ಸಮಬಲದ ಹೋರಾಟಕ್ಕೆ ಕ್ಷೇತ್ರ ವೇದಿಕೆ

ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ

Team Udayavani, Mar 25, 2019, 12:15 PM IST

samabala

ಕ್ಷೇತ್ರದ ವಸ್ತುಸ್ಥಿತಿ: ಕ್ಷೇತ್ರದಲ್ಲಿರುವ ಎಂಟು ವಾರ್ಡ್‌ಗಳ ಪೈಕಿ 5 ಕಾಂಗ್ರೆಸ್‌ ಬಳಿ ಇವೆ. ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್‌ಗೆà ಸೇರಿದೆ. ಬಿಟಿಎಂ ಲೇಔಟ್‌ನಲ್ಲಿ ಕಾಂಗ್ರೆಸ್‌ ಹಿಡಿತಕ್ಕೆ ಇವು ಸಾಕ್ಷಿ. ಆದರೂ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಜನ ಬಿಜೆಪಿಯತ್ತ ಮುಖಮಾಡುತ್ತಾರೆ.

ಇದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸಿನ ಜತೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುವ ರಾಮಲಿಂಗಾರೆಡ್ಡಿ ಮತ್ತು ಹಿಂದಿದ್ದ ಸಂಸದ ಅನಂತಕುಮಾರ್‌ ಅವರ ನಡುವಿನ ಆಪ್ತತೆ ಎನ್ನಲಾಗಿದೆ. ಈಗ ಅಭ್ಯರ್ಥಿ ಬದಲಾಗಲಿದ್ದಾರೆ. ಹಾಗಾಗಿ, ಈಗಲೂ ಆ ಆಪ್ತತೆ ಕೆಲಸ ಮಾಡಲಿದೆಯೇ ಕಾದುನೋಡಬೇಕು.

ರಾಮಲಿಂಗಾರೆಡ್ಡಿ ಅವರು ಪಾಲಿಕೆ ಸದಸ್ಯರು, ಪಕ್ಷದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಎಲ್ಲ ವಾರ್ಡ್‌ಗಳಿಗೆ ಸಮಾನ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಕಾಂಗ್ರೆಸ್‌ಗೆ ಶ್ರೀರಕ್ಷೆ ಆಗಬಹುದು. ಆದರೆ, ರಾಮಲಿಂಗಾರೆಡ್ಡಿ ಅವರಿಗೆ ಸಣ್ಣ ಮುನಿಸು ಇರುವುದು ಆ ಪಕ್ಷಕ್ಕೆ ತುಸು ಕಿರಿಕಿರಿ ಆಗಿದೆ.

ಇದೆಲ್ಲವೂ ಅಭ್ಯರ್ಥಿ ಆಯ್ಕೆಯನ್ನು ಅವಲಂಬಿಸಿದೆ. ಈ ಮಧ್ಯೆ ಬಿಜೆಪಿಯಲ್ಲಿ ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅವರು ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಅನುಕಂಪವೂ ಕೆಲಸ ಮಾಡಲಿದೆ ಎಂಬ ಮಾತುಗಳಿವೆ. ಇಲ್ಲಿ ಒಕ್ಕಲಿಗರು ಮತ್ತು ಮುಸ್ಲಿಂರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಾಗಾಗಿ ಒಕ್ಕಲಿಗ ಅಭ್ಯರ್ಥಿಯನ್ನೇ ನಿಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯವೂ ಕಾಂಗ್ರೆಸ್‌ನಲ್ಲಿ ವ್ಯಕ್ತವಾಗುತ್ತಿದೆ. 2009ರಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೃಷ್ಣ ಬೈರೇಗೌಡ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದಾಗ, ಕೇವಲ ಸುಮಾರು 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.

ಪ್ರಮುಖ ಕೊಡುಗೆಗಳು
-ಜನಔಷಧಿ ಮಳಿಗೆಗಳ ನಿರ್ಮಾಣ
-ನೂರಕ್ಕೂ ಅಧಿಕ ಕೊಳವೆಬಾವಿಗಳು
-ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ

ನಿರೀಕ್ಷೆಗಳು
-ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ಜಂಕ್ಷನ್‌ನಲ್ಲಿಯ ಸಂಚಾರದಟ್ಟಣೆ ಸಮಸ್ಯೆ ಮುಕ್ತಿ ಸಿಗಬೇಕು
-ಮಳೆಗಾಲದಲ್ಲಿ ಕೋರಮಂಗಲ, ಮಡಿವಾಳದಲ್ಲಿ ಮನೆಗಳಿಗೆ ನೀರು ನುಗ್ಗುವುದು ಸಾಮಾನ್ಯವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಸಿಗಬೇಕು
-70-80 ವರ್ಷಗಳ ಹಿಂದೆ ನಿರ್ಮಿಸಿದ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ, ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಇವು ಬಗೆಹರಿಯಬೇಕು

-ವಾರ್ಡ್‌ಗಳು- 8
-ಬಿಜೆಪಿ- 2
-ಕಾಂಗ್ರೆಸ್‌- 5
-ಜೆಡಿಎಸ್‌- 1

-ಜನಸಂಖ್ಯೆ- 4,59,751
-ಮತದಾರರ ಸಂಖ್ಯೆ- 2,62,829
-ಪುರುಷರು- 1,38,054
-ಮಹಿಳೆಯರು- 1,24,775

2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳು- 1,33,735 (ಶೇ. 55.62)
-ಬಿಜೆಪಿ ಪಡೆದ ಮತಗಳು- 70,537 (ಶೇ. 52.7)
-ಕಾಂಗ್ರೆಸ್‌ ಪಡೆದ ಮತಗಳು- 53,917 (ಶೇ. 40.3)
-ಜೆಡಿಎಸ್‌ ಪಡೆದ ಮತಗಳು- 4,442 (ಶೇ. 3.3)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಶಾಸಕ- ರಾಮಲಿಂಗಾರೆಡ್ಡಿ (ಕಾಂಗ್ರೆಸ್‌)
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು- 3
-ಕಾಂಗ್ರೆಸ್‌ ಸದಸ್ಯರು- 5
-ಜೆಡಿಎಸ್‌ ಸದಸ್ಯರು- 0

ಮಾಹಿತಿ: ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.