ನನ್ನ ಮಾತಿಗೆ ಬೆಲೆಯಿಲ್ಲ: ಮುಂದುವರಿದ ಪರಮೇಶ್ವರ್‌ ಮುನಿಸು


Team Udayavani, Mar 20, 2019, 1:52 AM IST

parameshwar.jpg

ಬೆಂಗಳೂರು : ತುಮಕೂರನ್ನು ಜೆಡಿಎಸ್‌ಗೆ  ಬಿಟ್ಟುಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಡಿಸಿಎಂ ಡಾ| ಜಿ. ಪರಮೇಶ್ವರ್‌ ಪಕ್ಷದ ಸಭೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.

ಅವರ ಅಸಮಾಧಾನಕ್ಕೆ ಕ್ಷೇತ್ರ ಕೈ ತಪ್ಪಿರುವುದಷ್ಟೇ ಅಲ್ಲ; ತಮ್ಮ ಬಳಿ ಇರುವ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ ಬಿಡಿಎ ಹಾಗೂ ಜಲಮಂಡಳಿಯಲ್ಲಿಯೂ ತಮ್ಮ ಅಧಿಕಾರ ನಡೆಯದಂತೆ ನೋಡಿಕೊಳ್ಳಲಾಗುತ್ತಿದೆ ಎಂಬುದೂ ಕಾರಣ ಎಂದು ತಿಳಿದು ಬಂದಿದೆ.

ಮಂಗಳವಾರ ನಡೆದ ಮೈತ್ರಿ ಪಕ್ಷಗಳ ನಾಯಕರ ಸಭೆಗೆ ಪರಮೇಶ್ವರ್‌ ಹಾಜರಾಗಲಿಲ್ಲ. ಸೀಟು ಹಂಚಿಕೆಯಾದ ಅನಂತರ ವಿವಿಧ ಜಿಲ್ಲಾ ಘಟಕಗಳ ಅಭ್ಯರ್ಥಿಗಳ ಆಯ್ಕೆ ಗೊಂದಲ ನಿವಾರಣೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಗೂ ಹಾಜರಾಗಿರಲಿಲ್ಲ.

ಸೋಮವಾರ ರಾಹುಲ್‌ ಗಾಂಧಿ ಕಲಬುರಗಿ ಸಮಾವೇಶ ಮತ್ತು ಬೆಂಗಳೂರಿನಲ್ಲಿ ನವೋದ್ಯಮಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪರಂ ಭಾಗವಹಿಸಿದ್ದರು. ಆದರೆ ಅಂದು ರಾತ್ರಿ ಕೆ.ಸಿ. ವೇಣುಗೋಪಾಲ್‌ ಮತ್ತು ದಿನೇಶ್‌ ಗುಂಡೂರಾವ್‌ ಅವರು ತುಮಕೂರು ಕ್ಷೇತ್ರವನ್ನು ವಾಪಸ್‌ ನೀಡುವಂತೆ ಮನವಿ ಮಾಡಲು ದೇವೇಗೌಡರ ನಿವಾಸಕ್ಕೆ ತೆರಳಿದಾಗ ಪರಮೇಶ್ವರ್‌ ಹೋಗಿರಲಿಲ್ಲ.

ಆದರೆ ಈ ಬಗ್ಗೆ ಪರಮೇಶ್ವರ್‌, ಕುಟುಂಬ ಕಾರ್ಯಕ್ರಮ ವಿದ್ದ ಕಾರಣ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಟ್ವೀಟ್‌ ಸ್ಪಷ್ಟೀಕರಣ ನೀಡಿದ್ದಾರೆ.

ನನ್ನ ಮಾತಿಗೆ ಬೆಲೆಯಿಲ್ಲ’
ತಾವು ಹೊಂದಿರುವ ಬೆಂಗಳೂರು ನಗರಾಭಿವೃದ್ಧಿ  ಉಸ್ತುವಾರಿ ವ್ಯಾಪ್ತಿಗೆ ಬರುವ ಬಿಡಿಎ ಹಾಗೂ ಜಲ ಮಂಡಳಿಯಲ್ಲಿ ತಮ್ಮದೇ ಅಧಿಕಾರಿಗಳನ್ನು ಇಟ್ಟುಕೊಂಡು ಸಿಎಂ ಕುಮಾರಸ್ವಾಮಿ ಕೆಲಸ ಮಾಡಿಸುತ್ತಿದ್ದು, ಬಿಡಿಎ ಆಯುಕ್ತರು ನನ್ನ ಮಾತು ಕೇಳುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಭೇಟಿಗೆ ಸಮಯ ಕೇಳಿದರೂ ಸಿಗುತ್ತಿಲ್ಲ. ಸರ್ಕಾರದಲ್ಲಿಯೂ ನನಗೆ ಮರ್ಯಾದೆ ಇಲ್ಲ. ಪಕ್ಷದಲ್ಲಿಯೂ ನನ್ನ ಮಾತಿಗೆ ಬೆಲೆಯಿಲ್ಲ ಎಂದು ಪರಮೇಶ್ವರ್‌ ತಮ್ಮ ಆಪ್ತರ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.