ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು
Team Udayavani, Apr 10, 2019, 3:00 AM IST
ಬೆಂಗಳೂರು: ಯಾವುದೇ ರಾಜಕೀಯ ಪಕ್ಷ ಹಾಗೂ ನಾಯಕರು ಸೈನಿಕರ ಭಾವಚಿತ್ರ ಹಾಗೂ ಸೈನ್ಯದ ಚಿತ್ರಗಳನ್ನು ಬಳಸದಂತೆ ಆದೇಶ ನೀಡಿದ್ದರೂ ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗದ ಬಿಜೆಪಿ ಸಮಾವೇಶದಲ್ಲಿ ಸೈನಿಕರ ಸಾಧನೆಯ ಹೆಸರಿನಲ್ಲಿ ಮತ ಕೇಳಿ ಆಯೋಗದ ಆದೇಶ ಉಲ್ಲಂಘಿಸಿದ್ದಾರೆ.
ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಟರಾಜ್ಗೌಡ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ಮೋದಿ ಪ್ರಧಾನಿಯಾಗಿ ಸಂವಿಧಾನದ ರಕ್ಷಕರಾಗಿ ಅವರೇ ಕಾನೂನು ಉಲ್ಲಂಘನೆ ಮಾಡಿದ್ದಾರೆ.
ಚುನಾವಣಾ ಆಯೋಗ ಯಾವುದೇ ಹಿಂಜರಿಕೆ ಇಲ್ಲದೆ, ನೀತಿ ಸಂಹಿತೆ ಘನತೆ ಕಾಪಾಡಲು ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.