ಕಾಂಗ್ರೆಸ್‌ ಶಾಸಕ; ಸಂಸತ್ತಿಗೆ ಬಿಜೆಪಿಗೇ ಲೀಡ್‌!


Team Udayavani, Mar 21, 2019, 1:00 AM IST

parliment.jpg

ಬಂಟ್ವಾಳ: ಬಂಟ್ವಾಳದಲ್ಲೂ ನಿಧಾನಗತಿಯಲ್ಲಿ ಚುನಾವಣೆಯ ಬಿಸಿ ಏರುತ್ತಿದೆ. ಬಂಟ್ವಾಳದಲ್ಲಿ ವಿಶೇಷವೆಂದರೆ ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾಗಲೂ ಎಂಪಿ ಚುನಾವಣೆಯಲ್ಲಿ ಬಿಜೆಪಿಯೇ ಲೀಡ್‌ ಪಡೆದುಕೊಂಡಿದೆ.

2009 ಹಾಗೂ 2014ರ ಎರಡೂ ಲೋಕ ಸಭಾ ಚುನಾವಣೆಗಳಲ್ಲೂ ಬಂಟ್ವಾಳದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾಗಲೂ ಈ ಕ್ಷೇತ್ರದಲ್ಲಿ ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ಅವರು ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಎದುರು ಮುನ್ನಡೆ ಸಾಧಿಸಿದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತಾದರೂ ಆಗ ಶಾಸಕರಾಗಿ ಬಿಜೆಪಿಯ ಬಿ. ನಾಗರಾಜ ಶೆಟ್ಟಿ ಗೆದ್ದಿದ್ದರು. 

ಬಂಟ್ವಾಳ ಕ್ಷೇತ್ರದಲ್ಲೆಷ್ಟು ಲೀಡ್‌?
2008 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಮಾನಾಥ ರೈ (61,560 ಮತಗಳು) ಅವರು ಬಿಜೆಪಿಯ ಬಿ. ನಾಗರಾಜ ಶೆಟ್ಟಿ (60,309 ಮತಗಳು) ವಿರುದ್ಧ 1,251 ಮತಗಳಿಂದ ಗೆದ್ದಿದ್ದರು. ಆದರೆ 2009ರ ಲೋಕಸಭಾ ಚುನಾವಣೆಯಲ್ಲಿ ನಳಿನ್‌ಕುಮಾರ್‌ ಕಟೀಲು ಪ್ರಥಮ ಬಾರಿಗೆ ಚುನಾವಣೆಗೆ ನಿಂತಾಗ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯು (69,560 ಮತಗಳು), ಕಾಂಗ್ರೆಸ್‌ (62,513) ವಿರುದ್ಧ 6,851 ಮತಗಳಿಂದ ಮುನ್ನಡೆ ಸಾಧಿಸಿತ್ತು.

2013ರ ಎಂಎಲ್‌ಎ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಮಾನಾಥ ರೈ (81,665 ಮತಗಳು) ಅವರು ಬಿಜೆಪಿಯ ರಾಜೇಶ್‌ ನಾೖಕ್‌(63,815 ಮತಗಳು) ಅವರ ವಿರುದ್ಧ 17,850 ಮತಗಳಿಂದ ಗೆದ್ದಿದ್ದರು. ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯು(83,327 ಮತಗಳು) ಕಾಂಗ್ರೆಸ್‌(69,000) ವಿರುದ್ಧ 14,327 ಮತಗಳಿಂದ ಮುನ್ನಡೆ ಸಾಧಿಸಿತ್ತು.

ಆದರೆ 2018ರಲ್ಲಿ ನಡೆದ ಎಂಎಲ್‌ಎ ಚುನಾವಣೆಯ ಬಿಜೆಪಿ ರಾಜೇಶ್‌ ನಾೖಕ್‌ ಉಳಿಪ್ಪಾಡಿ (97,802 ಮತಗಳು) ಅವರು ಕಾಂಗ್ರೆಸ್‌ನ ರಮಾನಾಥ ರೈ (81,831) ಅವರ ವಿರುದ್ಧ 15,971 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿಯು ಹೆಚ್ಚಿನ ವಿಶ್ವಾಸ ದಲ್ಲಿದ್ದರೂ, ಬಂಟ್ವಾಳದಲ್ಲಿ ತಮ್ಮ ಅಧಿಪತ್ಯವನ್ನು ಮರು ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಶತ ಪ್ರಯತ್ನ ನಡೆಸಲಿದ್ದಾರೆ.

ಬಂಟ್ವಾಳ ಕ್ಷೇತ್ರದಲ್ಲಿ ಶಾಂತ ರೀತಿಯ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಆಯೋಗವು ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದು, ದ.ಕ.ಜಿ.ಪಂ.ನ ಉಪಕಾರ್ಯದರ್ಶಿ ಮಹೇಶ್‌ ಅವರು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜತೆಗೆ ತಹಶೀಲ್ದಾರ್‌ ಸಣ್ಣರಂಗಯ್ಯ ಅವರು ಸೇರಿದಂತೆ ಸರಕಾರಿ ಸಿಬಂದಿ ವಿವಿಧ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಮೋದಿ ಕುರಿತು ಮಾತು
ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯ ಕರ್ತರು ಅಭ್ಯರ್ಥಿಯ ಕುರಿತು ಹೆಚ್ಚು ಮಾತನಾಡುತ್ತಿಲ್ಲ. ಬದಲಾಗಿ ಯಾರೇ ಅಭ್ಯರ್ಥಿ ಯಾದರೂ ಮೋದಿಗಾಗಿ ನಾವು ಎಂಬ ರೀತಿಯಲ್ಲಿ ಮಾತನಾಡು ತ್ತಿ¨ªಾರೆ. ಕೆಲವೊಂದೆಡೆ ಹಾಲಿ ಸಂಸದರ ಕುರಿತು ಅಸಮಾಧಾನದ ಮಾತುಗಳು ಕೇಳಿ ಬರುತ್ತಿದೆ. ಹಾಗೆಂದು ನಾವು ಮೋದಿಗಾಗಿ ಯಾರೇ ಅಭ್ಯರ್ಥಿಯಾ ದರೂ ಚಿಂತೆಯಿಲ್ಲ ಎನ್ನುತ್ತಿ¨ªಾರೆ. 

ಕಾಂಗ್ರೆಸ್‌ನಲ್ಲಿ ಉತ್ಸಾಹ
ದ.ಕ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಈ ಬಾರಿ ಮಾಜಿ ಸಚಿವ ಬಿ. ರಮಾನಾಥ ರೈ ಆಯ್ಕೆ ಯಾಗುತ್ತಾರೆ ಎಂಬ ಮಾತು ಹಲವು ಸಮಯಗಳಿಂದ ಕೇಳಿ ಬರುತ್ತಿತ್ತು. ಬಂಟ್ವಾಳದಲ್ಲಿ 6 ಬಾರಿ ಗೆದ್ದು ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿರುವ ರೈ ಅವರು ಅಭ್ಯರ್ಥಿಯಾದರೆ ಹೆಚ್ಚಿನ ಮತ ಪಡೆಯುತ್ತಾರೆ. ಜತೆಗೆ ಬಿಜೆಪಿಯಲ್ಲಿ ಸಂಸದರ ಕುರಿತು ಭಿನ್ನಾಭಿ ಪ್ರಾಯಗಳಿರುವುದರಿಂದ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಬಂಟ್ವಾಳದ ಕಾಂಗ್ರೆಸ್‌ ಕಾರ್ಯಕರ್ತರು ಅಭಿಪ್ರಾಯ ಪಡುತ್ತಿದ್ದರು. ಹೀಗಾಗಿ ರೈ ಅವರ ಅಭ್ಯರ್ಥಿಯಾಗುತ್ತಾರೆ ಎಂಬ ಮಾತು ಬಂಟ್ವಾಳ ಕಾಂಗ್ರೆಸ್‌ನಲ್ಲಿ ಉತ್ಸಾಹ ಹೆಚ್ಚಿಸುವಂತೆ ಮಾಡಿತ್ತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.