ಡ್ರೀಂ ಗರ್ಲ್ಗೆ ಕೃಷ್ಣ ಕೃಪೆ ಬಿದ್ದೀತೇ?


Team Udayavani, Apr 11, 2019, 6:00 AM IST

g-21

ಪವಿತ್ರ ಕ್ಷೇತ್ರಗಳಾಗಿರುವ ಮಥುರಾ, ವೃಂದಾವನಗಳಿಂದ ಗುರುತಿಸಿಕೊಂಡಿರುವ ಮಥುರಾ ಲೋಕಸಭಾ ಕ್ಷೇತ್ರಕ್ಕೆ ಸ್ಥಳೀಯರು ಸಂಸತ್‌ ಸದಸ್ಯರಾಗಿದ್ದುದಕ್ಕಿಂತ ಹೊರಗಿನ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಅದಕ್ಕೆ ಹಾಲಿ ಸಂಸದೆ, ಕನಸಿನ ಕನ್ಯೆ ಹೇಮಮಾಲಿನಿಯವರೂ ಹೊರತಲ್ಲ. ಕೆಲ ದಿನಗಳ ಹಿಂದೆ ಪ್ರಚಾರ ನಡೆಸಿದ ಸಂದರ್ಭದಲ್ಲಿ ತಾನು 250 ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.

1991   -1996, 1996-1998, 1998-1999, 1999-2004ರ ಸಾಲಿನಲ್ಲಿ ಬಿಜೆಪಿ ಅಭ್ಯರ್ಥಿ ಈ ಕ್ಷೇತ್ರದಿಂದ ಗೆದ್ದಿದ್ದರು. 2004-2009ರ ಸಾಲಿನಲ್ಲಿ ಕಾಂಗ್ರೆಸ್‌ನ ಮಾನವೇಂದ್ರ ಸಿಂಗ್‌ ಗೆದ್ದಿದ್ದರೆ, 2009-2014ನೇ ಸಾಲಿನಲ್ಲಿ ರಾಷ್ಟ್ರೀಯ ಲೋಕದಳದ ಜಯಂತ್‌ ಚೌಧರಿ ಗೆದ್ದಿದ್ದರು.

ಹಿಂದಿನ ಲೋಕಸಭೆ ಚುನಾವಣೆ ಯಲ್ಲಿ ಹೇಮಮಾಲಿನಿ ಎಂಬ ಪಕ್ಷೇತರ ಅಭ್ಯರ್ಥಿಯೂ 10,158 ಮತಗಳನ್ನು ಪಡೆದಿದ್ದರು! ಈ ಬಾರಿ ಕಾಂಗ್ರೆಸ್‌ನ ಮಹೇಶ್‌ ಪಾಠಕ್‌, ಆರ್‌ಎಲ್‌ಡಿಯ ನರೇಂದ್ರ ಸಿಂಗ್‌ ಕನಸಿನ ಕನ್ಯೆಯ ಎದುರಾಳಿಗಳು.

ಹಾಲಿ ಸಂಸದೆ 2014-2019ರ ಅವಧಿಯಲ್ಲಿ ಕ್ಷೇತ್ರದ ಜನತೆಗೆ ಸಿಗುತ್ತಿರಲಿಲ್ಲ ಎಂಬ ಆರೋಪವನ್ನು ಪ್ರತಿಪಕ್ಷಗಳಿಂದ ಎದುರಿಸುತ್ತಿದ್ದಾರೆ. ಹೊರಗಿನವರು ವರ್ಸಸ್‌ ಬೃಜ್‌ವಾಸಿ ಎಂದೇ ಈಗ ಕ್ಷೇತ್ರದಲ್ಲಿ ಹೋರಾಟ ನಡೆಯುತ್ತಿದೆ. ನಿರುದ್ಯೋಗ, ರೈತರ ಸಮಸ್ಯೆ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯದೇ ಇರುವುದು ಪ್ರಧಾನ ವಿಚಾರಗಳಾಗಿವೆ. ಆದರೆ ಅಂಗಡಿ ಮಾಲೀಕ ಹೇಳುವ ಪ್ರಕಾರ ಹೇಮಮಾಲಿನಿ ಬಗ್ಗೆ ಗೊತ್ತಿಲ್ಲ. ಆದರೆ ನರೇಂದ್ರ ಮೋದಿ ಬಗ್ಗೆ ವಿಶ್ವಾಸವಿದೆ. ಕೆಲವೊಮ್ಮೆ ನಮ್ಮ ಸಮಸ್ಯೆ ತ್ಯಾಗಮಾಡಿ ದೇಶದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎನ್ನುತ್ತಾರೆ. ಛಟ್ಟಾ ಎಂಬ ಊರಿನ ನಿವಾಸಿ ಪ್ರಕಾರ 2014ರಲ್ಲಿ ಹೇಮಮಾಲಿನಿ ಅವರ ಗ್ರಾಮಕ್ಕೆ ಬಂದ ಬಳಿಕ ಇದುವರೆಗೆ ಬರಲಿಲ್ಲವಂತೆ.

ಜಾತಿ ಲೆಕ್ಕಾಚಾರ: ಒಟ್ಟು ಜನಸಂಖ್ಯೆಯ ಶೇ.19.9 ಮಂದಿ ಎಸ್‌ಸಿ ಸಮುದಾಯ, ಎಸ್‌ಟಿ ಸಮುದಾಯ ಶೇ.0.1ರಷ್ಟು ಇದ್ದಾರೆ. ಇದರ ಜತೆಗೆ ಜಾಟ್‌, ಮುಸ್ಲಿಂ, ಒಬಿಸಿ, ಠಾಕೂರ್‌ ಸಮುದಾಯದವರು ಯಾವುದೇ ಅಭ್ಯರ್ಥಿಯ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ.70ರಷ್ಟು ಮಂದಿ ಜೀವಿಸುತ್ತಿದ್ದರೆ, ಶೇ.29.7ರಷ್ಟು ಮಂದಿ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

2014ರ ಫ‌ಲಿತಾಂಶ
ಹೇಮಮಾಲಿನಿ (ಬಿಜೆಪಿ) 5,74,633
ಜಯಂತ್‌ ಚೌಧರಿ (ಆರ್‌ಎಲ್‌ಡಿ) 2,43, 890

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.