ಜಾತಿ, ಹಣದ ಲೆಕ್ಕಾಚಾರ ಮಾಡಲ್ಲ
Team Udayavani, Mar 15, 2019, 2:39 AM IST
ಮೈಸೂರು: ಯಾವುದೇ ಪಕ್ಷಗಳ ಮೈತ್ರಿ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತೆ. ಹೀಗಾಗಿ ಅಭಿವೃದ್ಧಿಯೇ ನನ್ನ ಅಜೆಂಡಾ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಸಂಸದನಾಗಿ ಐದು ವರ್ಷ ಒಳ್ಳೆಯ ಕೆಲಸ
ಮಾಡಿದ್ದೇನೆ, ಹೀಗಾಗಿ ತಮ್ಮ ಅಸ್ತಿತ್ವಕ್ಕಾಗಿ ಮೈತ್ರಿ ಮಾಡಿಕೊಂಡಿರುವ ರಾಜಕೀಯ ಪಕ್ಷಗಳ ಬಗ್ಗೆ ಲೆಕೆಡಿಸಿಕೊಳ್ಳುವುದಿಲ್ಲ ಎಂದರು. ನಾನು ಜಾತಿ ಮತ್ತು ಹಣದ ಲೆಕ್ಕಾಚಾರ ಮಾಡುವುದಿಲ್ಲ. ಮೈತ್ರಿ ಪಕ್ಷಗಳ ಟಿಕೆಟ್ ಹಂಚಿಕೆಯನ್ನು ಇದೇನು ಸಿನಿಮಾ ಟಿಕೆಟ್ ಹಂಚಿಕೆ ಮಾಡಿದಂತೆಯೇ ಎಂದು ಲೇವಡಿ ಮಾಡಿದರು