ಖೂಬಾ, ಕರಡಿ ಕೋಟಿ ರೂ. ಸಾಲಗಾರರು


Team Udayavani, Apr 4, 2019, 6:00 AM IST

190403kpn34a

ಎರಡನೇ ಹಂತದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ, ಬಿಜೆಪಿ ಸೇರಿ ವಿವಿಧ ಪಕ್ಷಗಳಿಂದ ಪ್ರಮುಖರು ಬುಧವಾರ ನಾಮಪತ್ರ ಸಲ್ಲಿಸಿದ್ದು, ಪ್ರಮುಖರ ಆಸ್ತಿ ವಿವರ ಹೀಗಿದೆ.


ಖೂಬಾ ಬಳಿ 2.94 ಕೋಟಿ ಮೌಲ್ಯದ ಸ್ಥಿರಾಸ್ತಿ
ಬೀದರ ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಸಂಸದ ಭಗವಂತ ಖೂಬಾ ಅವರಿಗೆ ಕಳೆದ 5 ವರ್ಷಗಳಿಂದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆಯಾಗಿದೆ. ಖೂಬಾ ಬಳಿ 1.10 ಲಕ್ಷ ರೂ. ಮೌಲ್ಯದ ಕೈಗಡಿಯಾರ ಇದೆ. ಪತ್ನಿ ಹೆಸರಲ್ಲಿ ಬೀದರಿನ ಶಿವನಗರದಲ್ಲಿರುವ 1.10 ಕೋಟಿ ರೂ. ಮೌಲ್ಯದ ಮನೆ ಹೊಂದಿದ್ದಾರೆ. 47.87 ಲಕ್ಷ ರೂ. ಗೃಹ ಸಾಲ, ಪಂಜಾಬ್‌ ಆ್ಯಂಡ್‌ ಸಿಂಡ್‌ ಬ್ಯಾಂಕ್‌ನಿಂದ 24.52 ಲಕ್ಷ ಹಾಗೂ 30 ಲಕ್ಷ ರೂ. ವೈಯಕ್ತಿಕ ಸಾಲ ಪಡೆದಿದ್ದಾರೆ. ಒಟ್ಟು 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಒಟ್ಟಾರೆ, 1,02,39,000 ಸಾಲ ಹೊಂದಿದ್ದಾರೆ.

ಡಿ.ಆರ್‌. ಪಾಟೀಲ 4.68 ಕೋಟಿ ರೂ. ಒಡೆಯ
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದ್ಯಾಮನಗೌಡ ರಾಮನಗೌಡ ಪಾಟೀಲ (ಡಿ.ಆರ್‌.ಪಾಟೀಲ) 4.68 ಕೋಟಿ ರೂ.ಗಳ ಒಡೆಯರಾಗಿದ್ದಾರೆ. 68,24,424 ರೂ. ಮೌಲ್ಯದ ಚರಾಸ್ತಿ, 4 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಷೇರು, ಇತರ ಬಾಂಡ್‌ಗಳಲ್ಲಿ 1,25,100 ರೂ., 1,500 ಗ್ರಾಂ. ಚಿನ್ನಾಭರಣ, 9 ಕೆಜಿ ಬೆಳ್ಳಿ ಹಾಗೂ 25,74,740 ರೂ. ಸಾಲ ಇದೆ.

ಸಂಗಣ್ಣ ಕರಡಿ ಸಾಲಗಾರ 
ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ, ಚರ ಹಾಗೂ ಸ್ಥಿರಾಸ್ತಿ ಸೇರಿ ಒಟ್ಟು 2,87,25,791 ಮೌಲ್ಯದ ಆಸ್ತಿ ಹೊಂದಿದ್ದಾರೆ. ಬೆಂಗಳೂರು ಸೇರಿ ವಿವಿಧ ಬ್ಯಾಂಕ್‌ಗಳಲ್ಲಿ 2,24,75,333 ರೂ. ಸಾಲ ಮಾಡಿದ್ದಾರೆ. ಅವರ ಪತ್ನಿ ನಿಂಗಮ್ಮ ಹೆಸರಿನಲ್ಲಿ 21 ಲಕ್ಷ ರೂ. ಸಾಲವಿದೆ. ಸಂಗಣ್ಣ ಅವರಿಗೆ ಯಾವುದೇ ಆದಾಯ ಮೂಲಗಳು ಇಲ್ಲ. ಕೃಷಿ ಹಾಗೂ ಸಂಸದರ ವೇತನ ಮಾತ್ರ ಆದಾಯ ಮೂಲ ಇರುವ ಕುರಿತು ದಾಖಲೆಗಳಲ್ಲಿ ಉಲ್ಲೇಖ ಮಾಡಿದ್ದಾರೆ.

ಜಾದವ್‌ ಸ್ಥಿರಾಸ್ತಿ ಮೌಲ್ಯ 1.33 ಕೋಟಿ
ಕಲಬುರಗಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ ಚರಾಸ್ಥಿ 53 ಲಕ್ಷ ರೂ. ಮೌಲ್ಯ, ಪತ್ನಿ ಗಾಯತ್ರಿ ಚರಾಸ್ಥಿ 22 ಲಕ್ಷ ರೂ. ಮೌಲ್ಯದ್ದಾಗಿದೆ. ಮಗಳು ವೈಷ್ಣವಿ ಹೆಸರಿನಲ್ಲಿ 60 ಸಾವಿರ ರೂ. ಇದ್ದರೆ, ಶಾರದಾ ಹೆಸರಿನಲ್ಲಿ 8 ಲಕ್ಷ 74 ಸಾವಿರ ರೂ. ಚರಾಸ್ಥಿಯಿದೆ. ಉಮೇಶ ಜಾಧವ ಹೆಸರಿನಲ್ಲಿ ಚಿಂಚೋಳಿಯಲ್ಲಿ 19 ಎಕರೆ ಭೂಮಿಯಿದೆ. ಒಟ್ಟು 1.33 ಕೋಟಿ ರೂ. ಮೌಲ್ಯದ ಸ್ಥಿರಾಸ್ಥಿ ಹೊಂದಿದ್ದು, ಪತ್ನಿ ಗಾಯತ್ರಿ ಹೆಸರಿನಲ್ಲಿ 1.57 ಕೋಟಿ ರೂ. ಆಸ್ತಿಯಿದೆ.

ಜೋಶಿ 11 ಕೋಟಿ ರೂ. ಆಸ್ತಿ ಒಡೆಯ
ಹುಬ್ಬಳ್ಳಿ-ಧಾರವಾಡ ಹಾಲಿ ಸಂಸದ ಪ್ರಹ್ಲಾದ ಜೋಶಿ ಅವರ ಆಸ್ತಿ ಕಳೆದ ಐದು ವರ್ಷಗಳಲ್ಲಿ ಒಟ್ಟು ಮೂರು ಪಟ್ಟು ಹೆಚ್ಚಳವಾಗಿದ್ದು, ಅವರು 11.13 ಕೋಟಿ ರೂ. ಆಸ್ತಿಯ ಒಡೆಯರಾಗಿದ್ದಾರೆ. ಈ ಪೈಕಿ ಜೋಶಿ ಅವರ ಹೆಸರಿನ ಸ್ಥಿರ ಮತ್ತು ಚರಾಸ್ಥಿ ಮೌಲ್ಯ ಒಟ್ಟು 10.34 ಲಕ್ಷ ರೂ., ಅವರ ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 75 ಲಕ್ಷ ರೂ.ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. 2009ರಲ್ಲಿ 1.13 ಕೋಟಿ ಆಸ್ತಿಯ ಒಡೆಯರಾಗಿದ್ದ ಅವರು 2014 ಕ್ಕೆ 2.79 ಕೋಟಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದರು.

ಮಧು ಆಸ್ತಿ 61.58 ಕೋಟಿ
ಶಿವಮೊಗ್ಗ ಮೈತ್ರಿಕೂಟದ ಅಭ್ಯರ್ಥಿ, ಮಾಜಿ ಶಾಸಕ ಮಧು ಬಂಗಾರಪ್ಪ ಕುಟುಂಬವು 61.58 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿ ಘೋಷಿಸಿಕೊಂಡಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇದ್ದ 67 ಕೋಟಿ ರೂ. ಮೌಲ್ಯದ
ಆಸ್ತಿಯಲ್ಲಿ 6 ಕೋಟಿ ರೂ. ಮೌಲ್ಯದ ಆಸ್ತಿ ಕರಗಿದೆ. ಇದರ ಜತೆಗೆ ಬ್ಯಾಂಕ್‌ ಮತ್ತು ಇತರೆ ಸಂಸ್ಥೆಗಳಲ್ಲಿನ ಸಾಲದ ಮೊತ್ತ 15ರಿಂದ 17 ಕೋಟಿ ರೂ.ಗಳಿಗೆ
ಏರಿಕೆಯಾಗಿದ್ದು ಕೆಎಸ್‌ಐಐಡಿಸಿಯಲ್ಲಿ 43.61 ಲಕ್ಷ ರೂ. ಸಾಲದ ವ್ಯಾಜ್ಯ ಬಾಕಿ ಇದೆ. ಕುಟುಂಬದ ವಾರ್ಷಿಕ ಆದಾಯ 92.17 ಲಕ್ಷ ರೂ. ಇದೆ. ಮಧು, ಪತ್ನಿ ಅನಿತಾ ಅವರು 19.88 ಕೋಟಿ ರೂ. ಮೌಲ್ಯದ ಚರಾಸ್ತಿ, ಮಧು ಮತ್ತು ಪುತ್ರ ಸೂರ್ಯ ಅವರು
41.58 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಅನಿತಾ ಮಧು ಬಂಗಾರಪ್ಪ ಅವರ ಹೆಸರಲ್ಲಿ ಸ್ಥಿರಾಸ್ತಿ ಇಲ್ಲ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.