ಬಿಜೆಪಿ ನಾಯಕನ ಹತ್ಯೆ
Team Udayavani, May 6, 2019, 9:25 AM IST
ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಬಿಜೆಪಿ ಘಟಕದ ಉಪಾಧ್ಯಕ್ಷ ಗುಲ್ ಮೊಹಮ್ಮದ್ ಮಿರ್ (57) ಎಂಬವರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. 2018 ಮತ್ತು 2014ರ ಅಸೆಂಬ್ಲಿ ಚುನಾವಣೆಯಲ್ಲಿ ಇವರು ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.
ಶನಿವಾರ ರಾತ್ರಿ ತಮ್ಮ ಮನೆಯ ಹೊರಗೆ ನಿಂತಿದ್ದಾಗ ಮಿರ್ ಅವರಿಗೆ ಗುಂಡಿಕ್ಕಿ ಉಗ್ರರು ಪರಾರಿಯಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಮಿರ್ ಅವರ ಸಾವು ದೇಶಕ್ಕಾದ ನಷ್ಟ ಎಂದು ಬಿಜೆಪಿ ಬಣ್ಣಿಸಿದೆ.
ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಮಿರ್ ಹತ್ಯೆಯನ್ನು ಖಂಡಿಸಿದ್ದಾರೆ. ಘಟನೆ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್. ಸುಬ್ರಹ್ಮಣ್ಯಂ ನೇತೃತ್ವದಲ್ಲಿ ತನಿಖೆಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆದೇಶಿಸಿದ್ದಾರೆ. ಆದರೆ, ರಾಜ್ಯಪಾಲರ ವಿರುದ್ಧ ಕಿಡಿಕಾರಿರುವ ವಿವಿಧ ರಾಜಕೀಯ ಪಕ್ಷಗಳು, ರಾಜಕೀಯ ಕಾರ್ಯಕರ್ತರಿಗೆ ನೀಡಲಾಗಿದ್ದ ಭದ್ರತೆ ವಾಪಸ್ ಪಡೆಯುವ ಮೂಲಕ ರಾಜ್ಯಪಾಲರೇ ಈ ರೀತಿಯ ಘಟನೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ