ಬಿಎಸ್ವೈರಿಂದ ಸೇಡಿನ ರಾಜಕಾರಣ: ಬೆಳಮಗಿ
Team Udayavani, Apr 14, 2019, 3:00 AM IST
ಶಿವಮೊಗ್ಗ: ಕೆಜೆಪಿ ಕಟ್ಟಿದಾಗ ಪಕ್ಷಕ್ಕೆ ಸೇರಿಲ್ಲವೆಂಬ ಕಾರಣಕ್ಕೆ ಹಾಗೂ ಬಂಜಾರ ಸಮುದಾಯ ನಿರ್ನಾಮ ಮಾಡುವ ಉದ್ದೇಶದಿಂದ ಬಿ.ಎಸ್.ಯಡಿಯೂರಪ್ಪ ಸೇಡಿನ ರಾಜಕಾರಣ ಮಾಡಿದರು ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ರೇವೂನಾಯಕ ಬೆಳಮಗಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ನನ್ನ ಅಣ್ಣನ ಸಮಾನರಾಗಿದ್ದರು. ಅವರ ಮೇಲೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ, ಯಾವುದೇ ತಪ್ಪು ಮಾಡದಿದ್ದರೂ ಬಿಜೆಪಿಯಿಂದ ಟಿಕೆಟ್ ತಪ್ಪಿಸಲಾಯಿತು.
ನನ್ನನ್ನು ರಾಜಕೀಯವಾಗಿ ಮುಗಿಸಬೇಕೆಂಬ ಉದ್ದೇಶದಿಂದ ಬಾಬುರಾವ್ ಚವ್ಹಾಣ್ ಅವರನ್ನು ಮುನ್ನೆಲೆಗೆ ತರಲಾಗಿತ್ತು ಎಂದು ಆಪಾದಿಸಿದರು. ಸಮಾಜದ ಕೆಳಸ್ತರದಲ್ಲಿರುವ ಬಂಜಾರಾ ಸಮುದಾಯವನ್ನು ನಿರ್ನಾಮ ಮಾಡುವ ಉದ್ದೇಶದಿಂದಲೇ ನನಗೆ ಟಿಕೆಟ್ ತಪ್ಪಿಸಲಾಗಿತ್ತು. ಆಗ ನನಗೆ ಟಿಕೆಟ್ ನೀಡದಿರಲು ಕಾರಣವೇನು?
ಅದಕ್ಕೆ ಅನುಸರಿಸಿರುವ ಮಾನದಂಡಗಳನ್ನು ಯಡಿಯೂರಪ್ಪನವರು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿದರು. ಈಗ ಕಲಬುರಗಿ ಲೋಕಸಭೆ ಕ್ಷೇತ್ರಕ್ಕೆ ಉಮೇಶ್ ಜಾಧವ್ ಅವರನ್ನು ಕರೆತರಲಾಗಿದೆ. ಅವರ ರಾಜಕೀಯ ಭವಿಷ್ಯವೂ ಹಾಳಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ