ಉತ್ತರದಿಂದ ಐವರಿಗೆ ಮಾತ್ರ ಸಂಸದೆ ಭಾಗ್ಯ


Team Udayavani, Mar 17, 2019, 1:50 AM IST

sonia-gandhi.jpg

ಹುಬ್ಬಳ್ಳಿ: ಲೋಕಸಭೆ ಚುನಾವಣಾ ಇತಿಹಾಸದ 69 ವರ್ಷಗಳಲ್ಲಿ ಉತ್ತರ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಿಂದ ಇಲ್ಲಿವರೆಗೆ ಸೋನಿಯಾ ಗಾಂಧಿ ಸೇರಿ ಕೇವಲ ಐವರು ಮಹಿಳೆಯರು ಮಾತ್ರ ಆಯ್ಕೆ ಯಾಗಿದ್ದಾರೆ. ಸುಮಾರು 8 ಕ್ಷೇತ್ರಗಳಲ್ಲಿ ಇದುವ ರೆಗೂ ಒಬ್ಬರೇ ಒಬ್ಬರು ಮಹಿಳೆ ಆಯ್ಕೆಯಾಗಿಲ್ಲ. ಲೋಕಸಭೆಗೆ ಆಯ್ಕೆಯಾದ ಐವರು ಮಹಿಳೆಯರಲ್ಲಿ ನಾಲ್ವರು ಕೇಂದ್ರದಲ್ಲಿ ಸಚಿವರಾಗಿದ್ದುದು ವಿಶೇಷ. ಐವರ ಪೈಕಿ ಮೂವರು ಮುಂಬೈ ಕರ್ನಾಟಕ ಭಾಗದವರಾಗಿದ್ದರೆ, ಇಬ್ಬರು ಹೈದರಾಬಾದ್‌ ಕರ್ನಾಟಕ ಭಾಗದಿಂದ ಆಯ್ಕೆಯಾಗಿದ್ದರು. ಇದರಲ್ಲಿ ನಾಲ್ವರು ಕಾಂಗ್ರೆಸ್‌ನಿಂದ ಆಯ್ಕೆಯಾದರೆ, ಒಬ್ಬರು ಮಾತ್ರ ಜನತಾದಳದಿಂದ ಆಯ್ಕೆಯಾದವರು. ಲೋಕಸಭೆ ಹಾಗೂ ವಿಧಾನಸಭೆಗಳಲ್ಲೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕೆಂಬ ಬಗ್ಗೆ ದೊಡ್ಡ ಚರ್ಚೆ, ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಆದರೆ, ಲೋಕಸಭೆ ವಿಚಾರಕ್ಕೆ ಬಂದರೆ ಉತ್ತರ ಕರ್ನಾಟಕದಲ್ಲಿಮಹಿಳೆಯರಿಗೆ ಅತ್ಯಲ್ಪ ಅವಕಾಶ ದೊರೆತಿದೆ ಎಂದೇ ಹೇಳಬಹುದು.

ರಾಜ್ಯದ ಮೊದಲ ಸಂಸದೆ 

ಚಿಕ್ಕೋಡಿ ಕ್ಷೇತ್ರದಿಂದ ರತ್ನಮಾಲಾ ಸವಣೂರು, ಧಾರವಾಡ ಕ್ಷೇತ್ರದಿಂದ ಸರೋಜಿನಿ ಮಹಿಷಿ, ಉತ್ತರ ಕನ್ನಡ ಕ್ಷೇತ್ರದಿಂದ ಮಾರ್ಗರೇಟ್‌ ಆಳ್ವಾ, ಬಳ್ಳಾರಿ ಕ್ಷೇತ್ರದಿಂದ ಬಸವರಾಜೇಶ್ವರಿ ಹಾಗೂ ಸೋನಿಯಾ ಗಾಂಧಿ ಲೋಕಸಭೆಗೆ ಆಯ್ಕೆಯಾದವರು. ಧಾರವಾಡ ಲೋಕಸಭಾ ಕ್ಷೇತ್ರ ಈ ಹಿಂದೆ ಧಾರವಾಡ ಉತ್ತರ ಕ್ಷೇತ್ರವಾಗಿತ್ತು. ಈ ಕ್ಷೇತ್ರದಿಂದ ಸರೋಜಿನಿ ಮಹಿಷಿ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಮಹಿಳಾ ಸಂಸದೆ ಎಂಬ ಕೀರ್ತಿ ಹೊಂದಿದ್ದಾರೆ. 1962ರಿಂದ 1977ರವರೆಗೆ ಸರೋಜಿನಿ ಮಹಿಷಿ ಸತತವಾಗಿ 4 ಬಾರಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 1983ರಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ನೀಡುವ ವಿಚಾರವಾಗಿ ಸರೋಜಿನಿ ಮಹಿಷಿ ನೇತೃತ್ವದ ವರದಿ ಇಂದಿಗೂ ಚರ್ಚೆಯಲ್ಲಿದೆ.

ಚಿಕ್ಕೋಡಿ ಕ್ಷೇತ್ರದಿಂದ 1996ರಲ್ಲಿ ಜನತಾದಳದಿಂದ ರತ್ನಮಾಲಾ ಸವಣೂರು ಲೋಕಸಭೆಗೆ ಆಯ್ಕೆಯಾಗಿದ್ದರು. ಇದೇ ಕ್ಷೇತ್ರದಲ್ಲಿ ಸತತವಾಗಿ ಏಳು ಬಾರಿ ಗೆದ್ದು ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಬಿ.ಶಂಕರಾನಂದ ಅವರನ್ನು 1996ರ ಚುನಾವಣೆಯಲ್ಲಿ ಸೋಲಿಸಿದ್ದ ರತ್ನಮಾಲಾ ಸವಣೂರು, ಐ.ಕೆ.ಗುಜ್ರಾಲ್‌ ಸರ್ಕಾರದಲ್ಲಿ ಸಹಾಯಕ ಸಚಿವರಾಗಿದ್ದರು. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಸವರಾಜೇಶ್ವರಿ 1984ರಿಂದ 1991ರವರೆಗೆ ಸತತವಾಗಿ ಮೂರು ಬಾರಿ ಲೋಕಸಭೆಗೆ ಆಯ್ಕೆ ಯಾಗಿ ದ್ದರು. ಪಿ.ವಿ. ನರಸಿಂಹ ರಾವ್‌ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದಿಟಛಿ ಸಹಾಯಕ ಸಚಿವೆಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಹೈದರಾಬಾದ ಕರ್ನಾಟಕ ಭಾಗದಿಂದ ಲೋಕಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಕೀರ್ತಿಯೂ ಇವರದ್ದಾಗಿದೆ.

ಸೋನಿಯಾ ಗೆದ್ದಿದ್ದರು
1999ರಲ್ಲಿ ನಡೆದ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು. ಬಳ್ಳಾರಿಯಲ್ಲಿ ಗೆಲುವು ಸಾಧಿಸಿದ್ದ ಸೋನಿಯಾ, ತಮ್ಮ ಅಮೇಥಿ ಕ್ಷೇತ್ರವನ್ನು ಉಳಿಸಿಕೊಂಡು ಬಳ್ಳಾರಿಗೆ ರಾಜೀನಾಮೆ ನೀಡಿದ್ದರು. 2000ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೋಳೂರು ಬಸನಗೌಡ ಆಯ್ಕೆಯಾಗಿದ್ದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಭಾವಿ ಮಹಿಳೆ ಮಾರ್ಗರೇಟ್‌ ಆಳ್ವಾ 1999ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ರಾಜ್ಯಸಭಾ ಸದಸ್ಯೆಯಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವೆಯಾಗಿ, ವಿವಿಧ
ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಅಮರೇಗೌಡ ಗೊನೇವಾರ 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.