ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ?
Team Udayavani, Apr 8, 2019, 6:30 AM IST
ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಬಿಜೆಪಿ ಪ್ರಣಾಳಿಕೆ ಸೋಮವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಕಾರ್ಯಕ್ರಮದಲ್ಲಿ ಹಲವು ಸಚಿವರೂ ಭಾಗಿಯಾಗಲಿದ್ದಾರೆ. ಸಂಕಲ್ಪ ಪತ್ರ ತಯಾರಿಸಲು ಬಿಜೆಪಿ ಸುಮಾರು 3 ತಿಂಗಳ ಕಾಲ ಶ್ರಮಿಸಿದೆ. ಪ್ರಣಾಳಿಕೆ ತಯಾರಿಗೆ ಜನರಿಂದಲೇ ಸಲಹೆ ಪಡೆಯುವ ಸಲುವಾಗಿ “ಭಾರತ್ ಕೆ ಮನ್ ಕಿ ಬಾತ್ ಮೋದಿ ಕೆ ಸಾಥ್’ ಸೇರಿದಂತೆ ಹಲವು ಅಭಿಯಾನಗಳನ್ನೂ ನಡೆಸಿದೆ. ಜನವರಿ 6ರಂದೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ 20 ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಿತ್ತು. ಬಳಿಕ ರಾಜನಾಥ್ ಅವರು ಪ್ರಣಾಳಿಕೆ ಸಂಬಂಧ ಕೆಲಸ ಮಾಡಲು 15 ಉಪ ಸಮಿತಿಗಳನ್ನು ರಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ