ದೇವೇಗೌಡರು ಕಣ್ಣೀರು ಕಹಾನಿ ಬಿಡಲಿ: ಈಶ್ವರಪ್ಪ
Team Udayavani, Apr 10, 2019, 3:00 AM IST
ಬಾಗಲಕೋಟೆ: “ದೇವೇಗೌಡರ ಕುಟುಂಬದವರು ಪ್ರತಿ ಬಾರಿ ಕಣ್ಣೀರು ಕಹಾನಿ ಸೃಷ್ಟಿ ಮಾಡುತ್ತಾರೆ. ಇದು ಏಕೆ ಎಂಬುದು ಹೇಳಲಿ. ದೇಶದ ಸೈನಿಕರ ಸಾವು ಸಂಭವಿಸಿದಾಗ, ರೈತ ಆತ್ಮಹತ್ಯೆ ಮಾಡಿಕೊಂಡಾಗ ಕಣ್ಣೀರು ಹಾಕಲಿಲ್ಲ. ಐಟಿ ದಾಳಿ ಆಯಿತು ಎಂದು ಕಣ್ಣೀರು ಹಾಕ್ತಿದ್ದಾರೆಯೇ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ದೇವೇಗೌಡ, ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ಕಣ್ಣೀರು ಹಾಕುತ್ತಾರೆ. ಪುಲ್ವಾಮಾದಲ್ಲಿ ಸೈನಿಕರ ಹತ್ಯೆಯಾದಾಗ ಕಣ್ಣೀರು ಹಾಕಲಿಲ್ಲ. ಬರದಿಂದ ಕಂಗಾಲಾಗಿ ರೈತ ಆತ್ಮಹತ್ಯೆ ಮಾಡಿಕೊಂಡಾಗಲೂ ಕಣ್ಣೀರು ಬರಲಿಲ್ಲ.
ಐಟಿ ದಾಳಿಯಲ್ಲಿ ಸಿಕ್ಕಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಯಾವ ವಿಷಯಕ್ಕೆ ಕಣ್ಣೀರು ಹಾಕುತ್ತಿದ್ದಾರೆ ಎಂಬುದು ದೇವೇಗೌಡರ ಕುಟುಂಬದವರೇ ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು. ನಮ್ಮದು ಕುಟುಂಬ ರಾಜಕಾರಣ ಅಲ್ಲ ಎಂದು ದೇವೇಗೌಡರು ಹೇಳುತ್ತಿದ್ದಾರೆ.
ಹಾಗಾದರೆ, ಕುಟುಂಬ ರಾಜಕಾರಣ ಅಂದ್ರೆ ಏನೆಂದು ಅವರೇ ಹೇಳಲಿ. ದೇವೇಗೌಡರು, ಇಬ್ಬರು ಮೊಮ್ಮಕ್ಕಳು ಚುನಾವಣೆಗೆ ನಿಂತಿದ್ದಾರೆ. ಒಬ್ಬ ಪುತ್ರ ಸಿಎಂ ಆಗಿದ್ದಾರೆ. ಮತ್ತೂಬ್ಬ ಪುತ್ರ ಸಚಿವರಿದ್ದಾರೆ. ಸೊಸೆ ಶಾಸಕಿಯಾಗಿದ್ದಾರೆ. ತಮ್ಮ ಕುಟುಂಬದ ಇನ್ನೂ ಎಷ್ಟು ಜನರನ್ನು, ಏನು ಮಾಡಬೇಕೆಂದಿದ್ದಾರೋ ಗೊತ್ತಿಲ್ಲ. ಇದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ