ಶಾಸಕರ ಪಕ್ಷ ಬದಲಾದರೂ ಸಂಸದ ಸ್ಥಾನ ಬಿಜೆಪಿಗೆ ಖಚಿತ


Team Udayavani, Mar 22, 2019, 1:00 AM IST

bjp.jpg

ಕುಂದಾಪುರ: ಆಡಳಿತಾತ್ಮಕವಾಗಿ ಉಡುಪಿ ಜಿಲ್ಲೆಗೆ ಸೇರಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವುದು ಬೈಂದೂರು ವಿಧಾನಸಭಾ ಕ್ಷೇತ್ರದ ವಿಶೇಷತೆ. ಇಲ್ಲಿ ಈ ಬಾರಿಯ ಚುನಾವಣ ಕಾವು ನಿಧಾನವಾಗಿ ಹಬ್ಬಲಾರಂಭಿಸಿದೆ. 

ಯಡಿಯೂರಪ್ಪ ಶಾಸಕರಾಗಿ ಆಯ್ಕೆಯಾದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಲ್ಲಿ ಐದು ತಿಂಗಳ ಹಿಂದೆಯಷ್ಟೇ ಲೋಕಸಭಾ ಉಪ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಬಿಎಸ್‌ವೈ ಪುತ್ರ ಬಿ.ವೈ. ರಾಘವೇಂದ್ರ (ಪಡೆದ ಒಟ್ಟು ಮತ – 5,43,306) ಅವರು ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಸ್‌. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ (ಪಡೆದ ಒಟ್ಟು ಮತ – 4,91,158) ಅವರನ್ನು 52,148 ಮತ ಅಂತರದಿಂದ ಸೋಲಿಸಿದ್ದರು.

ಅದಾಗಿ ಕೇವಲ ಐದೇ ತಿಂಗಳಲ್ಲಿ ಮತ್ತೆ ಚುನಾವಣ ಅಖಾಡಕ್ಕೆ ಅಣಿಯಾಗಬೇಕಾದ ಅನಿವಾರ್ಯ ಇಲ್ಲಿನ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರದ್ದು. 

ಯಾರಿಗೆ ಮುನ್ನಡೆ?
2008ರಿಂದೀಚೆಗೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಬೈಂದೂರು ಒಮ್ಮೆ ಬಿಜೆಪಿ, ಮತ್ತೂಮ್ಮೆ ಕಾಂಗ್ರೆಸ್‌ಗೆ ಎಂಬಂತೆ ಒಲಿದಿದ್ದರೂ ಲೋಕಸಭಾ ಚುನಾವಣೆ ಗಳಲ್ಲಿ ಗೆಲುವು ಬಿಜೆಪಿಯದ್ದೇ ಆಗಿದೆ. 2008ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್‌ಗಿಂತ 7,726 ಮತ ಹೆಚ್ಚು ಪಡೆದು ಗೆದ್ದಿದ್ದರೆ, 2009ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್‌ ಎದುರು 12,255 ಮತಗಳ ಗೆಲುವು ಸಾಧಿಸಿತು. 2013ರ ವಿಧಾನಸಭೆ ಚುನಾವಣೆಯಲ್ಲಿ 31,149 ಮತಗಳ ಗೆಲುವು ಕಾಂಗ್ರೆಸ್‌ ಪಾಲಾಯಿತು. 2014ರ ಲೋಕಸಭಾ ಚುನಾವಣೆಯಲ್ಲಿ 46,416 ಮತಗಳ ಅಂತರದ ಗೆಲುವು ಬಿಜೆಪಿಯದ್ದಾಗಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ 24,393 ಮತಗಳ ಅಂತರದ ಗೆಲುವು ಬಿಜೆಪಿಗೆ ಸಿಕ್ಕಿತು. ಅದೇ ವರ್ಷ ನಡೆದ ಲೋಕಸಭಾ ಉಪ ಚುನಾ ವಣೆಯಲ್ಲಿ ಜೆಡಿಎಸ್‌ ಎದುರು ಬಿಜೆಪಿ 14,572 ಮತಗಳ ಗೆಲುವು ಸಾಧಿಸಿತು. 

ಬಿಜೆಪಿಗೆ ವರವಾಗಲಿದೆಯೇ?
ಶಿವಮೊಗ್ಗ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಆದರೂ ಬಿಜೆಪಿ ಯಿಂದ ರಾಘವೇಂದ್ರ; ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯುವುದು ಬಹುತೇಕ ಖಚಿತ. ಬೈಂದೂರು ವ್ಯಾಪ್ತಿಯಲ್ಲಿ ನಿಕಟ ಪೈಪೋಟಿ ಬಿಜೆಪಿ – ಕಾಂಗ್ರೆಸ್‌ ನಡುವೆ. ಇಲ್ಲಿ ಬಿಜೆಪಿ ಸುಲಭವಾಗಿ ಮುನ್ನಡೆ ಪಡೆಯುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಈಗಿನ ಚಿತ್ರಣವೇನು
ಬೈಂದೂರು ಕ್ಷೇತ್ರಾದ್ಯಂತ ಬಿಜೆಪಿ ಈಗಾಗಲೇ ಪ್ರಚಾರ ಆರಂಭಿಸಿದ್ದರೆ, ಕಾಂಗ್ರೆಸ್‌-ಜೆಡಿಎಸ್‌  ಮೈತ್ರಿಕೂಟ ಇನ್ನೂ ಅಣಿಯಾದಂತೆ ಕಾಣುತ್ತಿಲ್ಲ. ಈ ಭಾಗದಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಹೆಚ್ಚಿದೆ. ಆದರೆ ತಮ್ಮ ಪಕ್ಷದ ಅಭ್ಯರ್ಥಿ ಅಥವಾ ತಮ್ಮ ಪಕ್ಷದ ಚಿಹ್ನೆ ಇರುವುದಿಲ್ಲ ಎನ್ನುವ ಕೊರಗು ಕಾಂಗ್ರೆಸ್‌ ಕಾರ್ಯಕರ್ತರದ್ದು. ಐದು ತಿಂಗಳ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರು ರಾಘವೇಂದ್ರ ಅವರಿಗೆ ನಿಕಟ ಸ್ಪರ್ಧೆ ನೀಡಿರುವುದು ಬಿಜೆಪಿಯನ್ನು ನಿದ್ದೆಗೆಡುವಂತೆ ಮಾಡಿದ್ದರೂ ಕ್ಷೇತ್ರ ದಾದ್ಯಂತ “ಮೋದಿ ಮತ್ತೂಮ್ಮೆ’ ಎನ್ನುವ ಜಪ ಕೇಳಿ ಬರುತ್ತಿದೆ. ಮತ್ತೂಂದೆಡೆ, ಉಪಚುನಾವಣೆಯಲ್ಲಿ ಸಿಕ್ಕಿದ್ದ ಹೆಚ್ಚಿನ ಮತಗಳಿಂದ ಸಂತುಷ್ಟಗೊಂಡಂತಿರುವ  ಕಾಂಗ್ರೆಸ್‌-ಜೆಡಿಎಸ್‌ ಒಟ್ಟಾಗಿ ಈ ಬಾರಿಯಾದರೂ ಬಿಜೆಪಿಯನ್ನು ಮಣಿಸಲು ರಣತಂತ್ರ ಹೆಣೆಯುತ್ತಿವೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.