಲ್ಲಿ ಯಲಹಂಕ, ಹೊಸಕೋಟೆ ಕ್ಷೇತ್ರ ಬಿಟ್ಟರೆ ಬಿಜೆಪಿಗೆ ಭದ್ರ ನೆಲೆ ಇಲ್ಲ.

ಆದರೂ, ಕಳೆದ ಎರಡು, ಮೂರು ಲೋಕಸಭಾ ಚುನಾವಣೆಗಳಿಂದ ಈಚೆಗೆ ಬಿಜೆಪಿ, ಕಾಂಗ್ರೆಸ್‌ನ ಪ್ರಬಲ ಎದುರಾಳಿಯಾಗಿ, ಜೆಡಿಎಸ್‌ಗಿಂತ ಹೆಚ್ಚು ಮತಗಳನ್ನು ಗಳಿಸಿದೆ. ಕಳೆದ ಬಾರಿ ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಪಡೆದಿದೆ. ಈ ಬಾರಿಯೂ ಬಿಜೆಪಿ, ಈ ಮೂರು ಕ್ಷೇತ್ರಗಳನ್ನೇ ನೆಚ್ಚಿಕೊಂಡಿದೆ. ಪುಲ್ವಾಮಾ ಘಟನೆ ಬಳಿಕ ಮತದಾರರು ಬಿಜೆಪಿ ಪರ ಹೆಚ್ಚು ಒಲವು ತೋರುತ್ತಿದ್ದಾರೆ ಎಂಬುದು ಬಿಜೆಪಿ ವಾದ.

ನಿರ್ಣಾಯಕ ಅಂಶ: ಕ್ಷೇತ್ರದಲ್ಲಿರುವ 5 ಲಕ್ಷ ಒಕ್ಕಲಿಗ ಮತಗಳು ನಿರ್ಣಾಯಕ ಎನ್ನುವ ಮಾತು ಪ್ರಬಲವಾಗಿ ಕೇಳಿ ಬರುತ್ತಿದೆ. ಆದರೆ, ಈ ಹಿಂದಿನ ಚುನಾವಣಾ ಫ‌ಲಿತಾಂಶಗಳನ್ನು ನೋಡಿದರೆ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮತಗಳೇ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆದಿವೆ.

ವಿಶೇಷ ಅಂದರೆ, ಕ್ಷೇತ್ರದ ಮತದಾರರು ಪ್ರತಿ ಚುನಾವಣೆಯಲ್ಲಿಯೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಮಣೆ ಹಾಕಿರುವುದು ಎದ್ದು ಕಾಣುತ್ತಿದೆ. ಈ ಬಾರಿ ಬಿಜೆಪಿಯಿಂದ ಎರಡನೇ ಬಾರಿಗೆ ಸ್ಪರ್ಧಿಸಿರುವ ಬಚ್ಚೇಗೌಡ, ಒಕ್ಕಲಿಗರು ಎಂಬ ಕಾರಣಕ್ಕೆ ಒಕ್ಕಲಿಗ ಮತಗಳು ಬಿಜೆಪಿಗೆ ಬರುತ್ತವೆಂಬ ಆಶಾಭಾವನೆ ಬಿಜೆಪಿಯದು. ಆದರೆ, ಜೆಡಿಎಸ್‌ ಜೊತೆಗಿನ ಮೈತ್ರಿ ತನಗೆ ಲಾಭವಾಗಲಿದೆ ಎಂಬುದು ಮೊಯ್ಲಿ ಆಶಾವಾದ.

ಕ್ಷೇತ್ರವ್ಯಾಪ್ತಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವ್ಯಾಪ್ತಿಗೆ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಆ ಪೈಕಿ ಜಿಲ್ಲೆಯ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಹೊಸಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ದೇವನಹಳ್ಳಿ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ.

ಜಾತಿವಾರು ಲೆಕ್ಕಾಚಾರ: (ಅಂದಾಜು)
-ಒಕ್ಕಲಿಗರು – 5,00,000.
-ಹಿಂದುಳಿದ ವರ್ಗ- 4,00,000.
-ದಲಿತರು – 6,00,000.
-ಮುಸ್ಲಿಮರು – 3,50,000.

ಮತದಾರರು
-ಒಟ್ಟು – 17,90,408
-ಪುರುಷರು – 9,02,487
-ಮಹಿಳೆಯರು – 8,87,921

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.