ಬಿಜೆಪಿ ಜತೆ ಕಾಂಗ್ರೆಸ್-ಜೆಡಿಎಸ್ ನಾಯಕರ ಚರ್ಚೆ
Team Udayavani, Mar 12, 2019, 12:30 AM IST
ಬೆಂಗಳೂರು:ಮಾಜಿ ಸಚಿವ ಚೆಲುವರಾಯಸ್ವಾಮಿ ಹಾಗೂ ಮಾಜಿ ಶಾಸಕ ಮಾಗಡಿ ಬಾಲಕೃಷ್ಣ ಅವರು ಸೋಮವಾರ ಬಿಜೆಪಿ ಶಾಸಕ ಅಶ್ವಥ್ನಾರಾಯಣ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಜತೆ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಇದೇ ಸಂದರ್ಭದಲ್ಲಿ ಮಂಡ್ಯದ ಹಾಲಿ ಜೆಡಿಎಸ್ ಸಂಸದ ಎಲ್.ಆರ್.ಶಿವರಾಮೇಗೌಡ ಸಹ ಹಾಜರಿದ್ದರು ಎಂದು ಹೇಳಲಾಗಿದೆ.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸದೆ ಜೆಡಿಎಸ್ನ ನಿಖೀಲ್ ಮೈತ್ರಿಕೂಟದ ಅಭ್ಯರ್ಥಿಯಾಗುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ನಾಯಕರು ಬೇರೆ ಯೋಚನೆಯಲ್ಲಿದ್ದಾರೆ. ಇದೇ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ ಶಿವರಾಮೇಗೌಡ, ಊಟಕ್ಕೆ ಹೋಟೆಲ್ಗೆ ಬಂದಿದ್ದೆ. ಅಲ್ಲಿ ಹಳೇ ಸ್ನೇಹಿತರು ಇದ್ದರು. ನಾವು ರಾಜಕೀಯ ಚರ್ಚೆ ಮಾಡಿಲ್ಲ. ನಾನು ದೇವೇಗೌಡರ ಕುಟುಂಬದ ಸಕ್ರಿಯ ಸದಸ್ಯ. ನಿಖೀಲ್ನನ್ನು ನಾವೆಲ್ಲ ಸೇರಿ ಗೆಲ್ಲಿಸುತ್ತೇವೆ ಎಂದು ಹೇಳಿದರು.