ಉತ್ತರ ಕರ್ನಾಟಕ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧ


Team Udayavani, Apr 20, 2019, 3:00 AM IST

utt-kuma

ಹುಬ್ಬಳ್ಳಿ: “ಕಳೆದ 20-30 ವರ್ಷಗಳಿಂದ ನಮ್ಮ ಕುಟುಂಬಕ್ಕೆ ಉತ್ತರ ಕರ್ನಾಟಕ ವಿರೋಧಿ ಪಟ್ಟ ಕಟ್ಟಲಾಗಿದೆ. ಇಂತಹ ಷಡ್ಯಂತ್ರ-ಹುನ್ನಾರಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಭಾಗದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ಇದಕ್ಕಾಗಿ ನನ್ನದೇ ನೀಲನಕ್ಷೆ ಸಿದ್ಧಪಡಿಸಿದ್ದೇನೆ. ಸಮ್ಮಿಶ್ರ ಸರಕಾರದಲ್ಲಿ ಇದರ ಅನುಷ್ಠಾನ ನಮ್ಮ ಮುಂದಿರುವ ಆದ್ಯತೆ..’

ಇದು “ಉದಯವಾಣಿ’ ಜತೆ ಮಾತನಾಡಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಸ್ಪಷ್ಟ ನುಡಿ. ಒಟ್ಟಾರೆ ಅವರು ಹೇಳಿದ್ದು..

– ಉತ್ತರಕ್ಕೆ ನಾನೆಂದೂ ದ್ರೋಹ ಬಗೆಯುವುದಿಲ್ಲ. ಕೆಲವರು ನನ್ನ ವಿರುದ್ಧ ಅಪಪ್ರಚಾರ ನಡೆಸಬಹುದು. ಆದರೆ, ನನ್ನನ್ನು ಅತಿಯಾಗಿ ಪ್ರೀತಿಸುವ ಅಸಂಖ್ಯಾತ ಮನಸ್ಸುಗಳು ಈ ಭಾಗದಲ್ಲಿವೆ ಎಂಬುದನ್ನು ನಾನು ಸ್ಪಷ್ಟವಾಗಿ ಬಲ್ಲೆ.

– ಒಂದಂತೂ ಸ್ಪಷ್ಟಪಡಿಸುವೆ, ಈ ಭಾಗದ ಜನರ ನಿರೀಕ್ಷೆಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ನಾನು ಉತ್ತರ ಕರ್ನಾಟಕಕ್ಕೆ ಏನೆಲ್ಲಾ ಕೊಡುಗೆ ನೀಡಿದ್ದೇವೆ ಎಂಬುದನ್ನು ಜನ ಅರ್ಥಮಾಡಿಕೊಳ್ಳಬೇಕು. ನಮ್ಮ ಬದ್ಧತೆಗಿಂತ ಅಪಪ್ರಚಾರವನ್ನೇ ಜನ ಹೆಚ್ಚಾಗಿ ನಂಬುತ್ತಾರಲ್ಲ ಎಂದು ಒಮ್ಮೊಮ್ಮೆ ನೋವಾಗುತ್ತದೆ.

– ಕೃಷಿ, ನೀರಾವರಿ, ಉದ್ಯೋಗ ಸೃಷ್ಟಿ, ಆರೋಗ್ಯ, ಶಿಕ್ಷಣ ಇನ್ನಿತರ ವಿಷಯಗಳ ಬಗ್ಗೆ ನೀಲನಕ್ಷೆ ಹೊಂದಲಾಗಿದೆ. ಇದರಲ್ಲಿ ವಿಶೇಷವಾಗಿ ನೀರಾವರಿ ಹಾಗೂ ಕೃಷಿಗೆ ಮೊದಲಾದ್ಯತೆ. ಉತ್ತರದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚು ಅವಕಾಶ ಇದೆ. ಹನಿ, ಹನಿ ನೀರು ಸದ್ಭಳಕೆಯಾಗಬೇಕು, ಹನಿ ನೀರಾವರಿ ಉತ್ತೇಜನಕ್ಕೆ ಶೇ.100ರಷ್ಟು ಸಬ್ಸಿಡಿಯೊಂದಿಗೆ ನೀರಿನ ಸದ್ಬಳಕೆ ಜತೆಗೆ, ಮುಂದಿನ ಒಂದು ವರ್ಷದಲ್ಲಿ ಇದರ ಒಂದಿಷ್ಟು ಲಾಭ ರೈತರಿಗೆ ದೊರೆಯಬೇಕೆಂಬುದು ನನ್ನ ಮಹದಾಸೆ.

– ರಾಜ್ಯದ ಪ್ರತಿಯೊಬ್ಬರಿಗೂ ನದಿಮೂಲದ ಶುದ್ಧ ಕುಡಿಯುವ ನೀರು ನೀಡಬೇಕೆಂಬ ಉದ್ದೇಶದೊಂದಿಗೆ ತೆಲಂಗಾಣ ಮಾದರಿಯಲ್ಲಿ ಜಲಧಾರೆ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ಪ್ರಾಯೋಗಿಕ ಅನುಷ್ಠಾನಕ್ಕೆ ಉತ್ತರದ ಎರಡು ಜಿಲ್ಲೆ ಆಯ್ಕೆ ಮಾಡಲಾಗಿದೆ. ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ತಲಾ 1,500 ಕೋಟಿ ರೂ. ವೆಚ್ಚದಲ್ಲಿ “ಜಲಧಾರೆ’ ಅನುಷ್ಠಾನಗೊಳ್ಳಲಿದೆ. ರಾಜ್ಯಾದ್ಯಂತ ಈ ಯೋಜನೆ ಅನುಷ್ಠಾನಕ್ಕೆ ಅಂದಾಜು 60 ಸಾವಿರ ಕೋಟಿ ರೂ. ಬೇಕಾಗುತ್ತವೆ. ಕುಡಿಯುವ ನೀರು ಯೋಜನೆಗೆ ಹಣದ ಕೊರತೆ ಇಲ್ಲವೇ ಇಲ್ಲ.

– ಉತ್ತರ ಕರ್ನಾಟಕದಲ್ಲಿ ಕೃಷಿ, ನೀರಾವರಿಯಷ್ಟೇ ಬಹುದೊಡ್ಡ ಸವಾಲು ಉದ್ಯೋಗ ಸೃಷ್ಟಿಯದ್ದಾಗಿದೆ. ಇದಕ್ಕಾಗಿ ಸಮ್ಮಿಶ್ರ ಸರಕಾರದ ಬಜೆಟ್‌ನಲ್ಲಿ ವಿವಿಧ ಉತ್ಪಾದನಾ ಕ್ಲಸ್ಟರ್‌ಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಉ.ಕ.ಕ್ಕೆ ಸಿಂಹಪಾಲು.

– ಬೀದರ ಜಿಲ್ಲೆಯಲ್ಲಿ ಕೃಷಿ ಸಲಕರಣೆಗಳ ಉತ್ಪಾದನೆ, ಕಲಬುರಗಿಯಲ್ಲಿ ಸೋಲಾರ್‌ ಸಲಕರಣೆ, ಕೊಪ್ಪಳದಲ್ಲಿ ಗೊಂಬೆಗಳು, ಬಳ್ಳಾರಿಯಲ್ಲಿ ಗಾರ್ಮೆಂಟ್‌, ಬೆಳಗಾವಿಯಲ್ಲಿ ಆಟೋಮೊಬೈಲ್‌, ಚಿತ್ರದುರ್ಗದಲ್ಲಿ ಎಲ್‌ಇಡಿ ಲೈಟುಗಳ ಉತ್ಪಾದನೆ ಕ್ಲಸ್ಟರ್‌ ಸ್ಥಾಪನೆಯೊಂದಿಗೆ ಉದ್ಯೋಗ ಸೃಷ್ಟಿಸಲಾಗುವುದು. ಇದಕ್ಕಾಗಿ ಸುಮಾರು 43 ಕಾರ್ಪೊರೆಟ್‌ ಕಂಪೆನಿಗಳ ವಿಷನ್‌ ಗ್ರೂಪ್‌ ಕಾರ್ಯನಿರ್ವಹಿಸುತ್ತಿದೆ. 2-3 ವರ್ಷಗಳಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಈ ಕ್ಲಸ್ಟರ್‌ಗಳ ಮೂಲಕ ಸುಮಾರು 10ಲಕ್ಷ ಉದ್ಯೋಗಗಳನ್ನು ಸೃಷ್ಟಿ ಮಾಡುವ ವಿಶ್ವಾಸ ನನ್ನದು.

ಕಿಮ್ಸ್‌ ಮೇಲ್ದರ್ಜೆಗೆ ಯೋಜನೆ: ಹುಬ್ಬಳ್ಳಿಯ ಕಿಮ್ಸ್‌ನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪಕ್ಷದ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಜತೆ ಚರ್ಚಿಸಿದ್ದೇನೆ. ಯೋಜನೆ ಸಿದ್ಧತೆಗೆ ಸೂಚಿಸಿದ್ದೇನೆ. ಬೆಂಗಳೂರಿನ ಯುವ ವೈದ್ಯರ ಸೇವೆ ಇಲ್ಲಿನ ಜನತೆಗೆ ಕಿಮ್ಸ್‌ ಮೂಲಕ ಸಿಗುವಂತೆ ಮಾಡಲು ಜಯದೇವ ಆಸ್ಪತ್ರೆ ಜತೆ ಚರ್ಚಿಸಲಾಗಿದೆ.

ಚುನಾವಣೆ ಮುಗಿದ ಕೂಡಲೇ ಕಿಮ್ಸ್‌ ಮೇಲ್ದರ್ಜೆಗೇರಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ. ಈ ಭಾಗದ ಬಡವರಿಗೆ ಕಿಮ್ಸ್‌ ಪ್ರಮುಖ ಆರೋಗ್ಯ ಕೇಂದ್ರವಾಗಿದ್ದು, ಉತ್ತಮ ಸೇವೆ ದೊರೆಯಬೇಕಾಗಿದೆ. ವಿಜಯಪುರ ಹಾಗೂ ಕಲಬುರಗಿಯಲ್ಲೂ ಜಯದೇವ ಆಸ್ಪತ್ರೆ ಶಾಖೆ ಆರಂಭಿಸಲು ಯೋಜಿಸಲಾಗಿದೆ.

ರೈತರ ಸಾಲ ಮನ್ನಾ ವಿಚಾರದಲ್ಲಿ ಈಗಾಗಲೇ 16 ಲಕ್ಷ ಕುಟುಂಬಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಇಷ್ಟಿದ್ದರೂ ಪ್ರಧಾನಿ ಮೋದಿಯವರು ಸಾಲ ಮನ್ನಾ ಬುರುಡೆ ಎಂಬಂತೆ ಹೇಳುವ ಮೂಲಕ ಸುಳ್ಳು ಹೇಳುವುದರಲ್ಲಿ ತಾವು ನಿಸ್ಸೀಮರು ಎಂಬುದನ್ನು ಅವರೇ ತೋರಿಸಿಕೊಂಡಿದ್ದಾರೆ. ಪ್ರಧಾನಿಯವರು ಇಂತಹ ಕೀಳು ಮಟ್ಟದ ಹೇಳಿಕೆಗೆ ಮುಂದಾಗುವುದು ಅವರ ಸ್ಥಾನಕ್ಕೆ ಶೋಭೆ ತರದು ಎಂಬುದು ನನ್ನ ಭಾವನೆ.
-ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.