ಖರ್ಗೆ ಕಲಬುರಗಿಗೆ ವಿನಾಶಕಾರಿ: ಕಮಲ’ ಪಾಳಯ ಸೇರಿ ಡಾ| ರಡ್ಡಿ


Team Udayavani, Mar 22, 2019, 11:38 PM IST

21.jpg

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಕಲಬುರಗಿಗೆ ವಿನಾಶಕಾರಿ. ಅವರಿಗೆ ಸ್ವಾರ್ಥ ಹೆಚ್ಚಾಗಿದ್ದು, ಅಲ್ಲಿನ ಶಾಸಕರಾರೂ ಲೆಕ್ಕಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಜನೋಪಕಾರಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವರ ಕಾರ್ಯ ಬೆಂಬಲಿಸಲು ಬಿಜೆಪಿ ಸೇರಿದ್ದೇನೆ ಎಂದು ಮಾಜಿ ಸಚಿವ ಡಾ|ಎ.ಬಿ.ಮಾಲಕರಡ್ಡಿ ಹೇಳಿದರು.

ರಾಜ್ಯ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಕಲಬುರಗಿಯಲ್ಲಿ ಯಾವುದೇ ತೀರ್ಮಾನವಾಗಬೇಕಾದರೂ ಖರ್ಗೆಯವರ ಮೂಲಕವೇ ನಡೆಯಬೇಕು. ಸ್ಥಳೀಯ ಶಾಸಕರು ಲೆಕ್ಕಕ್ಕಿಲ್ಲ. ನಾನು ಆರು ಬಾರಿ ಶಾಸಕನಾಗಿದ್ದರೂ ಅವಕಾಶ ನೀಡದೆ ತಮ್ಮ ಪುತ್ರನನ್ನು ಸಚಿವರನ್ನಾಗಿ ಮಾಡಿದರು. ಹಿಂದಿನ ಕಾಂಗ್ರೆಸ್‌ ಸರಕಾರದಲ್ಲಿ ಪುತ್ರನನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವ ಮೂಲಕ ಹಿರಿಯರು ಅವರ ಪುತ್ರನ ಕೈಕೆಳಗೆ ಕೆಲಸ ಮಾಡುವ ಮುಜುಗರ ಸೃಷ್ಟಿಸಿದ್ದರು. ತಮ್ಮ ಕುಟುಂಬದವರಿಗೆ ಮಾತ್ರ ಪ್ರೋತ್ಸಾಹ ಮಾಡುತ್ತಾರೆ. ಅವರ ನಾಯಕತ್ವ ವಿನಾಶಕಾರಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಯಡಿಯೂರಪ್ಪ ಮಾತನಾಡಿ, ಹಿರಿಯ ಮುತ್ಸದ್ದಿ ಡಾ|ಎ.ಬಿ.ಮಾಲಕರಡ್ಡಿ ಸಹಿತ ಇತರರ ಸೇರ್ಪಡೆಯಿಂದ ಪಕ್ಷಕ್ಕೆ ಆನೆಬಲ ಬಂದಿದೆ. ಹಲವು ನಾಯಕರು ಪಕ್ಷ ಸೇರಲು ಅಪೇಕ್ಷಿಸುತ್ತಿದ್ದು, ಅವರಿಗೂ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದರು. ಕಲಬುರಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಹಲವು ನಾಯಕರು ಬಿಜೆಪಿ ಸೇರಿದರು.

ದೊಡ್ಡ ಅಂತರದಲ್ಲಿ ಗೆಲುವು
ರಾಜ್ಯದ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆಯಾಗಿದೆ. ಉಳಿದ 7 ಕ್ಷೇತ್ರ ಗಳ ಅಭ್ಯರ್ಥಿಗಳ ಪಟ್ಟಿಯೂ ಸದ್ಯದಲ್ಲೇ ಬಿಡುಗಡೆ ಯಾಗಲಿದೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಡಾ| ಉಮೇಶ್‌ ಜಾಧವ್‌ ಅವರು ಎಲ್ಲ ಸಮುದಾಯ, ವರ್ಗದವರ ಒಪ್ಪಿತ ಅಭ್ಯರ್ಥಿ ಎನಿಸಿದ್ದಾರೆ. ಅವರು ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.