ದಿಢೀರ್‌ ಬಂದ ಮಂಡ್ಯ ಗೌಡ್ತಿ, ಕಳವಳ ಆಗೈತಿ


Team Udayavani, Mar 20, 2019, 1:19 AM IST

sumalata.jpg

ಮಂಡ್ಯ: ಜೆಡಿಎಸ್‌ ಭದ್ರ ಕೋಟೆ ಎನಿಸಿರುವ ಮಂಡ್ಯ ಜಿಲ್ಲೆಗೆ ಸುಮಲತಾ ಅವರ ಅನಿರೀಕ್ಷಿತ ಪ್ರವೇಶ ಕ್ಷೇತ್ರದ ಚುನಾವಣೆಗೆ, ಜಿಲ್ಲಾ ರಾಜಕಾರಣಕ್ಕೆ ಹೊಸ ತಿರುವನ್ನು ತಂದುಕೊಟ್ಟಿದೆ. ಅಲ್ಲದೆ ದೇವೇಗೌಡರ ಮೊಮ್ಮಗ ನಿಖೀಲ್‌ ಸ್ಪರ್ಧೆಯಿಂದ ಕುಟುಂಬ ರಾಜಕಾರಣದ ಜತೆಗೆ ಸ್ಥಳೀಯ ನಾಯಕತ್ವ ಹೆಚ್ಚು ಮಹತ್ವ ಪಡೆದು ಕೊಂಡಿದೆ. ಹೀಗಾಗಿ ಈ ಚುನಾವಣೆಯಲ್ಲಿ ಕ್ಷೇತ್ರದ ಸಮಸ್ಯೆ, ಅಭಿ ವೃದ್ಧಿ ವಿಚಾರ ಗೌಣವಾಗಿದ್ದು, ಸುಮಲತಾ ಸ್ಪರ್ಧೆ ಪ್ರಮುಖ ವಿಷಯ. ಜತೆಗೆ ಮೈತ್ರಿ ಸರಕಾರದ ನಾಯಕರಿಗೆ ಇರಿಸು ಮುರುಸನ್ನೂ ಉಂಟು ಮಾಡಿದೆ.

ಸಮಸ್ಯೆಗಳು ಗೌಣ
ಜಿಲ್ಲೆಯ ರೈತರನ್ನು ಹಲವು ಸಮಸ್ಯೆಗಳು ಕಾಡುತ್ತಿವೆ. ಕುಡಿಯಲು, ನೀರಾವರಿಗೆ ನೀರಿನ ಸಮಸ್ಯೆ ಇದ್ದದ್ದೇ. ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಗಂಭೀರ ಪ್ರಯತ್ನ ನಡೆದಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ. ಕೆಆರ್‌ಎಸ್‌ ಪಕ್ಕದಲ್ಲೇ ಗಣಿಗಾರಿಕೆ ನಡೆದಿದ್ದರೂ ತಡೆಯುವ ಕೆಲಸವಾಗುತ್ತಿಲ್ಲ. ಈ ಮಧ್ಯೆ, ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಕೆಆರ್‌ಎಸ್‌ನಲ್ಲಿ ಮನೋರಂಜನ ಪಾರ್ಕ್‌ ನಿರ್ಮಿಸಲು ರಾಜ್ಯ ಸರಕಾರ ಮುಂದಾ ಗಿದ್ದು, ಇದು ಸ್ಥಳೀಯರ ಪ್ರತಿಭಟನೆಗೂ ಕಾರಣವಾಗಿದೆ.

ಅನಿರೀಕ್ಷಿತ ಪ್ರವೇಶದ ಆತಂಕ
ಸುಮಲತಾ ರಾಜ ಕೀಯ ಪ್ರವೇಶವನ್ನು ಯಾರೂ ನಿರೀಕ್ಷಿಸಿರ ಲಿಲ್ಲ. ಅವರ ಆಗಮನ ದಿಂದ ಜೆಡಿಎಸ್‌ಗೆ
ಸುಲಭ ತುತ್ತಾಗುತ್ತಿದ್ದ ಕ್ಷೇತ್ರ ಈಗ ಬಿಸಿತುಪ್ಪವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಈಗಾಗಲೇ ಜಿಲ್ಲಾದ್ಯಂತ ಸಂಚರಿಸುತ್ತಾ, ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾರೆ. ಪುತ್ರ ನಿಖೀಲ್‌ರನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿ ಪೂರ್ವತಯಾರಿ ಆರಂಭಿಸಿದ್ದ ಸಂದರ್ಭದಲ್ಲೇ ಸುಮಲತಾ ಸ್ಪರ್ಧೆಗೆ ಆಸಕ್ತಿ ವಹಿಸಿದ್ದು ಜೆಡಿಎಸ್‌ ನಾಯಕ ರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿ ಅಸ್ತ್ರ
ಬಿಜೆಪಿ, ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆಯೋ ಇಲ್ಲ ಸುಮಲತಾರನ್ನು ಬೆಂಬಲಿಸುತ್ತದೆಯೋ ಎಂಬುದು ಸ್ಪಷ್ಟವಾಗಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಒಗ್ಗೂಡಿ ಜೆಡಿಎಸ್‌ ಕೈ ಹಿಡಿದಿತ್ತು. ಕುಮಾರಸ್ವಾಮಿ ಜಿಲ್ಲೆಯ ಅಭಿವೃದ್ಧಿಗೆ ಕೋಟ್ಯಂತರ ರೂ. ಚೆಲ್ಲಿದರೂ ಪ್ರಗತಿಯ ಚಿತ್ರಣ ಕಾಣುತ್ತಿಲ್ಲ. ಬಹು ನಿರೀಕ್ಷಿತ ರೈತರ ಸಾಲಮನ್ನಾದಲ್ಲೂ ಸ್ಪಷ್ಟತೆ ದೊರಕಿಲ್ಲ. 9 ತಿಂಗಳಿನಿಂದ ಮಂಡ್ಯ ರಸ್ತೆಗಳ ಸ್ಥಿತಿಯೂ ಬದಲಾಗಿಲ್ಲ. ಇದೆಲ್ಲವೂ ಬಿಜೆಪಿಗೆ ಚುನಾವಣಾ ಅಸ್ತ್ರ. 

ಸುಮಲತಾ ಅಸ್ತ್ರ
ಮಂಡ್ಯದ ಸೊಸೆ ಎಂಬ ಅಭಿಮಾನ, ಸ್ಥಳೀಯ ಕಾಂಗ್ರೆಸ್‌ ನಾಯಕರ ಪರೋಕ್ಷ ಬೆಂಬಲ, ಚಿತ್ರರಂಗದ ಒಕ್ಕೊರಲ ಬೆಂಬಲ, ಅಂಬರೀಶ್‌ ಅಭಿಮಾನಿ ಬಳಗ, ಪ್ರಬುದ್ಧ ಮಾತು, ನಡೆ ಸುಮಲತಾರ ಪ್ಲಸ್‌ ಪಾಯಿಂಟ್‌.

ಜೆಡಿಎಸ್‌ ಚುನಾವಣ ಅಸ್ತ್ರ
ಒಕ್ಕಲಿಗ ಸಮುದಾಯ ಪಕ್ಷದ ಹಿಂದಿರುವುದು, ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಶಾಸಕರಿರುವುದು, ರಾಜ್ಯದಲ್ಲಿ ಅಧಿಕಾರ, ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಕೋಟ್ಯಂತರ ರೂ. ಚೆಲ್ಲಿರುವುದು, ಪ್ರಬಲ ಸಂಘಟನೆ, ದೇವೇಗೌಡರ ವರ್ಚಸ್ಸು ಜೆಡಿಎಸ್‌ಪ್ಲಸ್‌ ಪಾಯಿಂಟ್‌.

ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.