ಪ್ರಜ್ವಲ್‌ ಪರ ಕೆಲಸ ಅಸಾಧ್ಯವೆಂದ ಕಾಂಗ್ರೆಸ್ಸಿಗರು


Team Udayavani, Mar 21, 2019, 1:13 AM IST

prajwal-revanna.jpg

ಬೆಂಗಳೂರು: “ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದು ಹಾಸನ ಕಾಂಗ್ರೆಸ್‌ ಜಿಲ್ಲಾ ಮುಖಂಡರು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎದುರು ನೇರವಾಗಿಯೇ ಹೇಳಿ ಆಕ್ರೋಶ ಹೊರ ಹಾಕಿದ್ದಾರೆ.

ಎಚ್‌. ಡಿ. ರೇವಣ್ಣ ಅವರಿಂದ ಹಾಸನ ಕಾಂಗ್ರೆಸ್ಸಿಗರು ನೊಂದಿದ್ದಾರೆ, ಅವಮಾನಗೊಂಡಿದ್ದಾರೆ. ಯಾವುದೇ ಕೆಲಸಗಳು ನಡೆಯುತ್ತಿಲ್ಲ, ಕೇಸುಗಳನ್ನು ಹಾಕುತ್ತಿದ್ದಾರೆ. ಹಾಸನದಲ್ಲೇ ಸಮನ್ವಯತೆ ಮೊದಲು ಮಾಡಿ ಎಂಬ ಕಾರ್ಯಕರ್ತರ ಆಕ್ರೋಶಕ್ಕೆ ಎಚ್ಚೆತ್ತ ಸಿದ್ದರಾಮಯ್ಯ ಎಚ್‌ .ಡಿ.ರೇವಣ್ಣ ಅವರಿಗೆ ಕರೆ ಮಾಡಿದರೆ, ರೇವಣ್ಣ ಅವರ ಫೋನ್‌ ಸ್ವಿಚ್‌ ಆಫ್ ಆಗಿತ್ತು ಎಂದು ತಿಳಿದು ಬಂದಿದೆ. ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಕುರಿತು ನಡೆದ ಸಭೆಗೂ ಮುನ್ನಾ, ಹಾಸನ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಸಿದ್ದರಾಮಯ್ಯ ಅವರ ನಿವಾಸಕ್ಕೆತೆರಳಿ, ಸಚಿವ ಎಚ್‌.ಡಿ. ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅವರಿಂದ ಹಾಸನದಲ್ಲಿ ತಮಗಾಗುತ್ತಿರುವ ಅನ್ಯಾಯ ಮನವರಿಕೆ ಮಾಡಿಸಿದ್ದಾರೆ.

ನಂತರ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಮ್ಮುಖದಲ್ಲಿ ನಡೆದ ಸಭೆಯಲ್ಲೂ ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ  ಕಾಮಗಾರಿಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಯಾವುದೇ ಯೋಜನೆ ಗುತ್ತಿಗೆ ಸಿಗದಂತೆ ಮಾಡಿದ್ದು, ಎಲ್ಲವನ್ನೂ ರೇವಣ್ಣ ಹೇಳಿದವರಿಗೆ ನೀಡಲಾಗುತ್ತಿದೆ. ಯಾವುದಾದರೂ ಸಮಸ್ಯೆ ತೆಗೆದುಕೊಂಡು ಇಂಜನಿಯರ್‌ಗಳ ಬಳಿ ಹೋದರೆ, ಪ್ರಜ್ವಲ್‌ ರೇವಣ್ಣ ಅವರನ್ನು ಕೇಳಿಕೊಂಡು ಬನ್ನಿ ಎಂದು ನೇರವಾಗಿಯೇ ಹೇಳಿ ಕಳುಹಿಸುತ್ತಾರೆ. ಜಿಲ್ಲೆ ವ್ಯಾಪ್ತಿಗೆ ಬರುವ ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರ ಎಲ್ಲವನ್ನೂ ಜೆಡಿಎಸ್‌ ಕಾರ್ಯಕರ್ತರಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನೂ ಜೆಡಿಎಸ್‌ ಕಾರ್ಯಕರ್ತರಂತೆ ನೋಡಿಕೊಳ್ಳುವುದಾಗಿ ಎಚ್‌.ಡಿ. ರೇವಣ್ಣ ಅವರಿಂದ ಶೃಂಗೇರಿ ಶಾರದಾಂಬೆಯ ಮೇಲೆ ಆಣೆ ಮಾಡಿಸಿ, ದೇವೇಗೌಡರ ಸಮ್ಮುಖದಲ್ಲಿ ಮಾತುಕತೆ ನಡೆಸಿದರೆ, ಬೆಂಬಲ ಸೂಚಿಸಲಾಗುವುದು ಎಂದು ಮುಖಂಡರು ಸ್ಪಷ್ಟಪಡಿಸಿದ್ದಾರೆ. ಅಹವಾಲು ಆಲಿಸಿದ ನಾಯಕರು ರೇವಣ್ಣ ಜತೆ ಮಾತುಕತೆ ನಡೆಸಿ, ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೂ ಸಮಾನ ಗೌರವ ಮತ್ತು ಅವಕಾಶಗಳು ದೊರೆಯುವಂತೆ
ನೋಡಿಕೊಳ್ಳಲು ಸೂಚಿಸುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ ಆಣತಿ ಪಾಲಿಸುವಂತೆ ತಿಳಿಸಿದ್ದಾರೆ
ಎನ್ನಲಾಗಿದೆ.

ರಾಜ್ಯದಲ್ಲಿ ಮೈತ್ರಿ ಇದ್ದರೂ ಹಾಸನದಲ್ಲಿ ಅದು ಸಮರ್ಪಕವಾಗಿಲ್ಲ. ಹಾಸನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನಮ್ಮ ನೋವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾಯಕರು ರೇವಣ್ಣ
ಅವರೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರಿಗೆ ತೊಂದರೆ ಕೊಡುವುದಿಲ್ಲ ಎಂದು ರೇವಣ್ಣ ಬಹಿರಂಗವಾಗಿ ಹೇಳಬೇಕು.

● ಗಂಡಸಿ ಶಿವರಾಮ್‌, ಮಾಜಿ ಸಚಿವ.
 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.