ಬಂಡಾಯ ಎಳುತ್ತೇನೆ;ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿನ ಪೂಜಾರಿ
Team Udayavani, Mar 14, 2019, 1:52 PM IST
ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಸ್ವಪಕ್ಷದ ವಿರುದ್ಧವೇ ಮತ್ತೆ ಗುಡುಗಿದ್ದು , ಲೋಕಸಭಾ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೂಜಾರಿ ಅವರು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಆರೋಪವಿರುವ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ಗೆ ಟಿಕೆಟ್ ನೀಡಲು ಮುಂದಾಗಿದೆ. ಅವರಿಗೆ ಟಿಕೆಟ್ ನೀಡಿದರೆ ನಾನು ಬಂಡಾಯ ಅಭ್ಯರ್ಥಿಯಾಗುತ್ತೇನೆ ಎಂದು ಗುಡುಗಿದ್ದಾರೆ.
ರಮಾನಾಥ ರೈ, ವಿನಯ ಕುಮಾರ್ ಸೊರಕೆ ಇಲ್ಲ ಬಿ.ಕೆ.ಹರಿ ಪ್ರಸಾದ್ ಅವರಿಗೆ ಟಿಕೆಟ್ ಕೊಡಿ. ನಾನು ಅವರ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ನನಗೂ ಸ್ಪರ್ಧಿಸಬೇಕು ಎಂದು ಹಲವರು ಬೇಡಿಕೆ ಇಟ್ಟಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಟಿಕೆಟ್ ಕೇಳುತ್ತೇನೆ. ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದರು.
ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಐವಾನ್ ಡ ಸೋಜಾ ಅವರಿಗೂ ಟಿಕೆಟ್ ಕೊಡಬಾರದು. ಅವರು ಸಿದ್ದರಾಮಯ್ಯ ಅವರು ಕುದ್ರೋಳಿ ದೇವಸ್ಥಾನಕ್ಕೆ ಬರದಂತೆ ತಡೆದವರು ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ