19ಕ್ಕೆ ದೆಹಲಿಯಿಂದಲೇ ಕೈ ಪಟ್ಟಿ ಬಿಡುಗಡೆ: ಈಶ್ವರ ಖಂಡ್ರೆ
Team Udayavani, Mar 17, 2019, 1:19 AM IST
ಕಲಬುರಗಿ: ಕೋಮುವಾದಿ, ಜಾತಿವಾದಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್ ಸವಾಲಾಗಿ ಸ್ವೀಕರಿಸಿದ್ದು, ಮಾ.19ರಂದು ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಲ್ಲಿ 19ರಂದು ಕಾಂಗ್ರೆಸ್ ಕೇಂದ್ರೀಯ ಸಮಿತಿ ಸಭೆ ನಡೆಯಲಿದೆ.
ಅಂದು ದೆಹಲಿಯಿಂದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ರಾಹುಲ್ ಗಾಂಧಿಗೆ ಉತ್ತರ ಕರ್ನಾಟಕ ಅಥವಾ ಹೈದ್ರಾಬಾದ್ ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಜ್ಯದ ಎಲ್ಲ ನಾಯಕರು ಮನವಿ ಮಾಡಿದ್ದೇವೆ. ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ನಾನು ಕೂಡ ಆಹ್ವಾನ ನೀಡಿದ್ದೇನೆ’ ಎಂದರು. ಮೈತ್ರಿ ಪಕ್ಷಗಳಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಮೈತ್ರಿ ಧರ್ಮ ಪಾಲನೆ
ಮತ್ತು ವಿಶಾಲ ದೃಷ್ಟಿಕೋನದಿಂದ ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆ. ಆದರೂ, ತುಮಕೂರು ಕ್ಷೇತ್ರ ಮತ್ತೆ ಕಾಂಗ್ರೆಸ್ಗೆಸಿಗುವ ಅವಕಾಶವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ