“ಬಿಜೆಪಿ ಕೊಡುಗೆ ವಿಚಾರ ಚರ್ಚೆಗೆ ಬರಲಿ’


Team Udayavani, Apr 5, 2019, 9:34 AM IST

vinay-raj

ಮಂಗಳೂರು: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಪ್ರಶ್ನಿಸುತ್ತಿರುವ ಬಿಜೆಪಿಯವರು ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 28 ವರ್ಷಗಳಲ್ಲಿ ಬಿಜೆಪಿಯ ಕೊಡುಗೆ ಏನು, ಕಳೆದ 10 ವರ್ಷಗಳಲ್ಲಿ ಹಾಲಿ ಸಂಸದರ ಕೊಡುಗೆ ಏನು ಎಂಬ ಬಗ್ಗೆ ಅಂಕಿಅಂಶಗಳ ಜತೆಗೆ ಚರ್ಚೆಗೆ ಬರಲಿ, ಕಾಂಗ್ರೆಸ್‌ ಸಾಮಾನ್ಯ ಕಾರ್ಯಕರ್ತ ಕೂಡ ಅವರ ಹೇಳಿಕೆಗಳನ್ನು ಸುಳ್ಳು ಎಂದು ಸಾಬೀತು ಮಾಡಲು ಶಕ್ತನಾಗಿದ್ದಾನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಹಾಗೂ ಸಂಯೋಜಕ ಎ.ಸಿ. ವಿನಯ್ ರಾಜ್‌ ಸವಾಲು ಹಾಕಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರ ಆದರ್ಶ ಗ್ರಾಮ ಬಳ್ಪವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲ; ಅಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು ವಿದ್ಯುತ್‌ ಸಂಪರ್ಕವೇ ಸರಿಯಾಗಿಲ್ಲ ಎಂದು ಆಪಾದಿಸಿದರು.

ಸ್ಮಾರ್ಟ್‌ ಸಿಟಿಯನ್ನು ಕೇಂದ್ರದ ಕೊಡುಗೆ, ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳಿ ಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ 2,000 ಕೋಟಿ ರೂ.ಗಳ ಈ ಯೋಜನೆಯಲ್ಲಿ ಕೇಂದ್ರ ಸರಕಾರದ ಪಾಲು ನಾಲ್ಕನೇ ಒಂದು ಭಾಗ ಮಾತ್ರ. 500 ಕೋಟಿ ರೂ.ಗಳನ್ನು ಮಾತ್ರ ಕೇಂದ್ರ ಸರಕಾರ ಭರಿಸಲಿದೆ. ಉಳಿದ 500 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಮತ್ತು ಬಾಕಿ ಹಣವನ್ನು ಸ್ಥಳೀಯ ಸಂಸ್ಥೆಗಳು ಭರಿಸಬೇಕಾಗಿದೆ. ಹಾಗಿರುವಾಗ ಕೇಂದ್ರದ ಯೋಜನೆ ಹೇಗಾಗುತ್ತದೆ? 600 ಮೀಟರ್‌ ಉದ್ದ ಪಂಪ್‌ವೆಲ್‌ ಮೇಲ್ಸೇತುವೆ ಮಾಡಲು 8 ವರ್ಷಗಳಾದರೂ ಸಾಧ್ಯವಾಗಿಲ್ಲ. ಜಿಲ್ಲೆಯ ವ್ಯಾಪಾರ ವಹಿವಾಟಿನ ಪ್ರಧಾನ ಸಂಪರ್ಕ ರಸ್ತೆಯಾದ ತೊಕ್ಕೊಟ್ಟು ರಸ್ತೆಯ ಮೇಲ್ಸೇತುವೆ ಕೂಡ ಪೂರ್ಣಗೊಂಡಿಲ್ಲ. ಇವೆಲ್ಲವನ್ನೂ ಗಮನಿಸಿದರೆ ಸಂಸದ ನಳಿನ್‌ ಅವರೊಬ್ಬ ವೈಫ‌ಲ್ಯಗಳ ಸರದಾರ ಎನ್ನಬಹುದು ಎಂದವರು ಟೀಕಿಸಿದರು.

ಮಂಗಳೂರು- ತಲಪಾಡಿ- ಸುರತ್ಕಲ್‌ -ಕುಂದಾಪುರ -ಗೋವಾ ಗಡಿ ತನಕ ನಾಲ್ಕು ಪಥಗಳ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಯೋಜನೆ ನಿರ್ಮಿಸಿ, ನಿರ್ವಹಿಸಿ ಹಸ್ತಾಂತರಿಸುವ (ಬಿಒಟಿ) ಮಾದರಿಯಲ್ಲಿ ಅನುಷ್ಠಾನ ಆಗಬೇಕಿತ್ತು. 2016ರಲ್ಲಿ ಮುಕ್ತಾಯ ಆಗಬೇಕಾದ ಇದು ಇನ್ನೂ ಪೂರ್ತಿಯಾಗಿಲ್ಲ. ರೈಲು ನಿಲ್ದಾಣವನ್ನು ವಿಶ್ವ ದರ್ಜೆಗೆ ಏರಿಸಲಾಗುವುದು ಎಂದು ಪದೇ ಪದೇ ಸಂಸದರು ಹೇಳುತ್ತಾರೆ. ಆದರೆ ನಿಲ್ದಾಣದ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಂಸದರಿದ್ದ ಸಂದರ್ಭ ಬಂದರು, ರೈಲು ನಿಲ್ದಾಣ ನಿರ್ಮಾಣ, ವಿಮಾನ ನಿಲ್ದಾಣ ಜತೆಗೆ ಎನ್‌ಐಟಿಕೆಯಂತಹ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿವೆ ಎಂದರು.  28 ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿಯವರೇ ಸಂಸದರಾಗಿದ್ದರೂ ಅಭಿವೃದ್ಧಿ ಶೂನ್ಯವಾಗಿದೆ. ಆದ್ದರಿಂದ ಮಿಥುನ್‌ ರೈ ಅವರ ಪರ ಜಿಲ್ಲೆಯ ಜನರು ಮತದಾನ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಟಿ.ಕೆ. ಸುಧೀರ್‌, ವಿಶ್ವಾಸ್‌ ಕುಮಾರ್‌ ದಾಸ್‌, ನವನೀತ್‌, ನಝೀರ್‌ ಬಜಾಲ್‌, ಫಾರೂಕ್‌, ಪ್ರಕಾಶ್‌ ಸಾಲಿಯಾನ್‌, ಸದಾಶಿವ ಉಳ್ಳಾಲ್‌, ನೀರಜ್‌ಪಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.