ಅನುಮತಿ ಇಲ್ಲದೆ ರ್ಯಾಲಿ : ಗಂಭೀರ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ
Team Udayavani, Apr 27, 2019, 5:12 PM IST
ಹೊಸದಿಲ್ಲಿ : ಚುನಾವಣಾ ಆಯೋಗದ ಅನುಮತಿ ಪಡೆಯದೆ ರ್ಯಾಲಿ ನಡೆಸಿದ ಕಾರಣಕ್ಕಾಗಿ ಕ್ರಿಕೆಟಿಗ, ದಕ್ಷಿಣ ದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ.
ಎಎನ್ಐ ವರದಿಯಂತೆ ಎಪ್ರಿಲ್ 25 ರಂದು ದೆಹಲಿಯ ಜಂಗ್ಪುರದಲ್ಲಿ ರ್ಯಾಲಿ ನಡೆಸಲು ಗಂಭೀರ್ ಆಯೋಗದ ಅನುಮತಿ ಪಡೆದಿರಲಿಲ್ಲ.
ದೆಹಲಿ ಪೊಲೀಸ್ ಕಾಯಿದೆಯ ಪ್ರಕಾರ ಗಂಭೀರ್ ವಿರುದ್ಧ ಗುರುತಿಸಲಾಗದ ವರದಿಯನ್ನು ಸಲ್ಲಿಸಿ ಎಫ್ಐಆರ್ ದಾಖಲಿಸಲಾಗುತ್ತಿದೆ.
ದಕ್ಷಿಣ ದೆಹಲಿಯ ರಿಟರ್ನಿಂಗ್ ಆಫೀಸರ್ಗೆ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ.
ಗಂಭೀರ್ ಎರಡು ವೋಟರ್ ಐಡಿ ಹೊಂದಿದ್ದಾರೆ ಎಂದು ಆಪ್ ಅಭ್ಯರ್ಥಿ ಆತಿಷಿ ಅವರು ದೂರು ಸಲ್ಲಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ.
ಭರ್ಜರಿ ಪ್ರಚಾರದ ಹುರುಪಿನಲ್ಲಿದ್ದ ಗಂಭೀರ್ಗೆ ಈಗ ಹೊಸ ಸಂಕಷ್ಟ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್