ರೇವಣ್ಣ, ದತ್ತ ಎದುರು ಕಣ್ಣೀರಿಟ್ಟ ಧರ್ಮೇಗೌಡ
Team Udayavani, Mar 1, 2019, 1:34 AM IST
ಕಡೂರು: ಇಲ್ಲಿನ ಕ್ಷೇತ್ರದ ಜನ ಒಳ್ಳೆಯವರು.ಇಂತಹ ಕ್ಷೇತ್ರದಲ್ಲಿ ಕೆಲಸ ಮಾಡೋಣ ಎಂದು ಆಕಾಂಕ್ಷಿಯಾಗಿದ್ದೆ. ಆದರೆ, ದೇವೇಗೌಡರು ಇಂದು ವೈ.ಎಸ್.ವಿ.ದತ್ತ ಅವರನ್ನು ಕಡೂರು ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಗೌಡರ ಮಾತಿಗೆ ಬೆಲೆ ನೀಡಿ ಗೌರವಿಸುವ ಕುಟುಂಬ ನಮ್ಮದು ಎನ್ನುತ್ತಾ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೆಗೌಡ ಬಿಕ್ಕಿ ಬಿಕ್ಕಿ ಅತ್ತರು. ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
“ನಮ್ಮ ಕುಟುಂಬಕ್ಕೆ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ರೇವಣ್ಣ ಅವರು ರಾಜಕೀಯ ಪುನರ್ ಜನ್ಮ ನೀಡಿದ್ದಾರೆ. ಜಿಲ್ಲೆಯಲ್ಲಿ ಲಕ್ಷ್ಮಯ್ಯನವರ ಮಕ್ಕಳ ರಾಜಕೀಯ ಜೀವನವೇ ಮುಗಿಯಿತು ಎಂದು ಆಡಿಕೊಳ್ಳುತ್ತಿದ್ದಾಗ ನಮಗೆ ವಿಧಾನ ಪರಿಷತ್ ಸ್ಥಾನ ನೀಡಿ, ಉಪ ಸಭಾಪತಿ ಹುದ್ದೆ ನೀಡಿದ್ದಾರೆ. ಈ ವಿಷಯದಲ್ಲಿ ಗೌಡರ ಕುಟುಂಬದ ಪಾತ್ರವನ್ನು ಸ್ಮರಿಸುತ್ತೇನೆ’ ಎನ್ನುತ್ತಾ ಭಾವೋದ್ವೇಗಕ್ಕೊಳಗಾದರು.
ಕೂಡಲೆ ಸಚಿವ ರೇವಣ್ಣ ಮತ್ತು ದತ್ತ ಅವರ ಸಮೀಪಕ್ಕೆ ತೆರಳಿ ಅವರನ್ನು ಸಂತೈಸಿದರು. ನಂತರ, ಮಾತು ಮುಂದುವರಿಸಿದ ಅವರು, ಪ್ರಜ್ವಲ್ ರೇವಣ್ಣನವರು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿ, ಅವರನ್ನು ಗೆಲ್ಲಿಸುವ ಶಕ್ತಿ ನಮ್ಮಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…