ಅಭ್ಯರ್ಥಿ ಪಕ್ಷಾಂತರ; ಮಾಯಾ ಕೆಂಡ
Team Udayavani, May 1, 2019, 6:00 AM IST
ಮಧ್ಯಪ್ರದೇಶದ ಗುನಾ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಲೋಕೇಂದ್ರ ಸಿಂಗ್ ಮಂಗಳವಾರ ಏಕಾಏಕಿ ಪಕ್ಷ ತೊರೆದು, ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಇದರಿಂದ ಬಿಎಸ್ಪಿ ನಾಯಕಿ ಮಾಯಾವತಿ ಕೆಂಡಾಮಂಡಲರಾಗಿದ್ದು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ಗೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಕಡಿಮೆಯೇನಿಲ್ಲ. ಬಿಎಸ್ಪಿ ಅಭ್ಯರ್ಥಿಯು ಗುನಾದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರೂ, ತನ್ನದೇ ಚಿಹ್ನೆಯಲ್ಲಿ ಸ್ಪರ್ಧಿಸುವ ಮೂಲಕ ಬಿಎಸ್ಪಿ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದೂ ಮಾಯಾ ಹೇಳಿದ್ದಾರೆ.