ಲಿಂಗಾಯತ, ಮಹದಾಯಿ ಹೋರಾಟ ಧ್ವನಿ ಗೌಣ


Team Udayavani, Apr 9, 2019, 3:00 AM IST

lingayata

ಹುಬ್ಬಳ್ಳಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹಾಗೂ ಮಹದಾಯಿ ಹೋರಾಟಗಳು ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದವು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಈ ಎರಡೂ ಚಳವಳಿಗಳು ಗೌಣವಾಗಿವೆ.

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ರಾಜ್ಯ, ಹೊರ ರಾಜ್ಯಗಳಲ್ಲಿ ನಡೆದರೂ ಹೋರಾಟ ತೀವ್ರತೆ ಪಡೆದಿದ್ದು ಮಾತ್ರ ಉತ್ತರ ಕರ್ನಾಟಕದಲ್ಲಿ. ಪರ-ವಿರೋಧ ಹೋರಾಟಗಳು ಸಾಕಷ್ಟು ತೀವ್ರತೆ ಪಡೆದಿದ್ದವು. ಪೈಪೋಟಿಗೆ ಬಿದ್ದಂತೆ ಸಮಾವೇಶದ ಮೇಲೆ ಸಮಾವೇಶ, ಹೇಳಿಕೆ, ಆರೋಪ-ಪ್ರತ್ಯಾರೋಪಗಳು ಕೇಳಿ ಬಂದವು.

ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನದ ನ್ಯಾಯ ಪಡೆಯುತ್ತೇವೆಂದು ಪರವಾಗಿದ್ದವರು, ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ವಿರುದ್ಧವಾಗಿದ್ದವರು ಶಪಥ ಮಾಡುತ್ತಲೇ ಸಾಗಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕೆಲವು ನಾಯಕರು ಸೋಲು ಅನುಭವಿಸಿದರು. ಅಲ್ಲಿಂದಲೇ ಪರ-ವಿರೋಧ ಹೋರಾಟದ ಕಾವು ತಣ್ಣಗಾಗುತ್ತ ಸಾಗಿತ್ತು.

ಪ್ರತ್ಯೇಕ ಧರ್ಮ ಪರ ಹೋರಾಟದಲ್ಲಿ ಮುಂಚೂಣಿಯ ನಾಯಕರಾಗಿದ್ದ ಡಾ| ಶರಣ ಪ್ರಕಾಶ ಪಾಟೀಲ, ವಿನಯ ಕುಲಕರ್ಣಿ, ಬಸವರಾಜ ರಾಯರಡ್ಡಿ, ಬಿ.ಆರ್‌.ಪಾಟೀಲ ಸೋಲು ಕಂಡರು. ಈ ಸೋಲಿಗೆ ಕೇವಲ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವೊಂದೇ ಕಾರಣವಾಗಿರಲಿಲ್ಲ.

ಆಯಾ ಕ್ಷೇತ್ರದ ಸ್ಥಳೀಯ ಸಮಸ್ಯೆ, ಆಡಳಿತ ವಿರೋಧಿ ನೀತಿ, ಸಿಟ್ಟು, ಅತಿಯಾದ ಆತ್ಮವಿಶ್ವಾಸ ಸೇರಿದಂತೆ ಹಲವು ಅಂಶಗಳು ಕಾರಣವಾಗಿದ್ದವು. ಆದರೆ, ಸೋಲಿಗೆ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವೇ ಕಾರಣ ಎಂದು ಬಿಂಬಿಸಲಾಗಿತ್ತು. ಆದರೆ, ಇದೇ ಹೋರಾಟದ ಮುಂಚೂಣಿಯಲ್ಲಿದ್ದ ಎಂ.ಬಿ.ಪಾಟೀಲ ಗೆಲುವು ಸಾಧಿಸಿದರು. ಹೋರಾಟದ ಜತೆಗೆ ಆಗಾಗ ಕಾಣಿಸಿಕೊಂಡಿದ್ದ ಎಂ.ಸಿ.ಮನಗೂಳಿ ಕೂಡ ಗೆಲುವಿನ ರುಚಿ ಕಂಡರು.

ವಿಧಾನಸಭಾ ಚುನಾವಣೆ ನಂತರ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಕಾವು ಕಳೆದುಕೊಂಡಿತ್ತು. ರಾಜಕಾರಣಿಗಳು ಹೋರಾಟದಿಂದ ಹಿಂದೆ ಸರಿದರೆ, ಹೋರಾಟದ ಪರವಾಗಿದ್ದ ಸ್ವಾಮೀಜಿಗಳಲ್ಲಿ ಪ್ರಮುಖರಾಗಿದ್ದ ಗದುಗಿನ ತೋಂಟದಾರ್ಯ ಮಠದ ಡಾ| ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯರಾದರು. ಹೋರಾಟದ ಜೀವಂತಿಕೆಗೆ ಯತ್ನಿಸಿದ್ದ ಮಾತೆ ಮಹಾದೇವಿಯವರು ಲಿಂಗೈಕ್ಯರಾಗಿದ್ದು ಹೋರಾಟಕ್ಕೆ ದೊಡ್ಡ ಪೆಟ್ಟು ಕೊಟ್ಟಿತು.

ತಣ್ಣಗಾದ ಮಹದಾಯಿ: ಅದೇ ರೀತಿ, ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಮಹದಾಯಿ ಹೋರಾಟ ಈ ಭಾಗದಲ್ಲಿ ತನ್ನದೇ ಆದ ಪ್ರಭಾವ ಬೀರಿತ್ತು. ವಿಶೇಷವಾಗಿ ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ನರಗುಂದ ಹಾಗೂ ನವಲಗುಂದದಲ್ಲಿ ಸತತ ಮೂರು ವರ್ಷಗಳವರೆಗೆ ಹೋರಾಟ ಜೀವಂತಿಕೆ ಪಡೆದುಕೊಂಡಿತ್ತು. ವಿಧಾನಸಭಾ ಚುನಾವಣೆ ವೇಳೆ ಹಲವು ರಾಜಕಾರಣಿಗಳಿಗೆ ಆತಂಕ ಮೂಡಿಸುವ ಹಂತಕ್ಕೆ ಹೋರಾಟದ ಧ್ವನಿ ಮೊಳಗತೊಡಗಿತ್ತು.

ದಿನ ಕಳೆದಂತೆ ಹೋರಾಟದಲ್ಲೇ ಭಿನ್ನ ಧ್ವನಿ ಕಾಣಿಸಿಕೊಂಡಿತು. ಹೋರಾಟಗಾರರಲ್ಲೇ ಪರಸ್ಪರ ಅಪನಂಬಿಕೆ, ಆರೋಪ-ಪ್ರತ್ಯಾರೋಪ, ತಾವು ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆ, ವ್ಯಕ್ತಿ ಪ್ರತಿಷ್ಠೆ ಎಲ್ಲದರ ಫ‌ಲವಾಗಿ ಮಹದಾಯಿ ಹೋರಾಟ ಕಳೆಗುಂದಿತು. ಮಹದಾಯಿ ಬಗ್ಗೆ ನಮ್ಮ ಸಂಸದರು ಲೋಕಸಭೆಯಲ್ಲಿ ಸಂಘಟಿತ ಧ್ವನಿ ತೋರಲಿಲ್ಲ.

ನಮ್ಮ ಪರವಾಗಿ ಧ್ವನಿ ಎತ್ತಿ, ಪ್ರಧಾನಿ ಮಧ್ಯಪ್ರವೇಶಕ್ಕೆ ಯತ್ನಿಸಲಿಲ್ಲ ಎಂಬುದು ಹೋರಾಟಗಾರರ ಬಹುದೊಡ್ಡ ಆಕ್ಷೇಪ, ಆರೋಪವಾಗಿತ್ತು. ಇದೀಗ ಸಂಸದರ ಆಯ್ಕೆಯ ಲೋಕಸಭಾ ಚುನಾವಣೆ ಬಂದಿದೆ. ಈ ವೇಳೆ, ಹೋರಾಟದ ಧ್ವನಿ ಗಟ್ಟಿಯಾಗಿ ಮೊಳಗಬೇಕಾಗಿತ್ತು. ಆದರೆ, ಹೋರಾಟ ಎಲ್ಲೋ ಮುಳುಗಿದಂತೆ ತೋರುತ್ತಿದೆ. ಯಾವ ರಾಜಕೀಯ ಪಕ್ಷವೂ ಈ ವಿಚಾರವನ್ನು ಪ್ರಸ್ತಾಪಿಸುತ್ತಿಲ್ಲ.

ವಿಧಾನಸಭಾ ಚುನಾವಣೆ ಕಳೆದು ವರ್ಷದೊಳಗೆ ಎದುರಾದ ಲೋಕಸಭಾ ಚುನಾವಣೆಗೆ ಈ ಎರಡೂ ಚಳವಳಿಗಳು ಎಲ್ಲಿವೆ ಎಂದು ಹುಡುಕಾಡುವ ರೀತಿಯಲ್ಲಿ ಹೋರಾಟದ ಧ್ವನಿ ಮೌನಕ್ಕೆ ಜಾರಿದೆ.

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.