8ರ ಪೈಕಿ 7 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಲೆ


Team Udayavani, Apr 12, 2019, 3:39 PM IST

12

ಎಚ್‌.ಡಿ.ಕೋಟೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ 5 ವರ್ಷದ ಅವಧಿಯಲ್ಲಿ ದೇಶಕ್ಕೆ ಉತ್ತಮವಾದ ಆಡಳಿತ ಕೊಟ್ಟಿದೆ. ಈ ಬಾರಿಯೂ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಲು ಮತದಾರರು ಬಿಜೆಪಿ ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸಪ್ರಸಾದ್‌ ಮನವಿ ಮಾಡಿದರು.

ಪಟ್ಟಣ ಸೇರಿದಂತೆ ತಾಲೂಕಿನ ಆಲನಹಳ್ಳಿ, ಕ್ಯಾತನ ಹಳ್ಳಿ, ಅಣ್ಣೂರು, ಅಂತರಸಂತೆ, ಹೆಬ್ಬಲಗುಪ್ಪೆ, ಸರಗೂರು, ಹಂಚೀಪುರ ಮುಂತಾದ ಗ್ರಾಮಗಳಲ್ಲಿ ಗುರುವಾರ ರೋಡ್‌ ಶೋ ಮೂಲಕ ಅಬ್ಬರದ ಚುನಾವಣಾ
ಪ್ರಚಾರ ನಡೆಸಿ ಅವರು ಮಾತನಾಡಿದರು.

ಒಡನಾಟ: ಎಚ್‌.ಡಿ.ಕೋಟೆ ತಾಲೂಕು ಸೇರಿದಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಇತರ 7 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಲೆ ಇದೆ. ತಾವು 5 ಬಾರಿ ಸಂಸದರಾಗಿದ್ದರೂ, ಎಚ್‌.ಡಿ.ಕೋಟೆ ತಾಲೂಕಿಗೆ
ಅಭ್ಯರ್ಥಿಯಾಗಿ ಬರುವ ಅವಕಾಶ ಬಂದಿರಲಿಲ್ಲ. ತುಂಬಾ ಜನರ ಪರಿಚಯ ಇದೆ. ಜತೆಗೆ ತಾವು 5 ಬಾರಿ ಸಂಸದರಾಗಿ ಮತ್ತು ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದು, ತಮಗೆ ಅನುಕೂಲ ಆಗಿದೆ. ಎಲ್ಲಾವರ್ಗದ ಜನತೆಯೊಂದಿಗೆ ಶಕ್ತಿ ಮೀರಿ ಒಡನಾಟ ಹೊಂದಿದ್ದೇನೆ. ಹೀಗಾಗಿ ಎದುರಾಳಿ ಕಾಂಗ್ರೆಸ್‌ ಪಕ್ಷಕ್ಕಿಂತ ಹೆಚ್ಚು ಮತಗಳು ತಾಲೂಕಿನಲ್ಲಿ ಲಭ್ಯವಾಗುವ ಆಶಾಭಾವನೆ ತಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ: ಮುಂದಿನ ದಿನಗಳಲ್ಲಿ ಬಿಜೆಪಿಗೆ ಉತ್ತಮ ಅವಕಾಶ ಇದೆ. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ 17 ಮಂತ್ರಿಗಳು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಸಿದ್ದರಾಮಯ್ಯ ಅವರೇ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ 36 ಸಾವಿರ ಮತಗಳ ಅಂತರದಿಂದ
ಸೋತಿದ್ದಾರೆ. 104 ಸ್ಥಾನ ಪಡೆದ ಬಿಜೆಪಿಗೆ ಅಧಿಕಾರಸಿಕ್ಕಿಲ್ಲ. ಮುಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆಬರಬೇಕಾದರೆ ಬಿಜೆಪಿ ಸಂಸದರ ಆಯ್ಕೆ ಹೆಚ್ಚಾಗ ಬೇಕು. ಇದಕ್ಕೆ ಜನರ ಆಶಿರ್ವಾದ ಬೇಕು ಎಂದು ಶ್ರೀನಿವಾಸ ಪ್ರಸಾದ್‌ ಕೋರಿದರು.

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅನೇಕ ರಾಷ್ಟ್ರಗಳಿಗೆ ಭೇಟಿ ನೀಡಿ ಜಾಗತಿಕ ನಾಯಕರಾಗಿ ಹೊರಹೊಮ್ಮಿದ್ದಾರೆ. ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ರಾಷ್ಟ್ರದ ಭದ್ರತೆಗೆ ಅನೇಕ ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅನೇಕ ದೇಶಗಳು ಮೋದಿ ಅವರಿಗೆ ಬಲಿಷ್ಠ ನಾಯಕ ಎಂಬ ಬಿರುದನ್ನು ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೋದಿ ಅವರಿಗೆ ದೇಶದ ಬಗ್ಗೆ ಹಿತಾಸಕ್ತಿ ಮತ್ತು
ಕಾಳಜಿ ಇದೆ. ದೇಶದ ಜನತೆ ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಹೀಗಾಗಿಯೇ ಈ ಬಾರಿಯೂ ಎರಡನೇ ಬಾರಿಗೆ ಪ್ರಧಾನಿಯಾಗುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ 283 ಅಭ್ಯರ್ಥಿಗಳು ಗೆದ್ದಿದ್ದರು. ಈ ಬಾರಿ ಅದು 300 ದಾಟುವ ಸಂಭವ ಇದೆ. ಈ ಬಾರಿಯೂ ಅವರ ನಾಯಕತ್ವದಲ್ಲಿ ಚುನಾವಣಾ ಮಹಾಸಮರ ನಡೆಯುತ್ತಿದೆ. ಇಡೀ ವಿಶ್ವ ಭಾರತ ದೇಶದ ಚುನಾವಣೆ ಬಗ್ಗೆ ಗಮನ ಸೆಳೆದಿದೆ ಎಂದರು.

ಪ್ರಸಾದ್‌ ಮುತ್ಸದ್ಧಿ: ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಪಕ್ಷದ ಅಭ್ಯರ್ಥಿ ವಿ. ಶ್ರೀನಿವಾಸ ಪ್ರಸಾದ್‌ ರಾಜ್ಯ ಕಂಡಂತಹ ಮುತ್ಸದ್ಧಿ ರಾಜಕಾರಣಿ. ಐದು ಬಾರಿ ಸಂಸದರಾಗಿ, ಶಾಸಕರಾಗಿ, ಕೇಂದ್ರ ಮತ್ತು ರಾಜ್ಯ ಸಚಿವರಾಗಿ ಆಡಳಿತ ನಡೆಸಿದ್ದ ಅವರು ಎಲ್ಲೂ ಕಪ್ಪುಚುಕ್ಕೆ ಹೊಂದಿಲ್ಲ. ಆರನೇ ಬಾರಿಗೆ ಅವರನ್ನು ಸಂಸತ್‌ ಗೆ ಕಳುಹಿಸಬೇಕಿದೆ ಈ ಬಾರಿ ರಾಜ್ಯದಲ್ಲಿ 22 ರಿಂದ 23 ಸ್ಥಾನಗಳನ್ನುಲಭಿಸುವ ಸಂಭವ ಇದೆ ಎಂದುಅವರು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಸಚಿವ ಎಂ.ಶಿವಣ್ಣ, ತಾಲೂಕು ಘಟಕದ ಅಧ್ಯಕ್ಷ ಸಿ.ಕೆ. ಗಿರೀಶ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಸಿದ್ದರಾಜು, ಸಿ.ರಮೇಶ್‌, ಜಿ.ಪಂ.ಸದಸ್ಯ ವೆಂಕಟಸ್ವಾಮಿ, ಮಾಜಿ ಸದಸ್ಯರಾದ ಭಾಗ್ಯಲಕ್ಷ್ಮೀ, ಎಚ್‌.ಸಿ.ಲಕ್ಷ್ಮಣ್‌, ಮಾಜಿ ಪುರಸಭೆ ಸದಸ್ಯ ವಿವೇಕ್‌, ಮುಖಂಡರಾದ ನಾಗರಾಜು ಮಲ್ಲಾಡಿ, ಗೋಪಾಲ್‌ ಪೂಜರ್‌, ಯೋಗೀಶ್‌ ಕುಮಾರ್‌,
ಶಿವರಾಜಪ್ಪ, ಡ್ರೀಪ್‌ ಸಿದ್ದನಾಯಕ, ರುದ್ರಪ್ಪ, ಚಾ. ನಂಜುಂಡ ಮೂರ್ತಿ, ಎಚ್‌.ಕೆ.ಸುರೇಶ್‌, ವೈ.ಟಿ. ಮಹೇಶ್‌, ನಂದೀಶ್‌, ತಾರಕಮನ್ಸೂರ್‌, ಸೋಮಚಾರ್‌, ಮೊತ್ತ ಬಸವರಾಜು, ಸಜೀವನ್‌, ರವಿ, ಲೋಕೇಶ್‌, ಮಾದೇಶ್‌, ರಾಕೇಶ್‌ ಶರ್ಮ, ಗಣೇಶ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.