ಕಿಚ್ಚು’ ಹಚ್ಚಿದ ರೇವಣ್ಣ “ಸ್ಪೀಚ್‌’


Team Udayavani, Mar 10, 2019, 1:26 AM IST

revanna.jpg

ಗಂಡ ಸತ್ತು ಒಂದೆರಡು ತಿಂಗಳಾಗಿಲ್ಲ. ಸುಮಲತಾಗೆ ರಾಜಕೀಯ ಬೇಕಿತ್ತಾ’ ಎಂಬ ಲೋಕೋಪಯೋಗಿ ಸಚಿವ
ಎಚ್‌.ಡಿ.ರೇವಣ್ಣ ಹೇಳಿಕೆಗೆ ರಾಜಕೀಯ, ಸಾಮಾಜಿಕ ವಲಯದಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಅವರ ಹೇಳಿಕೆಯನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ. ರಾಜಕೀಯ ನಾಯಕರ “ಟೀಕಾ ಪ್ರಹಾರ’ದ ಝಲಕ್‌ ಇಲ್ಲಿದೆ.

ಜೆಡಿಎಸ್‌ ಚಿಹ್ನೆಯನ್ನೇ ಬದಲಿಸಿಕೊಳ್ಳಲಿ
ಸುಮಲತಾ ಅವರು ಸಹೋದರಿ ಸಮಾನ. ಅವರ ಕುರಿತು ಸಚಿವ ರೇವಣ್ಣ ಕೀಳುಮಟ್ಟದಲ್ಲಿ ಮಾತನಾಡಬಾರದಿತ್ತು. ಜೆಡಿಎಸ್‌ ಪಕ್ಷದ ಚಿಹ್ನೆ ತೆನೆಹೊತ್ತ ಮಹಿಳೆಯಾಗಿದೆ. ಮಹಿಳೆಯರಿಗೆ ಗೌರವ ಕೊಡಲಾಗದಿದ್ದರೆ ಜೆಡಿಎಸ್‌ ಪಕ್ಷದ ಚಿಹ್ನೆಯನ್ನು ಬದಲಿಸಿಕೊಳ್ಳಲಿ. ಈ ಕೆಲಸವನ್ನು ದೇವೇಗೌಡ ಮತ್ತು ರೇವಣ್ಣ ಮೊದಲು ಮಾಡಲಿ. ರೇವಣ್ಣ ಕೂಡಲೇ ಸುಮಲತಾ ಅವರಲ್ಲಿ ಕ್ಷಮೆ ಕೋರಲಿ. ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ. ಆದರೆ, ಅವರಿಗೆ ಲೋಕಸಭೆಗೆ ಟಿಕೆಟ್‌ ಖಚಿತಪಡಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ.
● ಬಾಗಲಕೋಟೆಯಲ್ಲಿ ಕೆ.ಎಸ್‌.ಈಶ್ವರಪ್ಪ ನೀಡಿದ ಹೇಳಿಕೆ

ರೇವಣ್ಣ ಪರ ನಾನು ಕ್ಷಮೆಯಾಚಿಸುವೆ
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಎಚ್‌.ಡಿ.ರೇವಣ್ಣ ಅವರ ಬಾಯಿಂದ ಮಹಿಳೆ ಯರ ಬಗ್ಗೆ ಆ ರೀತಿ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರ ಪರವಾಗಿ ನಾನು ಕ್ಷಮೆಯಾಚಿಸುತ್ತೇನೆ. ನಮ್ಮ ಪಕ್ಷದ ಚಿಹ್ನೆಯೇ ಮಹಿಳೆ ಚಿತ್ರವಾಗಿದೆ. ಅಲ್ಲದೆ,
ಪಕ್ಷ ಮಹಿಳೆಯರಿಗೆ ಅಪಾರ ಗೌರವ ನೀಡುತ್ತದೆ. ಆದರೆ, ಸುಮಲತಾ ಅವರ ಬಗ್ಗೆ ಆ ರೀತಿ ಹಗುರವಾಗಿ ಮಾತನಾಡಿರುವುದು ಬೇಸರ ಮೂಡಿಸಿದೆ.
● ರಾಯಚೂರಿನಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ನೀಡಿದ ಹೇಳಿಕೆ.

ಸುಮಲತಾ ಅವರು ಕನ್ನಡದ ಮಗಳು, ಕನ್ನಡದ ಸೊಸೆ. ಅವರ ರಾಜಕೀಯ ಪ್ರವೇಶದ ಬಗ್ಗೆ ರೇವಣ್ಣ ಅವರು ನಿಕೃಷ್ಟವಾಗಿ ಮಾತನಾಡುವುದು ಸರಿಯಲ್ಲ. ರೇವಣ್ಣ ಅವರ ಹೇಳಿಕೆಯನ್ನು ನೋಡಿದರೆ ಅಂಬರೀಶ್‌ ನಿಧನರಾದಾಗ ರೇವಣ್ಣ ಸುರಿಸಿದ್ದು ಮೊಸಳೆ ಕಣ್ಣೀರೇ ಎಂಬ ಅನುಮಾನ ಬರುತ್ತದೆ. ರೇವಣ್ಣ ಅವರು ತಕ್ಷಣ ಕ್ಷಮೆಯಾಚಿಸಿ, ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು.
● ಶೋಭಾ ಕರಂದ್ಲಾಜೆ, ಸಂಸದೆ

ರೇವಣ್ಣ ವೈಯಕ್ತಿಕವಾಗಿ ಸುಮಲತಾ ಕುರಿತು ಆ ರೀತಿ ಟೀಕೆ ಮಾಡಬಾರದಿತ್ತು. ಕಾಂಗ್ರೆಸ್‌ ಮೇಲಿನ ಅಭಿಮಾನದಿಂದ
ಸುಮಲತಾ ಕೊನೆಯವರೆಗೆ ಟಿಕೆಟ್‌ಗಾಗಿ ಕಾಯುತ್ತಿದ್ದಾ ರೆ. ಆದರೆ, ಮಂಡ್ಯ, ಹಾಸನ ಜೆಡಿಎಸ್‌ ಪಾಲಾಗಿವೆ. ಹೀಗಾಗಿ,
ಕಾಂಗ್ರೆಸ್‌ನಿಂದ ಅಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಕೊಡುವುದು ಕಷ್ಟ.

● ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.