ಹಾಸನ ಅಖಾಡ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟ ದೇವೇಗೌಡ!
Team Udayavani, Mar 13, 2019, 8:55 AM IST
ಹಾಸನ: ನಾನು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬುಧವಾರ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಹಾಸನದ ಮೂಡಲಹಿಪ್ಪೆ ಗ್ರಾಮದಿಂದ ಜೆಡಿಎಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.
ಇಂದು ಹಾಸನ ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯಕ್ಕೆ ಮೊಮ್ಮಗ ಪ್ರಜ್ವಲ್ ರೇವಣ್ಣ, ಪುತ್ರ ರೇವಣ್ಣ, ಸೊಸೆ ಭವಾನಿ ರೇವಣ್ಣ, ಪಕ್ಷದ ಶಾಸಕರ ಜೊತೆ ಆಗಮಿಸಿ ನಾಮಪತ್ರವನ್ನು ಇಟ್ಟು ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಈ ಬಾರಿ ಹಾಸನದಿಂದ ಸ್ಪರ್ಧಿಸಲ್ಲ. ಮೂಡಲ ಹಿಪ್ಪೆ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದೇನೆ ಎಂದು ಹೇಳಿದರು. ಅಲ್ಲದೇ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಿದರು.