ಸರಕಾರಿ ಯಂತ್ರ ದುರುಪಯೋಗ
Team Udayavani, Apr 1, 2019, 6:00 AM IST
ಕುರುಗೋಡು: ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ತಿರಸ್ಕೃತಗೊಳ್ಳಬೇಕಿತ್ತು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪುತ್ರನಿಗಾಗಿ ಸರಕಾರಿ ಯಂತ್ರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಯವರು ಅಧಿ ಕಾರದ ದರ್ಪದಲ್ಲಿ ಮಂಡ್ಯ ಜಿಲ್ಲಾಧಿಕಾರಿಯನ್ನು ಕೈಗೊಂಬೆಯನ್ನಾಗಿಸಿಕೊಂಡು ನಾಮಪತ್ರದ ದಾಖಲೆಗಳನ್ನು ಸರಿಪಡಿಸಿ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.