ಸನ್ಯಾಸ ಸ್ವೀಕರಿಸಲು ರೇವಣ್ಣ ಸಿದ್ಧತೆ ಮಾಡಿಕೊಳ್ಳಲಿ: ಬಿಎಸ್ವೈ
Team Udayavani, Apr 13, 2019, 3:00 AM IST
ಹುಬ್ಬಳ್ಳಿ/ಗಂಗಾವತಿ: ಮೇ 23ರಂದು ಸನ್ಯಾಸ ಸ್ವೀಕರಿಸಲು ಸಚಿವ ಎಚ್.ಡಿ.ರೇವಣ್ಣ ಸಿದ್ಧತೆ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
ಗಂಗಾವತಿಯಲ್ಲಿ ನಡೆದ ಬಿಜೆಪಿಯ ವಿಜಯಸಂಕಲ್ಪ ರ್ಯಾಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ಪ್ರಧಾನಿಯಾಗಿ ಮೋದಿ ಮತ್ತೂಮ್ಮೆ ಆಯ್ಕೆಯಾದರೆ ರಾಜಕೀಯ ಸನ್ಯಾಸ ಸ್ವೀಕರಿಸುವ ಸಚಿವ ರೇವಣ್ಣ ಅವರು ತಮ್ಮ ಹೇಳಿಕೆಗೆ ಬದ್ಧವಾಗಿರಬೇಕು. ಮೇ 23ರಂದು ಸನ್ಯಾಸ ಸ್ವೀಕರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ರೇವಣ್ಣ ಹೇಳಿರುವ ಗೆಲುವಿನ ಸಂಖ್ಯೆ ನಿಂಬೆ ಹಣ್ಣಿನ ಭವಿಷ್ಯ. ಆದರೆ, ನಾವು ಹೇಳುತ್ತಿರುವ 22 ಅಭ್ಯರ್ಥಿಗಳ ಗೆಲುವು ಜನರ ಬಳಿ ಹೋಗಿ ಸಂಗ್ರಹಿಸಿದ ಮಾಹಿತಿ. ಭವಿಷ್ಯ ಹೇಳುವ ಸಂಖ್ಯೆಗೂ ಜನರು ನೀಡುವ ಅಭಿಪ್ರಾಯಕ್ಕೂ ಬಹಳ ವ್ಯತ್ಯಾಸವಿದೆ ಎಂದರು.
ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಇಡೀ ರಾಜ್ಯವೇ ಬೇಸತ್ತು ಹೋಗಿದೆ. ರಾಜ್ಯ,ರಾಷ್ಟ್ರದ ಅಭಿವೃದ್ಧಿಗಿಂತ ತಮ್ಮ ಕುಟುಂಬದ ಉದ್ಧಾರವೇ ಅವರಿಗೆ ಮುಖ್ಯವಾಗಿದೆ. ನಮಲ್ಲಿ ಅಂತಹ ಕುಟುಂಬ ರಾಜಕಾರಣವಿಲ್ಲ. ಒಂದು ಕುಟುಂಬದಿಂದ ಇಬ್ಬರು ಸ್ಥಾನಗಳನ್ನು ಹೊಂದಿದ್ದರೆ, ಅದು ಕುಟುಂಬ ರಾಜಕಾರಣವಲ್ಲ. ಆದರೆ, ದೇವೇಗೌಡರ ಕುಟುಂಬದಲ್ಲಿ ಮಕ್ಕಳು, ಸೊಸೆಯಂದಿರು, ಇದೀಗ ಮೊಮ್ಮಕ್ಕಳ ಕಾಟ ಬೇರೆ ಎಂದು ಟೀಕಿಸಿದರು.
ಚುನಾವಣೆ ಬಳಿಕ ಸರ್ಕಾರ ಪತನ: ಕಾಂಗ್ರೆಸ್ನಲ್ಲಿ ಮನಸ್ತಾಪ ಹೆಚ್ಚಾಗುತ್ತಿದ್ದು, ಲೋಕಸಭಾ ಚುನಾವಣೆ ನಂತರ ಇದು ಸ್ಫೋಟಗೊಳ್ಳಲಿದೆ. ಕೋಮಾ ಸ್ಥಿತಿಯಲ್ಲಿರುವ ಸಮ್ಮಿಶ್ರ ಸರ್ಕಾರ ಕೊನೆಯಾಗಲಿದೆ. 104 ಶಾಸಕರಿರುವ ಬಿಜೆಪಿ ಅಧಿ ಕಾರಕ್ಕೇರಲಿದೆ. ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಅಲ್ಲಿರುವ ಶಾಸಕರಿಗೆ ಬೇಸರವಾಗಿದೆ.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಮಂಡ್ಯ, ಹಾಸನ, ರಾಮನಗರಕ್ಕೆ ರಾಜ್ಯ ಸರ್ಕಾರ ಸೀಮಿತವಾಗಿದೆ ಎಂದರು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಖಚಿತವಾಗಿದ್ದು, ಮಗ ಸೋಲುತ್ತಾನೆ ಎನ್ನುವ ಕಾರಣಕ್ಕೆ ಸಿಎಂ ಕುಮಾರಸ್ವಾಮಿ ಹತಾಶರಾಗಿದ್ದಾರೆ. ಹೀಗಾಗಿ, ಜನರು ಮಾಧ್ಯಮಗಳ ಮೇಲೆ ಹಲ್ಲೆ ಮಾಡುವ ಸಾಧ್ಯತೆಗಳಿವೆ ಎಂದು ಹೆದರಿಸುವ ಕೆಲಸ ಅವರಿಂದ ನಡೆಯುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ