ಸುಲಭಕ್ಕೆ ಸಿಕ್ಕೀತು ಕುಪ್ಪಂ, ಆದರೆ ಆಂಧ್ರ?


Team Udayavani, Apr 3, 2019, 6:30 AM IST

chandra-babu

ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಭೆಗೆ ಒಂದೇ ಹಂತ, ಸಮಯದಲ್ಲೇ ಮತದಾನ ನಡೆಯಲಿದೆ. ವಿಧಾನಸಭೆ ಕ್ಷೇತ್ರಗಳ ಪೈಕಿ ದೇಶದ ಗಮನ ಸೆಳೆಯುವ ಕ್ಷೇತ್ರಗಳಲ್ಲೊಂದು ಕುಪ್ಪಂ. ತೆಲುಗು ದೇಶಂ ಪಾರ್ಟಿ ಮುಖ್ಯಸ್ಥ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಅಖಾಡ ಎಂದೇ ಕುಪ್ಪಂ ಖ್ಯಾತಿವೆತ್ತಿದೆ. 1989ರಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಾ.ಎಸ್‌.ಕೃಷ್ಣ ರನ್ನು ಸೋಲಿಸಿದ್ದ ಚಂದ್ರ ಬಾಬು ನಾಯ್ಡು ಮತ್ತೆ ಹಿಂತಿರುಗಿ ನೋಡಲೇ ಇಲ್ಲ. ಆರು ಬಾರಿ ಅದೇ ಕ್ಷೇತ್ರದಿಂದ ಆಯ್ಕೆಯಾಗುತ್ತಾ ಬಂದಿ ದ್ದಾರೆ. ಕುಪ್ಪಂನ ಜನರು ಮಾತ್ರ “ನಾಯ್ಡು ತಮ್ಮ ಕ್ಷೇತ್ರಕ್ಕೆ ಉತ್ತಮ ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ. ಆದರೂ ಈ ಬಾರಿ, ಆಂಧ್ರಪ್ರದೇಶದಲ್ಲಿ ಟಿಡಿಪಿಯನ್ನು ಅಧಿಕಾರದಲ್ಲಿ ಉಳಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತದೆಯೋ ಇಲ್ಲವೋ ತಿಳಿಯದು’ ಎಂದು ಖಾಸಗಿಯಾಗಿ ಮಾತನಾಡುತ್ತಿದ್ದಾರೆ.

ಕುಪ್ಪಂ ಆಂಧ್ರಪ್ರದೇಶದಲ್ಲಿಯೇ ಇದ್ದರೂ, ಅಲ್ಲಿ ಕರ್ನಾಟಕದ ಕಂಪೂ ಇದೆ. ಬೆಂಗಳೂರಿನಿಂದ ನಾಯ್ಡು ಕ್ಷೇತ್ರಕ್ಕೆ 114 ಕಿಮೀ ಪ್ರಯಾಣ. ಇಲ್ಲಿ ಕನ್ನಡ, ತಮಿಳು ಭಾಷಿಕರೂ ಇದ್ದಾರೆ. ನಾಯ್ಡು ಅವರ ಮೂಲ ಚಿತ್ತೂರು ಸಮೀಪದ ನರವರಪಲ್ಲೆ. ಗಮನಿಸಬೇಕಾದ ಅಂಶವೆಂದರೆ ಚಂದ್ರಬಾಬು ನಾಯ್ಡು ಮೊದಲ ಬಾರಿಗೆ ಶಾಸಕರಾದದ್ದು ಕಾಂಗ್ರೆಸ್‌ ಟಿಕೆಟ್‌ನಿಂದ 1978ರಲ್ಲಿ. ಆ ವೇಳೆಗೆ ಅವರ ವಯಸ್ಸು ಕೇವಲ 28.

ಕ್ಷೇತ್ರದಲ್ಲಿನ ತರಕಾರಿ ಮಾರುವವರು, ವ್ಯಾಪಾರಿಗಳು ಹೇಳುವ ಪ್ರಕಾರ ನಾಯ್ಡು ಶ್ರಮದಿಂದಾಗಿ ಕುಪ್ಪಂ ಎಂಬ ಸ್ಥಳ ದೇಶ-ವಿದೇಶಗಳಲ್ಲಿ ಹೆಸರು ಪಡೆಯುವಂತಾಯಿತು. ಆಂಧ್ರ ಮತ್ತು ಹೈದರಾಬಾದ್‌ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ನಮ್ಮ ನಾಯಕನ ಶ್ರಮವೇ ಕಾರಣ ಎಂದು ಶ್ಲಾ ಸುತ್ತಾರೆ ಸ್ಥಳೀಯರು. ವಿಜಯವಾಡದಿಂದ ಕುಪ್ಪಂಗೆ ಕುಡಿಯಲು ಮತ್ತು ಇತರ ಉಪಯೋಗಕ್ಕಾಗಿ ಕೃಷ್ಣಾ ನದಿ ನೀರನ್ನು ಬೃಹತ್‌ ಗಾತ್ರದ ಪೈಪ್‌ಗ್ಳಲ್ಲಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಸರಿ ಸುಮಾರು ಮೂವತ್ತು ವರ್ಷಗಳಿಂದ ನಾಯ್ಡು ಪ್ರಶ್ನಾತೀತ ನಾಯಕನಾಗಿ ಬೆಳೆದಿದ್ದಾರೆ. ಇದರ ಹೊರತಾಗಿಯೂ ವೈ.ಎಸ್‌.ಆರ್‌.ಕಾಂಗ್ರೆಸ್‌ ಪಕ್ಷ ಅಲ್ಲಿ ದೊಡ್ಡ ಕಚೇರಿ ಆರಂಭಿಸಿದೆ. ಪಕ್ಷದ ಸ್ಥಳೀಯ ಘಟಕ ನಾಯಕರ ಪ್ರಕಾರ “ಕುಪ್ಪಂನಲ್ಲಿ ನಾಯ್ಡು ಅವರನ್ನು ಸೋಲಿಸಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೂ, ಸುಲಭವಾಗಿ ಜಯ ಸಾಧಿಸಲು ಬಿಡೆವು’ ಎನ್ನುತ್ತಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಗೆ ಸೇರಿದ ಕುಪ್ಪಂ, ಗ್ರಾನೈಟ್‌ ಉದ್ದಿಮೆಗೆ ಹೆಸರುವಾಸಿ. ವಿಶೇಷವಾಗಿ ಕುಪ್ಪಂ ಗ್ರೀನ್‌ ಎಂಬ ವಿಧದ ಗ್ರಾನೈಟ್‌ಗೆ ಭಾರಿ ಬೇಡಿಕೆ ಇದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.