ಪಕ್ಷೇತರ ಸ್ಪರ್ಧೆ ನನಗೆ ಹೊಸದಲ್ಲ: ವಿನಯ


Team Udayavani, Apr 3, 2019, 6:00 AM IST

b-4

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವ ಕಾರಣಕ್ಕಾಗಿ ಪಕ್ಷ
ವಿಳಂಬ ಮಾಡುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ.
ಇದರಿಂದ ಪಕ್ಷದ ಕಾರ್ಯಕರ್ತರಿಗೆ ಹಿಂಸೆಯಾಗಿದೆ. ಪಕ್ಷೇತರ ಸ್ಪರ್ಧೆ ನನಗೆ ಅಸಾಧ್ಯ ಅಂತೇನಿಲ್ಲ. ಹಿಂದೆ ವಿಧಾನಸಭೆಗೆ ಪಕ್ಷೇತರನಾಗಿ ಗೆಲುವು ಸಾಧಿಸಿದ ಉದಾಹರಣೆಯಿದೆ ಎಂದು ಮಾಜಿ ಸಚಿವ ಹಾಗೂ ಟಿಕೆಟ್‌ ಆಕಾಂಕ್ಷಿ ವಿನಯ ಕುಲಕರ್ಣಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ಹಾಗೂ ಪಕ್ಷದ
ಮುಖಂಡರನ್ನು ನಂಬಿದ್ದೇನೆ. ಅವರು ಯಾವ ನಿರ್ದೇಶನ
ನೀಡುತ್ತಾರೋ ಅಂದರಂತೆ ನಡೆದುಕೊಳ್ಳುತ್ತೇನೆ. ನಾಮಪತ್ರ ಸಲ್ಲಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ. ಸಾಕಷ್ಟು ದಾಖಲೆಗಳು ಬೇಕಾಗಿರುವ ಕಾರಣಕ್ಕೆ ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಬಿ
ಫಾರಂಗಾಗಿ ಕಾಯುತ್ತಿದ್ದೇನೆ ಎಂದರು.

ಟಿಕೆಟ್‌ ಘೋಷಣೆ ಇಷ್ಟೊಂದು ವಿಳಂಬ ಆಗಬಾರದಿತ್ತು. ಇದರಿಂದ ಪಕ್ಷದ ಕಾರ್ಯಕರ್ತರು ನೊಂದುಕೊಂಡಿದ್ದು, ಸಾಕಷ್ಟು ಟೀಕೆಗಳನ್ನು
ಅನುಭವಿಸುವಂತಾಗಿದೆ. ಇಷ್ಟೆಲ್ಲ ಆದ ನಂತರ ಟಿಕೆಟ್‌ ಕೊಡುವುದು ಸೂಕ್ತವಲ್ಲ ಎನ್ನಿಸುತ್ತಿದೆ. ನಿತ್ಯವೂ ಪಕ್ಷದ ಕಾರ್ಯಕರ್ತರಿಗೆ ಉತ್ತರ ನೀಡಿ ಬೇಸರ ಮೂಡಿದೆ ಎಂದರು.

ಶಾಕೀರ್‌ ಸನದಿ ಸ್ಪರ್ಧೆ ವಿರುದ್ಧ ವೈರಲ್‌
ಬೆಂಗಳೂರು: ಶಾಕೀರ್‌ ಸನದಿ ಧಾರವಾಡ ಲೋಕಸಭಾ ಅಭ್ಯರ್ಥಿ ಎಂದು ಸುಳ್ಳು ಪಟ್ಟಿ ಬಿಡುಗಡೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಶಾಕೀರ್‌ ಸನದಿ ಅವರಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಅನೇಕರು ಸಲಹೆ ನೀಡಿದ್ದಾರೆ.
ಶಾಕೀರ್‌ ಸನದಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಕೆಪಿಸಿಸಿ ಅಧಿಕೃತ ಫೇಸ್‌ಬುಕ್‌ ಹಾಗೂ ಮಾಧ್ಯಮ ವಿಭಾಗದ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಪ್ರಕಟಿಸಲಾಯಿತು. ತಕ್ಷಣ ಅದು ಫೇಕ್‌ ಪಟ್ಟಿ ಎಂದು ಅರಿತ ಕೆಪಿಸಿಸಿ ಮಾಧ್ಯಮ ವಿಭಾಗ ಪ್ರಕಟಿಸಿರುವ ಪಟ್ಟಿಯನ್ನು ಅಳಿಸಿ ಹಾಕಿ, ಅದು ನಕಲಿ ಆಯ್ಕೆ ಪಟ್ಟಿ ಎಂದು ಸ್ಪಷ್ಟೀಕರಣ ನೀಡಲಾಯಿತು. ಅಭ್ಯರ್ಥಿ ಆಯ್ಕೆಯಾಗಿದೆ ಎಂಬ ಫೇಕ್‌ ಪಟ್ಟಿ ಬಿಡುಗಡೆಯಾಗಿರುವ ಬಗ್ಗೆ ಶಾಕೀರ್‌ ಸನದಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಈ ರೀತಿ ಸುಳ್ಳು ಸುದ್ದಿ ಪ್ರಕಟಿಸದಂತೆ ಮನವಿ ಮಾಡಿದ್ದಾರೆ. ಕೆಲವರು ಅವರಿಗೆ ಟಿಕೆಟ್‌ ಸಿಕ್ಕಿದೆ ಎಂಬ ಭಾವನೆಯಲ್ಲಿ ಅಭಿನಂದನೆ ಸಲ್ಲಿಸಿದ್ದರೆ, ಕೆಲವು ಕಾಂಗ್ರೆಸ್‌ ಕಾರ್ಯಕರ್ತರು. ಶಾಕೀರ್‌ ಸನದಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ.

ಅನಂತಕುಮಾರ ಋಣ ತೀರಿಸದ ಜೋಶಿ
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಏಳ್ಗೆಯಲ್ಲಿ ಕೇಂದ್ರದ ಮಾಜಿ ಸಚಿವ ದಿ| ಅನಂತಕುಮಾರ ಅವರ ಆಶೀರ್ವಾದ ದೊಡ್ಡದು. ಆದರೆ, ಸಹೋದರಿ ತೇಜಸ್ವಿನಿ ಅನಂತಕುಮಾರ ಅವರಿಗೆ ಟಿಕೆಟ್‌ ತಪ್ಪಿದಾಗ ಪ್ರಹ್ಲಾದ ಜೋಶಿ ತುಟಿ ಬಿಚ್ಚಲಿಲ್ಲ. ಅನಂತಕುಮಾರ ಅವರ ಋಣ ತೀರಿಸುವ ನಿಟ್ಟಿನಲ್ಲಿ
ತೇಜಸ್ವಿನಿ ಅವರಿಗೆ ಟಿಕೆಟ್‌ ಕೊಡಿಸುವ ಪ್ರಯತ್ನ ಕೂಡ ಮಾಡಲಿಲ್ಲ. ಹಿಂದೆ ಈ ಭಾಗದ ಪ್ರಭಾವಿ ನಾಯಕ ರಾಜೇಂದ್ರ ಗೋಖಲೆ ಅವರ ಟಿಕೆಟ್‌ ತಪ್ಪಿಸಿ ರಾಜಕಾರಣ ಮಾಡಿದ್ದ ಜೋಶಿಯವರು ಕಾರ್ಯರ್ತರನ್ನು ಬೆಳೆಸುವುದು ಹಾಗೂ ತೇಜಸ್ವಿನಿ ಅವರ ಪರವಾಗಿ ನಿಲ್ಲುವುದು ದೂರದ ಮಾತು ಎಂದು ವಿನಯ ಹೇಳಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.