50 ಕೋಟಿ ದಾಟಿದ ನಗದು


Team Udayavani, Apr 5, 2019, 6:17 AM IST

50-Crore-Cash

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಇಲ್ಲಿವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ವಶಪಡಿಸಿಕೊಂಡ ನಗದು 50 ಕೋಟಿ ರೂ. ದಾಟಿದೆ.

ಫ್ಲೈಯಿಂಗ್‌ ಸ್ಕ್ವಾಡ್‌, ಸ್ಟಾಟಿಕ್‌ ಸರ್ವೆಲೆನ್ಸ್‌ ಟೀಮ್‌, ಪೊಲೀಸ್‌ ತಂಡಗಳು ಹಾಗೂ ಅಬಕಾರಿ ತಂಡಗಳು ಸೇರಿ ಇಲ್ಲಿವರೆಗೆ ವಶಪಡಿಸಿಕೊಂಡು ನಗದು ಮೊತ್ತ 50.94 ಕೋಟಿ ರೂ. ಆಗಿದೆ.

ಉಳಿದಂತೆ ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 10.39 ಕೋಟಿ ನಗದು, 37.68 ಲಕ್ಷ ಮೌಲ್ಯದ ಮದ್ಯ, 6.16 ಲಕ್ಷ ಮೌಲ್ಯದ ಮಾದಕ ದ್ರವ್ಯ, 1.66 ಕೋಟಿ ರೂ. ಮೊತ್ತದ ಇತರೆ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿವೆ. ಈವರೆಗೆ ವಶಪಡಿಸಿಕೊಂಡ ಒಟ್ಟು ನಗದು 50.94 ಕೋಟಿ.

ಡಿಸಿಸಿ ಬ್ಯಾಂಕ್‌ಗೆ ಸೇರಿದ ಹಣ ಜಪ್ತಿ: ಏ.3ರಂದು ಸಂಜೆ 4.30 ಗಂಟೆಗೆ ಬೆಳಗಾವಿ ಜಿಲ್ಲೆಯಲ್ಲಿ ಫ್ಲೈಯಿಂಗ್‌ ಸ್ಕ್ವಾಡ್‌ ತಂಡವು 1.90 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದು, ಈ ಹಣ ಬೆಳಗಾವಿ ಡಿಸಿಸಿ ಬ್ಯಾಂಕ್‌ಗೆ ಸೇರಿದ್ದು, ಅಕ್ರಮವಾಗಿ ಖಾಸಗಿ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ಹಣವನ್ನು ಆದಾಯ ತೆರಿಗೆ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರದಲ್ಲಿ ಮೂರು ವಿವಿಧ ವಾಹನಗಳಿಂದ 37.14 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

1.76 ಕೋಟಿ ರೂ.ನಗದು ವಶ: ಚಿಕ್ಕಬಳ್ಳಾಪುರ ಸುಂಕ ವಸೂಲಾತಿ ಕೇಂದ್ರದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಇಟ್ಟಿದ್ದ ಕೋಟ್ಯಂತರ ರೂ. ನಗದನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ತಂಡ ರಾಜ್ಯದ ಹಾಗೂ ಆಂಧ್ರ ಪೊಲೀಸರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕ ಸುಬ್ಟಾರೆಡ್ಡಿ ಎಂಬುವರ ಕೊಠಡಿಯಲ್ಲಿ ಇಟ್ಟಿದ್ದ 1.76 ಕೋಟಿ ರೂ. ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕರಪತ್ರ ವಶಕ್ಕೆ: ಚನ್ನರಾಯಪಟ್ಟಣ ತಾಲೂಕಿನ ಗಡಿಭಾಗದ ಹಿರೀಸಾವೆ ಬಳಿಯಲ್ಲಿನ ಚೆಕ್‌ ಪೋಸ್ಟ್‌ನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ 2 ಬಸ್‌ನಲ್ಲಿ ಸಾಗಿಸುತ್ತಿದ್ದ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಸೇರಿದ ಸುಮಾರು 50 ಸಾವಿರ ಕರಪತ್ರ ಹಾಗೂ 2 ಬಸ್‌ಗಳನ್ನು ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ 2 ಬಸ್‌ಗಳಲ್ಲಿ ತಲಾ 25
ಸಾವಿರ ಕರಪತ್ರ ವಿರುವ ಬಂಡಲ್‌ಗ‌ಳು ಪತ್ತೆಯಾಗಿವೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.