“ಕೆಲ ಕ್ಷೇತ್ರಗಳಿಂದ ಅಭ್ಯರ್ಥಿಗಳು ಕಣಕ್ಕೆ’
Team Udayavani, Mar 19, 2019, 1:15 AM IST
ಬೆಂಗಳೂರು: ಕೋಲಾರ, ತುಮಕೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬಳ್ಳಾರಿ,ಚಿಕ್ಕೋಡಿ ಕ್ಷೇತ್ರಗಳಿಂದ ಜೆಡಿಯು
ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತಿಸಲಾಗಿದೆ.
ಕೆಲ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಗೆ ಮನವಿ ಮಾಡಿದ್ದು,ಸ್ವತಂತ್ರವಾಗಿಯೂ ಸ್ಪರ್ಧಿಸಲು ಸಿದ್ಧರಿದ್ದೇವೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಅಭ್ಯರ್ಥಿಗಳು 28 ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಿಲ್ಲ. ಆಯ್ದ ಕೆಲ ಕ್ಷೇತ್ರಗಳಲ್ಲಷ್ಟೇ ಕಣಕ್ಕಿಳಿಯಲಿದ್ದಾರೆ.
ಏಕಾಂಗಿಯಾಗಿ ಚುನಾವಣೆ ಎದುರಿಸುವ ಬದಲಿಗೆ ಬಿಜೆಪಿಯೊಂದಿಗೆ ಚುನಾವಣೆಗೆ ಹೋಗುವ ಚಿಂತನೆ ಇತ್ತು. ಅದರಂತೆ ಕೆಲ ಕ್ಷೇತ್ರ ಬಿಟ್ಟುಕೊಡುವಂತೆ ಬಿಜೆಪಿ ಬಳಿ ಮನವಿ ಕೂಡ ಮಾಡಲಾಗಿತ್ತು. ಆದರೆ ಬಿಜೆಪಿ ಹಿರಿಯ ನಾಯಕರು ಸ್ಪಂದಿಸಲಿಲ್ಲ. ಹೀಗಾಗಿ, ಸ್ವತಂತ್ರವಾಗಿ ಸ್ಪರ್ಧಿಸಲು ಸಿದಟಛಿವಿದ್ದು, ಈಗಾಗಲೇ ಸರ್ವೇ ನಡೆಸುವಂತೆ ಏಜೆನ್ಸಿಯೊಂದಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಕುಮಾರಸ್ವಾಮಿ ಹಾಗೂ ನಿಖೀಲ್ ಕುಮಾರಸ್ವಾಮಿ ನಮಗೆ ಪರಿಚಿತರು. ಅಂಬರೀಶ್ ಹಾಗೂ ಸುಮಲತಾ ನಮ್ಮ ಮನೆಯವರಿದ್ದಂತೆ. ಹಾಗಾಗಿ ಬೆಂಬಲ ಕೋರಿದರೆ ನೀಡಲಾಗುವುದು. ಕಾಂಗ್ರೆಸ್ ಪಕ್ಷವು ಸುಮಲತಾ ಅವರಿಗೆ ಟಿಕೆಟ್ ನೀಡಬಹುದಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ