ಕುಡಿಯುವ ನೀರು, ಮರಳು ಸಮಸ್ಯೆ ಪರಿಹಾರ ಯತ್ನ


Team Udayavani, Mar 20, 2019, 1:00 AM IST

kudiyuva-neeru.jpg

ಉಡುಪಿ: ಉಡುಪಿ ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಸಿಆರ್‌ಝಡ್‌ ವ್ಯಾಪ್ತಿಯಲ್ಲಿರುವ ಮರಳು ಸಮಸ್ಯೆಯ ಪರಿಹಾರಕ್ಕಾಗಿ ಜಿಲ್ಲಾಡಳಿತ ತನ್ನ ಮಿತಿಯಲ್ಲಿ ಪ್ರಯತ್ನ ನಡೆಸಲಿದೆ. ಈ ಕಾರಣಗಳಿಗೆ ಮತದಾನ ಬಹಿಷ್ಕಾರಕ್ಕೆ ಯಾರೂ ಮುಂದಾಗಬಾರದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ,  ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮನವಿ ಮಾಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, “ಜಿಲ್ಲೆಯ 4 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಾಗೂ ಇತರ ಕೆಲವೆಡೆ ಸಾಧಾರಣ ಸಮಸ್ಯೆ ಇರುವ ಮಾಹಿತಿ ಬಂದಿದೆ. ಸ್ಥಳೀಯ ಮಟ್ಟದಲ್ಲಿಯೇ ಇಂತಹ ಸಮಸ್ಯೆ ಪರಿಹರಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಅಗತ್ಯವಿರುವಲ್ಲಿ ಕೊಳವೆಬಾವಿ, ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ  ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ. ಮರಳು ಸಮಸ್ಯೆಯನ್ನು ಕಾನೂನಿನ ಇತಿಮಿತಿಯಲ್ಲಿ ಬಗೆಹರಿಸಲಾಗುವುದು’ ಎಂದರು.

“ಸರ್ವಜನೋತ್ಸವ’ ಸಂಘಟಕರ ವಿರುದ್ಧ ಕ್ರಮ 
ನೀತಿಸಂಹಿತೆ ಜಾರಿ ಬಳಿಕವೂ ರಾಜಕೀಯ ಪಕ್ಷಗಳ ಪಾಲ್ಗೊಳ್ಳುವಿಕೆಯಲ್ಲಿ ಸಹಬಾಳ್ವೆ ಸಂಘಟನೆ ವತಿಯಿಂದ ನಡೆದ ಸರ್ವಜನೋತ್ಸವ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಕುರಿತು ಪ್ರಶ್ನಿಸಿದಾಗ “ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲಾಗಿತ್ತು. ಆದರೆ ಅದರಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಕೂಡ ಪಾಲ್ಗೊಂಡಿರುವ ದೂರುಗಳು ಬಂದಿವೆ. ಕಾರ್ಯಕ್ರಮವನ್ನು ಚುನಾವಣಾ ವೀಕ್ಷಕರು ಖುದ್ದಾಗಿ ಗಮನಿಸಿದ್ದಾರೆ. ವೀಡಿಯೋ ಚಿತ್ರೀಕರಣ ಕೂಡ ಇದೆ. ನಿಯಮ ಉಲ್ಲಂಘನೆ ಖಚಿತವಾದರೆ ಆ ಕಾರ್ಯಕ್ರಮದ ಖರ್ಚನ್ನು ರಾಜ ಕೀಯ ಪಕ್ಷಗಳ ವೆಚ್ಚದ ಖಾತೆಗೆ ಹಾಕಲಾಗುವುದು. ಸಂಘಟಕರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದರು.

ಸ್ವೀಪ್‌ ಮೂಲಕ ನಡೆಸಿದ ಮತದಾನ ಪ್ರಾತ್ಯಕ್ಷಿಕೆಯಲ್ಲಿ ಇದುವರೆಗೆ 40,000 ಮಂದಿ ಅಣಕು ಮತದಾನ ಮಾಡಿದ್ದಾರೆ. ಸುವಿಧಾ, ಚುನಾವಣಾ ಸೇರಿದಂತೆ ವಿವಿಧ ಆ್ಯಪ್‌ಗ್ಳು ಹಾಗೂ ವೋಟರ್‌ ಹೆಲ್ಪ್ಲೈನ್‌ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

42 ಪ್ರಕರಣ; 17.81 ಲ.ರೂ. ಮದ್ಯ ವಶ
ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಇದುವರೆಗೆ 42 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದರಲ್ಲಿ 39 ಅಬಕಾರಿ ಇಲಾಖೆಗೆ ಹಾಗೂ 3 ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳು. 17.81 ಲ.ರೂ. ಮೌಲ್ಯದ ಒಟ್ಟು 5,429 ಲೀ. ಮದ್ಯ, 1.50 ಲ.ರೂ ನಗದು, 1 ಟ್ರಕ್‌, 5 ದ್ವಿಚಕ್ರ ವಾಹನಗಳು, 30 ಟನ್‌ ಅಕ್ಕಿ, 3 ಲಾರಿಗಳು, 1 ಬೊಲೆರೊ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದಲ್ಲದೆ ಸಿ ವಿಜಿಲ್‌ ಆ್ಯಪ್‌ ಮೂಲಕ 29 ಹಾಗೂ ಹೆಲ್ಪ್ಲೈನ್‌ ಮೂಲಕ 22 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೈನಿಕರಿಗೆ ಇಟಿಪಿಬಿಎಸ್‌ ತಂತ್ರಜ್ಞಾನ
ಸೈನಿಕರು ಇಟಿಪಿಬಿಎಸ್‌ ತಂತ್ರಾಂಶದ ಮೂಲಕ ಮತ ಚಲಾಯಿಸಲು ಅನುಕೂಲ ವಾಗುವಂತೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ 24 ಗಂಟೆಗಳೊಳಗೆ ಸೈನ್ಯದ ಘಟಕದ ಮುಖ್ಯಸ್ಥರಿಗೆ ಮತಪತ್ರವನ್ನು ಆನ್‌ಲೈನ್‌ ಮೂಲಕ ರವಾನಿಸಲಾಗುತ್ತದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರತ ಮತದಾರರಿಗೆ ಚುನಾವಣಾ ಕರ್ತವ್ಯ ದೃಢಪತ್ರ (ಇಡಿಸಿ) ಹಾಗೂ ಕ್ಷೇತ್ರದ ಹೊರಗೆ ಚುನಾವಣಾ ಕರ್ತವ್ಯ ನಿರ್ವಹಿಸುವ ಮತದಾರರಿಗೆ ಅಂಚೆ ಮತ ಪತ್ರ ಮುದ್ರಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಮಾಡಲಾಗುತ್ತದೆ. ಬ್ಯಾಲೆಟ್‌ ಯೂನಿಟ್‌ ಮತಪತ್ರವನ್ನು ಚುನಾವಣಾ ಆಯೋಗ ಸೂಚಿಸುವ ಸರಕಾರಿ ಮುದ್ರಣಾಲಯದಲ್ಲಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನಿಯಂತ್ರಣ  ಕೊಠಡಿಗಳು

ಸಾರ್ವಜನಿಕರು ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲು ಅನುಕೂಲ ವಾಗುವಂತೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್‌ ರೂಮ್‌ಗಳನ್ನು ತೆರೆಯಲಾಗಿದೆ. 

ಜಿಲ್ಲಾಧಿಕಾರಿ ಕಚೇರಿ – 1950

ಕಾರ್ಕಳ ತಾಲೂಕು ಕಚೇರಿ – 08258 230201 

ಕುಂದಾಪುರ ತಾಲೂಕು ಕಚೇರಿ-  08254 298058 

ಉಡುಪಿ ತಾಲೂಕು ಕಚೇರಿ –  0820 2521299 

ಕಾಪು ತಾಲೂಕು ಕಚೇರಿ-  0820 2551344, 2551345, 

ಬೈಂದೂರು ತಾಲೂಕು ಕಚೇರಿ- 08254 252057, 251657, 251857

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.