ಹಾವೇರಿಯಲ್ಲಿ ಲಿಂಗಾಯತರ ಕಾದಾಟ


Team Udayavani, Mar 28, 2019, 7:07 AM IST

93

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಗದಗ ಮೂಲದ ಡಿ.ಆರ್‌. ಪಾಟೀಲ ಅವರಿಗೆ ಪಕ್ಷ ಘೋಷಿಸಿದ್ದು ಹಲವು ದಿನಗಳಿಂದ ತಲೆದೊರಿದ್ದಗೊಂದಲ, ಕುತೂಹಲಗಳಿಗೆ ತೆರೆಬಿದ್ದಿದೆ. ಗದಗ ಮೂಲದ ಡಿ.ಆರ್‌. ಪಾಟೀಲ ಮಾಜಿ
ಶಾಸಕರು. 40 ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು ನಾಲ್ಕು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಕಳೆದ ಎರಡೂ¾ರು ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಈ ಬಾರಿ ಅವರಿಗೆ ಪಕ್ಷ ಟಿಕೆಟ್‌ ಕೊಟ್ಟಿದೆ. ಟಿಕೆಟ್‌ ಹಂಚಿಕೆ ನಿರ್ಧರಿಸುವ ಪಕ್ಷದ ಸ್ಕ್ರೀನಿಂಗ್‌ಕಮಿಟಿ ಮುಂದೆ ಕುರುಬ ಸಮುದಾಯದ ಬಸವರಾಜ ಶಿವಣ್ಣನವರ ಹಾಗೂ ರಡ್ಡಿ ಲಿಂಗಾಯತ ಸಮುದಾಯದ ಡಿ.ಆರ್‌. ಪಾಟೀಲ ಹೆಸರು ಮಾತ್ರ ಹೋಗಿತ್ತು. ಕೊಪ್ಪಳ ಕ್ಷೇತ್ರದಲ್ಲಿ ಕುರುಬ ಸಮುದಾಯದ ರಾಜಶೇಖರ ಹಿಟ್ನಾಳ ಹಾಗೂ ಲಿಂಗಾಯತ ಸಮುದಾಯದ
ಬಸವರಾಜ ರಾಯರಡ್ಡಿ, ಬಸನಗೌಡ ಬಾದರ್ಲಿ ಪ್ರಮುಖ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಕೊಪ್ಪಳ ಕ್ಷೇತ್ರದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್‌ ನೀಡಿದರೆ ಹಾವೇರಿಯಲ್ಲಿ ರಡ್ಡಿ ಲಿಂಗಾಯತರಿಗೆ ಟಿಕೆಟ್‌ ನೀಡಬೇಕು. ಒಂದು ವೇಳೆ ಕೊಪ್ಪಳದಲ್ಲಿ ಲಿಂಗಾಯತರಿಗೆ
ಟಿಕೆಟ್‌ ನೀಡಿದರೆ ಹಾವೇರಿಯಲ್ಲಿ ಕುರುಬ ಸಮುದಾಯದ ಮುಖಂಡರಿಗೆ ಟಿಕೆಟ್‌ ನೀಡಲು ಪಕ್ಷ ನಿರ್ಧರಿಸಿತ್ತು. ಆ ಪ್ರಕಾರ ಕೊಪ್ಪಳದಲ್ಲಿ ಕುರುಬ ಸಮುದಾಯದ ರಾಜಶೇಖರ ಹಿಟ್ನಾಳ ಅವರಿಗೆ ಟಿಕೆಟ್‌ ನೀಡಿದ ಪಕ್ಷ, ಹಾವೇರಿ ಕ್ಷೇತ್ರದಲ್ಲಿ ರಡ್ಡಿ ಲಿಂಗಾಯತ ಮುಖಂಡ ಡಿ.ಆರ್‌. ಪಾಟೀಲರಿಗೆ ಟಿಕೆಟ್‌ ಘೋಷಿಸಿದೆ.

ಡಿ.ಆರ್‌. ಪಾಟೀಲ ಕಳೆದ ಎರಡೂ¾ರು ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಪ್ರತಿ ಬಾರಿಯೂ ಟಿಕೆಟ್‌ಗಾಗಿಸಲೀಂ ಅಹ್ಮದ್‌ ಹಾಗೂ ಡಿ.ಆರ್‌. ಪಾಟೀಲ ಅವರ ನಡುವೆ ಪೈಪೋಟಿ ನಡೆದು ಹೈಕಮಾಂಡ್‌ ಮೇಲೆ ಭಾರಿ ಒತ್ತಡ ಹೇರಲಾಗುತ್ತಿತ್ತು. ಡಿ.ಆರ್‌. ಪಾಟೀಲ ಅವರು ಎಚ್‌.ಕೆ. ಪಾಟೀಲ ಅವರ ಸಹೋದರರಾಗಿದ್ದು, ಅವರ ಮೂಲಕವೂ ಪ್ರಭಾವ ಬೀರುತ್ತಲೇ ಬಂದಿದ್ದರು. ಆದರೆ,
ಕಳೆದ ಎರಡು ಲೋಕಸಭೆ ಚುನಾವಣೆಗಳಲ್ಲಿಯೂ ಸಲೀಂ ಅಹ್ಮದ್‌ ಅವರು ಹೈಕಮಾಂಡ್‌ ಮೇಲೆ ಹೆಚ್ಚು ಪ್ರಭಾವ ಬೀರಿ ನಾಮಪತ್ರ ಸಲ್ಲಿಕೆಯ ಕೊನೆಯ
ದಿನಗಳಲ್ಲಿ ಬಿ ಫಾರ್ಮ್ ತಂದಿದ್ದರು.

ಟಿಕೆಟ್‌ ಸೆಣಸಾಟ
ಸಲೀಂ ಅಹ್ಮದ್‌, ಡಿ.ಆರ್‌. ಪಾಟೀಲ, ಬಸವರಾಜ ಶಿವಣ್ಣನವರ ಪ್ರಮುಖ ಆಕಾಂಕ್ಷಿಗಳಾಗಿದ್ದರು. ಎರಡು ಬಾರಿ ಸೋತಿರುವ ಕಾರಣವನ್ನು ಮುಂದಿಟ್ಟುಕೊಂಡು
ಈ ಬಾರಿ ಪಕ್ಷದ ಹೈಕಮಾಂಡ್‌ ಸಲೀಂ ಅಹ್ಮದ್‌ ಅವರಿಗೆ ಟಿಕೆಟ್‌ ನೀಡಲು
ನಿರಾಕರಿಸಿತು. ಹೈಕಮಾಂಡ್‌ನ‌ ಈ ನಿರ್ಧಾರದಿಂದ ಕಾಂಗ್ರೆಸ್‌ ಪಾಲಿಗೆ ಮುಸ್ಲಿಂ
ಮೀಸಲು ಕ್ಷೇತ್ರವಾಗಿದ್ದ ಹಾವೇರಿ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗಿ ಬದಲಾಯಿತು. ಈ
ಬಾರಿ ಕುರುಬ ಸಮುದಾಯದ ಮುಖಂಡ ಬಸವರಾಜ ಶಿವಣ್ಣನವರ ಹಾಗೂ ರಡ್ಡಿ
ಲಿಂಗಾಯತ ಮುಖಂಡ ಡಿ.ಆರ್‌. ಪಾಟೀಲ ಅವರ ನಡುವೆ ಟಿಕೆಟ್‌ಗಾಗಿ ಪ್ರಬಲ
ಸ್ಪರ್ಧೆ ಏರ್ಪಟ್ಟಿತ್ತು. ಈ ಬಾರಿ ಹೈಕಮಾಂಡ್‌ ಜಾತಿ ಲೆಕ್ಕಾಚಾರದ ಆಧಾರದಲ್ಲಿ ಟಿಕೆಟ್‌
ಹಂಚಿಕೆ ಮಾಡಿದ್ದರಿಂದ ಕಳೆದ ಎರಡು ಚುನಾವಣೆ ವೇಳೆ ಟಿಕೆಟ್‌ ಸ್ಪರ್ಧೆಯಲ್ಲಿ
ಸೋತಿದ್ದ ಡಿ.ಆರ್‌. ಪಾಟೀಲ ಅವರಿಗೆ ಈ ಬಾರಿ ಟಿಕೆಟ್‌ ಜಯ ಸಿಕ್ಕಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.