ನಾನು 2ನೇ ಅಂಬೇಡ್ಕರ್ ಎಂದವರೇ ಈಗ ನನಗೆ ಎದುರಾಳಿಗಳು
Team Udayavani, Apr 11, 2019, 3:00 AM IST
ಕಲಬುರಗಿ: “ತಮ್ಮ ಎದೆ ಬಗೆದರೆ ಅಭಿವೃದ್ಧಿ ಹರಿಕಾರ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ. ದೇಶದ 2ನೇ ಅಂಬೇಡ್ಕರ್ ಎಂಬುದಾಗಿ ಮೂರು ತಿಂಗಳ ಹಿಂದೆ ಹೇಳಿದ್ದವರೇ ಈಗ ತಮ್ಮ ಸೋಲಿಗೆ ಷಡ್ಯಂತ್ರ’ ರೂಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.
ಅಫಜಲಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಚಾರ ಸಭೆ ನಡೆಸಿದ ಅವರು, “ಮೂರು ತಿಂಗಳ ಹಿಂದೆಯೂ ತಮ್ಮನ್ನು ಹಾಡಿ ಹೊಗಳುತ್ತಿದ್ದವರೇ ಈಗ ಎದುರಾಳಿ ಅಭ್ಯರ್ಥಿಯಾಗಿದ್ದಾರೆ. ಅವರ ಜತೆ ಇನ್ನೂ ಕೆಲವರು ಸೇರಿದ್ದಾರೆ. ತಾವೇ ಗೆಲ್ಲಲಾಗದವರು ನನ್ನನ್ನು ಸೋಲಿಸಲು ಸಾಧ್ಯವೇ ಇಲ್ಲ. ಕಲಬುರಗಿ ಜನ 11 ಸಲ ಗೆಲ್ಲಿಸುತ್ತಾ ಬಂದಿದ್ದಾರೆ. ಈಗಲೂ ಗೆಲ್ಲಿಸುತ್ತಾರೆ.
ಜನ ಬೆಂಬಲ ಇರುವವರೆಗೂ ಇಂತಹ ನಾಯಕರ್ಯಾರು ಏನು ಮಾಡಲಿಕ್ಕಾಗುವುದಿಲ್ಲ ಎಂದರು. ನಾನು ಸಂಸದನಾಗಿ 10 ವರ್ಷ ಏನು ಕೆಲಸ ಮಾಡಿದ್ದೇನೆ ಎನ್ನುವ ಲೆಕ್ಕ ಕೊಡುತ್ತೇನೆ. ಪ್ರಧಾನಿ ಮೋದಿ ಕಲಬುರಗಿಗೆ ಏನು ಕೊಟ್ಟಿದ್ದಾರೆಂಬುದನ್ನು ಹಾಗೂ ರಾಜ್ಯದಲ್ಲಿ ಗೆದ್ದಿರುವ 18 ಸಂಸದರು ಏನು ಮಾಡಿದ್ದಾರೆ ಎನ್ನುವ ಲೆಕ್ಕ ಕೊಡಲಿ ಎಂದು ಖರ್ಗೆ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ