ಬಿಜೆಪಿ ನಾಯಕರ ಜತೆ ಚರ್ಚೆ
Team Udayavani, Apr 17, 2019, 3:00 AM IST
ಹುಬ್ಬಳ್ಳಿ: ಅಮಿತ್ ಶಾ ಅವರು ಮಂಗಳವಾರ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಉತ್ತರ ಕರ್ನಾಟಕದ ಬಿಜೆಪಿ ಮುಖಂಡರೊಂದಿಗೆ ಪ್ರಸಕ್ತ ರಾಜಕೀಯ ವಿದ್ಯಮಾನ ಹಾಗೂ ಲಿಂಗಾಯತ ಸಮಾಜ ಕುರಿತಾಗಿ ಒಂದು ತಾಸಿಗೂ ಅಧಿಕ ಕಾಲ ಚರ್ಚೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಸೋಮವಾರ ತಡರಾತ್ರಿ ನಗರಕ್ಕಾಗಮಿಸಿದ ಅಮಿತ್ ಶಾ, ಇಲ್ಲಿನ ಗೋಕುಲ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ತಂಗಿದ್ದರು.
ಮಂಗಳವಾರ ಬೆಳಗ್ಗೆ ಅವರು ವಾಸ್ತವ್ಯ ಮಾಡಿದ್ದ ಹೋಟೆಲ್ನ ಕೊಠಡಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಿದರು. ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮಾಹಿತಿ ಪಡೆದರು.
ಲಿಂಗಾಯತ ಸಮಾಜ ಬಗ್ಗೆ ಕಾಂಗ್ರೆಸ್ನ ಮುಖಂಡರು ತಳೆದಿರುವ ಧೋರಣೆ ಹಾಗೂ ಸ್ಥಳೀಯ ಲಿಂಗಾಯತ ಮುಖಂಡರು ಆ ಕುರಿತು ಹೊಂದಿರುವ ಅಭಿಪ್ರಾಯಗಳ ಬಗ್ಗೆಯೂ ಮಾಹಿತಿ ಕಲೆ ಹಾಕಿದರು.
ಪಕ್ಷದ ಪರ ಫಲಿತಾಂಶಗಳಿದ್ದರೂ ನಿರ್ಲಕ್ಷ ತೋರದೆ ಕೊನೆ ಗಳಿಗೆಯವರೆಗೂ ಎಚ್ಚರದಿಂದ ಹೋರಾಟ ಮಾಡಿ, ಪ್ರಚಾರ ನಡೆಸಿ ಎಂದು ಸೂಚಿಸಿದರು ಎನ್ನಲಾಗಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ, ಆರ್ಎಸ್ಎಸ್ ಮುಖಂಡ ಅರುಣಜೀ ಅವರು ಶಾ ಅವರೊಂದಿಗೆ ಪ್ರತ್ಯೇಕವಾಗಿ ಅರ್ಧ ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ