ಆರು ಸ್ಥಾನಗಳಲ್ಲಿ ಗೆಲುವು: ಜೆಡಿಎಸ್ ಕಾರ್ಯತಂತ್ರ
Team Udayavani, Mar 15, 2019, 1:52 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನೊಂದಿಗೆ ಗುದ್ದಾಡಿ ಎಂಟು ಕ್ಷೇತ್ರಗಳನ್ನು ಪಡೆದುಕೊಂಡಿರುವ ಜೆಡಿಎಸ್ 6 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಕಾರ್ಯತಂತ್ರ ರೂಪಿಸಿದೆ. ಮಂಡ್ಯ, ಹಾಸನ, ತುಮಕೂರು, ಶಿವಮೊಗ್ಗ, ವಿಜಯಪುರ, ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜತೆಗೂಡಿ ಶ್ರಮ ಹಾಕಿ ಸಂಸತ್ನಲ್ಲಿ ತನ್ನ ಬಲವನ್ನು ಎರಡರಿಂದ ಆರಕ್ಕೆ ಹೆಚ್ಚಿಸಿಕೊಳ್ಳಲು ಮುಂದಾಗಿದೆ.
ಕಾಂಗ್ರೆಸ್ ಜತೆ ಮೈತ್ರಿಗೆ ಒಪ್ಪಿ ಹನ್ನೆರಡು ಕ್ಷೇತ್ರಗಳಿಗೆ ಬೇಡಿಕೆಯಿಟ್ಟು ಅಂತಿಮವಾಗಿ ಎಂಟು ಕ್ಷೇತ್ರಗಳಿಗೆ ತೃಪ್ತಿ ಹೊಂದಿರುವ ಜೆಡಿಎಸ್, ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿ ಕೊರತೆ ಇರುವುದರಿಂದ ಉಳಿದ ಆರು ಕ್ಷೇತ್ರಗಳಲ್ಲಿ ಗೆಲ್ಲುವ “ಟಾರ್ಗೆಟ್’ ಹೊಂದಿದೆ.
ಮಂಡ್ಯ, ಹಾಸನ, ಶಿವಮೊಗ್ಗ ಕ್ಷೇತ್ರಕ್ಕೆ ಈಗಾಗಲೇ ಅಭ್ಯರ್ಥಿಯೂ ಪಕ್ಕಾ ಆಗಿದ್ದು ತುಮಕೂರು ಕ್ಷೇತ್ರಕ್ಕೆ ಬಹುತೇಕ ಎಚ್.ಡಿ.ದೇವೇಗೌಡರೇ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ವಿಜಯಪುರ ಕ್ಷೇತ್ರ
ದಲ್ಲಿ ಮಾಜಿ ಶಾಸಕ ಎಸ್.ಕೆ.ರಾಥೋಡ್ ಪುತ್ರ ಅರ್ಜುನ್ ರಾಥೋಡ್ ಅಥವಾ ಶಾಸಕ ದೇವಾನಂದ ಚೌವ್ಹಾಣ್ ಪತ್ನಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಆನಂದ್ ಅಸ್ನೋಟಿಕರ್ ಅಥವಾ ಆರ್.ವಿ. ದೇಶಪಾಂಡೆ ಪುತ್ರನೇ ಜೆಡಿಎಸ್ ಅಭ್ಯರ್ಥಿ ಯಾಗಿ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ.
ಎಚ್.ಡಿ.ದೇವೇಗೌಡ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ, ತುಮಕೂರು ಕ್ಷೇತ್ರದಿಂದ ರಮೇಶ್ಬಾಬು ಅಥವಾ ಸುರೇಶ್ಬಾಬು ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ದೇವೇಗೌಡರು ಉತ್ತರದಿಂದ ಸ್ಪರ್ಧೆ ಮಾಡಿದರೆ, ಬೆಂಗಳೂರು ಉತ್ತರ ಮತ್ತು ತುಮಕೂರು ಎರಡೂ ಕಡೆ ಗೆಲ್ಲಬಹುದು ಎಂಬ ಲೆಕ್ಕಾಚಾರವೂ ಇದೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ತುಮಕೂರಿನ ಮುದ್ದಹನುಮೇಗೌಡರನ್ನು ಜೆಡಿಎಸ್ ಅಭ್ಯರ್ಥಿ ಮಾಡಿ ಎಂಬ ಒತ್ತಡವೂ ಇದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಪರಿಷತ್ ಮಾಜಿ ಸದಸ್ಯ ವೈ.ಎಸ್.ವಿ.ದತ್ತಾ ಅವರ ಹೆಸರು ಪ್ರಸ್ತಾವವಾಗುತ್ತಿದೆ. ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮ ಕ್ಷಣದಲ್ಲಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?