ಮೋದಿ ನಾಮಪತ್ರ ರದ್ದು ಮಾಡಿ
Team Udayavani, May 1, 2019, 6:15 AM IST
“40 ಟಿಎಂಸಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ’ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತು ಪಶ್ಚಿಮ ಬಂಗಾಲದ ತೃಣಮೂಲ ಕಾಂಗ್ರೆಸ್ ಪಕ್ಷವು ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಕುರಿತು ಪತ್ರ ಬರೆದಿರುವ ಟಿಎಂಸಿ, “ಮೋದಿ ಹೇಳಿಕೆಯು ಅವರು ಕುದುರೆ ವ್ಯಾಪಾರದಲ್ಲಿ ತೊಡಗಿರುವುದನ್ನು ಸೂಚಿಸಿದೆ. ಇಂಥ ಪ್ರಚೋದನಕಾರಿ ಮತ್ತು ಪ್ರಜಾಸತ್ತಾತ್ಮಕವಲ್ಲದ ಹೇಳಿಕೆ ನೀಡಿರುವ ಕಾರಣ ಮೋದಿಯವರ ನಾಮಪತ್ರವನ್ನೇ ರದ್ದು ಮಾಡಬೇಕು’ ಎಂದು ಮನವಿ ಮಾಡಿದೆ. ಮೋದಿ ಅವರು ನಾಚಿಕೆಬಿಟ್ಟು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರ ನಾಮಪತ್ರವನ್ನು ಅಸಿಂಧುಗೊಳಿಸಬೇಕು ಎಂದು ಟಿಎಂಸಿ ನಾಯಕಿ ಮಮತಾ ಆಗ್ರಹಿಸಿದ್ದಾರೆ.
ನಿಷೇಧ ಹೇರಿ: ಇದೇ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ನಾಯಕ ಅಖೀಲೇಶ್ ಯಾದವ್, “ಪ್ರಧಾನಿ ಮೋದಿ ಅವರಿಗೆ 72 ಗಂಟೆಗಳ ಕಾಲ ಪ್ರಚಾರಕ್ಕೆ ನಿಷೇಧ ಹೇರಬೇಕು’ ಎಂದು ಆಯೋಗವನ್ನು ಒತ್ತಾಯಿಸಿದ್ದಾರೆ.
ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ: ಪ್ರಚಾರದ ವೇಳೆ ಸಶಸ್ತ್ರ ಪಡೆಗಳ ಹೆಸರು ಬಳಕೆ ಮಾಡುವ ಮೂಲಕ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೀತಿ ಸಂಹಿತೆ ಉಲ್ಲಂ ಸಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ, ಈ ಕುರಿತು ಆಯೋಗದ ಪ್ರತಿಕ್ರಿಯೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ