ಚುನಾವಣೆ ಬಳಿಕ ಸರ್ಕಾರ ಪತನ:ಯಡಿಯೂರಪ್ಪ
Team Udayavani, Feb 28, 2019, 1:17 AM IST
ಚಿತ್ರದುರ್ಗ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಾತನಾಡಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸ ಲಾಗುವುದು. ಲೋಕಸಭಾ ಕ್ಷೇತ್ರಗಳ ಟಿಕೆಟ್ ಹಂಚಿಕೆ ಮಾಡುವಾಗ ಆಯಾ ಭಾಗದ ಶಾಸಕರೊಂದಿಗೆ ಚರ್ಚಿ ಸುತ್ತೇವೆ. ಎಲ್ಲಾ ಸಮುದಾಯ ಗಳಿಗೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲಲಿದೆ. ತಕ್ಷಣ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದರು. ಕಾಂಗ್ರೆಸ್ನ 20ಕ್ಕೂ ಹೆಚ್ಚಿನ ಶಾಸಕರು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಯೆಂದು ಇನ್ನೂ ಒಪ್ಪಿಲ್ಲ. ಸಿದ್ದರಾಮಯ್ಯ ನವರೇ ನಮಗೆ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ನಾನೊಬ್ಬ ಗುಮಾಸ್ತ ಎಂದು ಹೇಳಿಕೆ ನೀಡುತ್ತಾರೆ ಎಂದು ಲೇವಡಿ ಮಾಡಿದರು.
ಇಂದು ನನ್ನ ಜನ್ಮದಿನ. ಸಿದ್ದ ಗಂಗಾ ಶ್ರೀಗಳು ಲಿಂಗೈಕ್ಯರಾಗಿದ್ದು ಮತ್ತು 40ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರಿಂದ ಯಾವುದೇ ಸಂಭ್ರಮ ಬೇಡ ಎಂದು ತೀರ್ಮಾನಿಸಿದ್ದೇನೆ. ರಾಜ್ಯದಿಂದ 22 ಸಂಸದರನ್ನು ಗೆಲ್ಲಿಸಿ ಮೋದಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯ ತನಕ ನಾನು ಮನೆ ಸೇರಲ್ಲ ಎಂದು ಶಪಥ ಮಾಡಿದ್ದೇನೆ.
● ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ