“ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿ’: ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು
Team Udayavani, Apr 11, 2019, 3:49 PM IST
ಪಂಜ : ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಭೇಟಿ ನೀಡಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ದೇಶದಲ್ಲಿ ವಿಶೇಷ ಅಭಿವೃದ್ಧಿ ಮತ್ತು ಬದಲಾವಣೆಗಳು ಆಗಿವೆ. ನಮ್ಮ ಜಿಲ್ಲೆಗೂ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದಲ್ಲಿ ಅಭಿವೃದ್ಧಿ ಕೆಲಸಕ್ಕೆ ಅನುದಾನಗಳು ಬಂದಿದ್ದು, ದಾಖಲೆಯಾಗಿದೆ. ಮೋದಿಯವರು ಪ್ರಧಾನಿಯಾದ ಬಳಿಕ ಭಾರತೀಯ ಸೈನ್ಯಕ್ಕೆ ಶಕ್ತಿ ನೀಡಿದ್ದಾರೆ.
ಭಯೋತ್ಪಾದನೆಯನ್ನು ನಾಶ ಮಾಡುತ್ತಿದ್ದು, ಇಂದು ಪಾಕ್ ಬಿಟ್ಟು ಬೇರೆಲ್ಲ ರಾಷ್ಟ್ರಗಳು ಭಾರತದೊಂದೊಗಿವೆ. ದೇಶದ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಬಿಜೆಪಿ ಪಕ್ಷವನ್ನು ಮತದಾರರು ಆಶೀರ್ವದಿಸಬೇಕು ಎಂದರು.
ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪಕ್ಷದ ಹಿರಿಯ ಕಾರ್ಯಕರ್ತ ಡಾ| ರಾಮಯ್ಯ ಭಟ್, ಜಿ.ಪಂ. ಸದಸ್ಯ ಎಸ್.ಎನ್. ಮನ್ಮಥ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಜಿಲ್ಲಾ ಸಮಿತಿಯ ವೆಂಕಟ್ ದಂಬೆಕೋಡಿ, ಶಿವರಾಮಯ್ಯ ಕರ್ಮಾಜೆ, ವೆಂಕಟೇಶ್ವರ ಜೋಯಿಷ, ಬಿಜೆಪಿ ಪಂಜ ಶಕ್ತಿ ಕೇಂದ್ರದ ಸಂಚಾಲಕ ಲಿಗೋಧರ ಆಚಾರ್ಯ, ಚಂದ್ರಶೇಖರ ಶಾಸ್ತ್ರಿ, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಾಥ್ ಬಾಳಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪನ್ನೆ, ಸಂತೋಷ್ ಜಾಕೆ, ಸುಬ್ರಾಯ ಭಟ್ ಅಲಕಾ, ಗ್ರಾ.ಪಂಚಾಯತ್ ಸದಸ್ಯರಾದ ಲೋಕೇಶ್ ಬರೆಮೇಲು, ಜಗೇಶ್ ಪುರಿಯ, ವಿಮಲಾ ನಾಗತೀರ್ಥ, ಸುಜಾತಾ ನಾಗತೀರ್ಥ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಶಿವರಾಮಯ್ಯ ಕರ್ಮಾಜೆ ಸ್ವಾಗತಿಸಿದರು. ಲಿಗೋಧರ ಆಚಾರ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ