ಚುನಾವಣೆ ನಂತರ ಬಿಎಸ್ವೈ ಪದಚ್ಯುತ
Team Udayavani, Apr 5, 2019, 6:05 AM IST
ದಾವಣಗೆರೆ: “ಚುನಾವಣೆ ನಂತರ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಗುವುದು’ ಎಂದು ಶಾಸಕ, ಹಿರಿಯ ಕಾಂಗ್ರೆಸಿಗ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಗುರುವಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ನಾಮಪತ್ರ ಸಲ್ಲಿಸಿದ ನಂತರ, “ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿಯ ಸಿದ್ದೇಶ್ವರ್ ಗೆದ್ದಾಗಿದೆ. ಗೆಲುವಿನ ಅಂತರದ ಮತಗಳ ಲೆಕ್ಕಾಚಾರ ನಡೆಯುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರಲ್ಲಾ’ ಎಂಬ ಸುದ್ದಿಗಾರರ ಪ್ರಶ್ನೆಗೆ,”ಈ ಚುನಾವಣೆ ಆದ ಮೇಲೆ ಯಡಿಯೂರಪ್ಪ ಎಲ್ಲಿರುತ್ತಾರೆ ಎಂದು ಕೇಳಿ. ಎಲೆಕ್ಷನ್ ಆದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕುತ್ತಾರೆ’ ಎಂದರು.