ಪಾಸ್ವಾನ್‌ ಇಲ್ಲದೆ ಹಾಜೀಪುರ ಎಲೆಕ್ಷನ್‌


Team Udayavani, May 3, 2019, 6:15 AM IST

paswan

ಲೋಕಜನ ಶಕ್ತಿ ಪಕ್ಷದ ನಾಯಕ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಂ ವಿಲಾಸ್‌ ಪಾಸ್ವಾನ್‌ ಪ್ರತಿನಿಧಿಸುವ ಕ್ಷೇತ್ರವೇ ಹಾಜಿಪುರ. ಈ ಕ್ಷೇತ್ರದಿಂದ ಪ್ರಸಕ್ತ ಸಾಲಿನಲ್ಲಿ ಪಾಸ್ವಾನ್‌ ಸ್ಪರ್ಧೆ ಮಾಡುತ್ತಿಲ್ಲ. ಅವರ ಬದಲು ಪುತ್ರ ಚಿರಾಗ್‌ ಪಾಸ್ವಾನ್‌ ಕಣಕ್ಕೆ ಇಳಿಯಲಿದ್ದಾರೆ ಎಂದು ವಿಶ್ಲೇಷಿಸಲಾಗಿತ್ತು. ಅದರ ಬದಲಾಗಿ ಬಿಹಾರ ಸರ್ಕಾರದಲ್ಲಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವರಾಗಿರುವ ಪಶುಪತಿ ಕುಮಾರ್‌ ಪರಸ್‌ ಅವರನ್ನು ಕಣಕ್ಕೆ ಇಳಿಸಲಾಗಿದೆ. ಎದುರಾಳಿ ಅಭ್ಯರ್ಥಿಯಾಗಿ ಆರ್‌ಜೆಡಿಯ ಶಿವಚಂದ್ರ ರಾಮ್‌ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

1952ರಲ್ಲಿ ಈ ಕ್ಷೇತ್ರ ರಚನೆಯಾದ ಬಳಿಕ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಜೇಶ್ವರ ಪಟೇಲ್‌ ಗೆದ್ದಿದ್ದರು. 1957 ಮತ್ತು 1962ರ ಚುನಾವಣೆಯಲ್ಲಿ ಪಟೇಲ್‌ ಅವರೇ ಸ್ಥಾನ ಉಳಿಸಿಕೊಂಡಿದ್ದರು. 1967ರಲ್ಲಿ ಕಾಂಗ್ರೆಸ್‌ನಿಂದ ವಾಲ್ಮೀಕಿ ಚೌಧರಿ ಗೆದ್ದರು. 1971ರಲ್ಲಿ ರಾಮ್‌ಶೇಖರ್‌ ಪ್ರಸಾದ್‌ ಸಿಂಗ್‌ ಜಯ ಸಾಧಿಸಿದ್ದರು. ಹಾಲಿ ಪ್ರಭಾವಿ ನಾಯಕ ಪಾಸ್ವಾನ್‌ 1977ರ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆಲ್ಲುವ ಮೂಲಕ ತಮ್ಮ ಛಾಪು ಮೂಡಿಸಿದರು. 1980, 1989, 1996, 1998, 1999, 2004, 2014ರ ಚುನಾವಣೆಯಲ್ಲಿ ಪಾಸ್ವಾನ್‌ ಜಯಗಳಿಸಿದ್ದರು. 1991 ಮತ್ತು 2009ರಲ್ಲಿ ಜೆಡಿಯುನ ರಾಂ ಸುಂದರ್‌ ದಾಸ್‌ ಗೆದ್ದಿದ್ದರು.

ಸ್ವಾತಂತ್ರ್ಯ ಪಡೆದ ಬಳಿಕ 1977ರ ವರೆಗೆ ಮಾತ್ರ ಈ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸತತವಾಗಿ ಆಯ್ಕೆಯಾಗುತ್ತಾ ಬಂದಿದ್ದರು. ನಂತರದ ವರ್ಷಗಳಲ್ಲಿ ಅದಕ್ಕೆ ಬ್ರೇಕ್‌ ನೀಡಿದ ಹೆಗ್ಗಳಿಕೆ ಕೇಂದ್ರ ಸಚಿವ ಪಾಸ್ವಾನ್‌ಗೆ ಸೇರಿದೆ. 1977ರಲ್ಲಿ ಪಾಸ್ವಾನ್‌ ಮೊದಲ ಬಾರಿಗೆ 4,69,007 ಮತಗಳನ್ನು ಪಡೆಯುವ ಮೂಲಕ ಅತ್ಯಂತ ಹೆಚ್ಚಿನ ಪ್ರಮಾಣದ ಮತ ಪಡೆದು ಆ ಕಾಲಕ್ಕೇ ಗಿನ್ನಿಸ್‌ ದಾಖಲೆ ಮಾಡಿದ್ದರು. ಈ ದಾಖಲೆಯನ್ನು ದಿ.ಪಿ.ವಿ.ನರಸಿಂಹ ರಾವ್‌ ಒಡಿಶಾದ ನಂದ್ಯಾಲ್‌ನಿಂದ 5 ಲಕ್ಷ ಮತಗಳನ್ನು ಪಡೆಯುವ ಮೂಲಕ ಮುರಿದಿದ್ದರು.

ಈ ಬಿಹಾರದಲ್ಲಿ ಜೆಡಿಯು-ಬಿಜೆಪಿ ಸ್ಥಾನ ಹೊಂದಾಣಿಕೆ ವೇಳೆ ಪಾಸ್ವಾನ್‌ ಎನ್‌ಡಿಎ ತೊರೆವ ಮಾತಾಡಿದ್ದರು. ಅಂತಿಮವಾಗಿ ಗೆದ್ದದ್ದು ಅವರೇ. 1 ರಾಜ್ಯಸಭಾ ಸ್ಥಾನ, 7 ಕ್ಷೇತ್ರಗಳನ್ನು ಅವರು ಪಡೆದುಕೊಂಡಿದ್ದಾರೆ.
ಜಾತಿ ಲೆಕ್ಕಾಚಾರ: ಇಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚು. ಅಲ್ಪಸಂಖ್ಯಾತ ಸಮುದಾಯದ ಪೈಕಿ ಮುಸ್ಲಿಂ ಸಮುದಾಯದ ಪ್ರತಿನಿಧಿನ್ವ ಶೇ.9.5. ಕ್ರಿಶ್ಚಿಯನ್‌ ಸಮುದಾಯ ಶೇ.0.06, ಜೈನ, ಸಿಖ್‌ ಮತ್ತು ಬೌದ್ಧ ಸಮುದಾಯದವರ ಪ್ರಮಾಣ ಶೇ.3ರಷ್ಟು ಇದೆ. ಇನ್ನು ಯಾದವರು, ರಜಪೂತರು, ಭೂಮಿಹಾರರು, ಕುಶ್ವಾಹಾ, ಪಾಸ್ವಾನ್‌, ರವಿದಾಸ ಸಮುದಾಯಕ್ಕೆ ಸೇರಿದವರೂ ಗಣನೀಯ ಪ್ರಮಾಣದಲ್ಲಿ ಇದ್ದಾರೆ.

ಗೆದ್ದಾಗ ಸಚಿವ: ರಾಂ ವಿಲಾಸ್‌ ಪಾಸ್ವಾನ್‌ ಪ್ರತಿಬಾರಿ ಗೆದ್ದಾಗಲೂ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರಗಳ ಅವಧಿಯಲ್ಲಿ ವಿವಿಧ ಖಾತೆಗಳನ್ನು ಅವರು ನಿರ್ವಹಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ ಕ್ಷೇತ್ರದ ಜತೆಗೆ ಬರೋಬ್ಬರಿ ನಲವತ್ತು ವರ್ಷಗಳ ಕಾಲ ನಿಕಟ ಸಂಬಂಧ ಇರಿಸಿಕೊಂಡಿದ್ದಾರೆ. ಜನತಾ ಪರಿವಾರ ವಿಭಜನೆಗೊಂಡು ಪ್ರತ್ಯೇಕಗೊಂಡಾಗಲೂ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಬಿಹಾರದಲ್ಲಿ ಎನ್‌ಡಿಎ ಸ್ಥಾನ ಹೊಂದಾಣಿಕೆ ವೇಳೆ ತಮಗೆ ರಾಜ್ಯಸಭಾ ಸ್ಥಾನ ಬೇಕೇ ಬೇಕು ಎಂದು ಪಟ್ಟುಹಿಡಿದು ಗಿಟ್ಟಿಸಿಕೊಂಡವರು. ಹೀಗಾಗಿ, ಕ್ಷೇತ್ರದ ಜನತೆಗೆ ಅವರನ್ನು ನಿಜಕ್ಕೂ “ಕಳೆದುಕೊಂಡಂತೆ’ ಆಗಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಕ್ಷೇತ್ರದ ಮತದಾರ ಜೋಗೇಶ್ವರ್‌ ಕುಶ್ವಾಹ ಹೇಳುವ ಪ್ರಕಾರ ಪ್ರತಿ ಬಾರಿಯೂ ನಾವು ಅವರಿಗೆ ಮತ ಹಾಕಿ ಆಯ್ಕೆ ಮಾಡುತ್ತಿದ್ದೆವು.

ನವದೆಹಲಿಯಲ್ಲಿರುವ ಅವರ ಕಚೇರಿಗೆ ತೆರಳಿದ್ದಾಗ ಯಾವ ರೀತಿಯಾಗಿ ಸಿಬ್ಬಂದಿ ಕ್ಷೇತ್ರದ ಜತೆಗೆ ನಡೆದುಕೊಳ್ಳುತ್ತಿದ್ದರು ಮತ್ತು ಯಾವ ರೀತಿಯ ಸಮಸ್ಯೆ, ಪರಿಹಾರ ಬೇಕಾದರೂ ಸ್ಪಂದಿಸುತ್ತಿದ್ದರು ಎನ್ನುವುದನ್ನು ಹತ್ತಿರದ ಬಂಧುಗಳು ಹೇಳುವುದನ್ನು ಕೇಳಿದ್ದೆ ಎಂದು ಹೇಳಿದ್ದಾರೆ. ಸದ್ಯ 72 ವರ್ಷ ವಯಸ್ಸಿನ ಅವರು ಕಾಂಗ್ರೆಸ್‌ ವಿರೋಧಿಸಿ ರಾಜಕೀಯ ಜೀವನ ಶುರು ಮಾಡಿದ್ದರೂ, ನಂತರದ ವರ್ಷಗಳಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟ ಮತ್ತು ಬಿಜೆಪಿ ಮೈತ್ರಿಕೂಟದ ಜತೆಗೆ ಕೆಲಸ ಮಾಡಿದ್ದಾರೆ.

ಈ ಬಾರಿ ಕಣದಲ್ಲಿ
– ಪಶುಪತಿ ಕುಮಾರ್‌ ಪರಸ್‌ (ಎಲ್‌ಜೆಪಿ)
– ಶಿವಚಂದ್ರ ರಾಮ್‌ (ಆರ್‌ಜೆಡಿ)

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

40 ಸ್ಥಾನ ಗೆದ್ದರೆ ಕೇರಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುತ್ತಾ? ಏನಿದು ಲೆಕ್ಕಾಚಾರ

40 ಸ್ಥಾನ ಗೆದ್ದರೆ ಕೇರಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆಯೇ? ಏನಿದು ಲೆಕ್ಕಾಚಾರ

9-4-1

“ಆ” ಸಮುದಾಯದ ನಿರ್ಮೂಲನೆಗೆ ಚೀನಾ ಸಂಚು, ಮಕ್ಕಳಾಗದಂತೆ ಮಹಿಳೆಯರಿಗೆ ಆಪರೇಷನ್!

rahul-smr

ಇವು ಅತ್ಯಂತ ಹಾಟ್‌ ಲೋಕಸಭಾ ಕ್ಷೇತ್ರಗಳು

javdekar

ರಾಹುಲ್‌ರ ಜಾಣ ಮರೆವು

27

ಹಿಸಾರ್‌: ಕುಟುಂಬ ರಾಜಕೀಯದ ಕಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.