“ಕೈ’ಗೆ ಮೆಣಸಿನಕಾಯಿ ಉರಿ!


Team Udayavani, Apr 3, 2019, 6:00 AM IST

Udayavani Kannada Newspaper

ಹಾವೇರಿ: ಸತತ 11 ಬಾರಿ ವಿಜಯದ ನಗೆ ಬೀರಿದ್ದ ಕಾಂಗ್ರೆಸ್‌ಗೆ “ಮೆಣಸಿನಕಾಯಿ’ ಕಣ್ಣೀರು ಹಾಕುವಂತೆ ಮಾಡಿತ್ತು. ಸದಾ ಗೆಲುವಿನ ಹಾರ ಹಿಡಿದ “ಕೈ’ಗಳಿಗೆ ಆ “ಮೆಣಸಿನಕಾಯಿ’ ಉರಿ ಮೂಡಿಸಿತ್ತು. ಅದು ಅಂತಿಂಥ “ಮೆಣಸಿನಕಾಯಿ’ ಅಲ್ಲ, ಹಾವೇರಿ ಮೂಲದ “ಲೋಕಶಕ್ತಿ’ಯ “ಮೆಣಸಿನಕಾಯಿ’! ಒಂದು “ಮೆಣಸಿನಕಾಯಿ’ ಕಾಂಗ್ರೆಸ್‌ ಭದ್ರಕೋಟೆಗೆ ನುಸುಳಿ ಘಾಟು ಎಬ್ಬಿಸಿ ತಲ್ಲಣ ಮೂಡಿಸಿದ ಇತಿಹಾಸ 2009ಕ್ಕಿಂತ
ಮುಂಚೆ ಧಾರವಾಡ ದಕ್ಷಿಣ ಕ್ಷೇತ್ರ ಎನಿಸಿದ್ದ ಈಗಿನ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿದೆ. ಈ ಹಿಂದೆ ಧಾರವಾಡ ದಕ್ಷಿಣ ಲೋಕಸಭೆ ಕ್ಷೇತ್ರವಾಗಿದ್ದ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ 1952ರಿಂದ 1998ರವರೆಗೆ ನಡೆದ 11 ಲೋಕಸಭೆ ಚುನಾವಣೆಗಳಲ್ಲಿ ನಿರಂತರವಾಗಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಮತದಾರರು ಸತತವಾಗಿ “ಕೈ’ ಹಿಡಿದಿದ್ದರು.

ಕ್ಷೇತ್ರದಲ್ಲಿ “ಕೈ’ ಪ್ರಾಬಲ್ಯ ಪ್ರಬಲವಾಗಿತ್ತು. ಸದಾ ನಗುವಿನಲ್ಲೇ ಇದ್ದ ಕಾಂಗ್ರೆಸ್‌ಗೆ ಕ್ಷೇತ್ರ “ಕೈ’ ತಪ್ಪುವಂತೆ ಮಾಡಿದ್ದು ಲೋಕಶಕ್ತಿ ಪಕ್ಷದ ಅಭ್ಯರ್ಥಿ ಬಸವಣ್ಣೆಪ್ಪ ಮೆಣಸಿನಕಾಯಿ. ಅವರ ಹೆಸರಲ್ಲಿರುವ “ಮೆಣಸಿನ
ಕಾಯಿ’ಯೇ ಕಾಂಗ್ರೆಸ್‌ಗೆ ಮುಳುವಾಯಿತು. ಹಾವೇರಿ ಜಿಲ್ಲೆಯ ಅಕ್ಕೂರ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಬಸವಣ್ಣೆಪ್ಪ ಮೆಣಸಿನಕಾಯಿ ಹಾವೇರಿಯಲ್ಲಿ ತೆರಿಗೆ ಸಲಹೆಗಾರರಾಗಿದ್ದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ ಸದಸ್ಯರಾಗಿ ಯೂ ಆಯ್ಕೆಯಾಗಿದ್ದರು. ಬಸವಣ್ಣೆಪ್ಪ ಮೆಣಸಿನಕಾಯಿ 1998ರಲ್ಲಿ ಲೋಕಶಕ್ತಿ ಪಾರ್ಟಿಯಿಂದ ಸ್ಪರ್ಧಿಸಿ 3,28,333 ಮತಗಳಿಸಿ ಕಾಂಗ್ರೆಸ್‌ ಪಾಲಿಗೆ ಅಕ್ಷರಶಃ ಖಾರವಾಗಿದ್ದರು. ಅಂದಿನ ಚುನಾವಣೆಯಲ್ಲಿ ಪ್ರತಿಸ್ಪಧಿ ಕಾಂಗ್ರೆಸ್‌ನ ಐ.ಜಿ. ಸನದಿ 2,41,371, ಜನತಾದಳದಿಂದ ಕಣಕ್ಕಿಳಿದಿದ್ದ ಬಸವರಾಜ ಶಿವಣ್ಣನವರ 1,26,722 ಮತಗಳಿಸಿ ಸೋತಿದ್ದರು. ಕಾಂಗ್ರೆಸ್‌ನ ಭದ್ರಕೋಟೆಯನ್ನು ಮೊದಲ ಬಾರಿಗೆ ಛಿದ್ರಗೊಳಿಸಿದ ಕೀರ್ತಿ ಬಸವಣ್ಣೆಪ್ಪ ಮೆಣಸಿನಕಾಯಿ ಅವರಿಗೆ ಸಲ್ಲುತ್ತದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.