ಮಧ್ವರಾಜ್‌ ಗೆಲುವು ಖಚಿತ ಕ್ಷೇತ್ರದ ಅಭಿವೃದ್ಧಿ ನಿಶ್ಚಿತ: ಸೊರಕೆ


Team Udayavani, Apr 15, 2019, 6:30 AM IST

sorake

ಉಡುಪಿ: ಈ ಚುನಾವಣೆ ದೇಶದ ಭವಿಷ್ಯವನ್ನು ತೀರ್ಮಾನಿಸಲಿದೆ. ದೇಶದಲ್ಲಿ ಭಾವನಾತ್ಮಕವಾಗಿ ಜನರನ್ನು ದಿಕ್ಕುತಪ್ಪಿಸುವ ಶಕ್ತಿಗಳನ್ನು ದೂರ ಇರಿಸಿ ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವವರಿಗೆ ಮತ ಚಲಾಯಿಸಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು.

ಅವರು ರವಿವಾರ ಹೆಜಮಾಡಿ ಪೇಟೆ ಮತ್ತು ಸುತ್ತಮುತ್ತ ಪಾದಯಾತ್ರೆ ಮೂಲಕ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜರ ಪರವಾಗಿ ಮತ ಯಾಚಿಸಿದರು.

ದೇಶದ ಐದು ಕೋಟಿ ಬಡ ಕುಟುಂಬಕ್ಕೆ ಮಾಸಿಕ ರೂ. 6,000 ನೀಡುವ ಮೂಲಕ ಕನಿಷ್ಠ ಆದಾಯ ಕಲ್ಪಸಲಾಗುವುದು. ಈ ಯೋಜನೆಯಡಿ ವಾರ್ಷಿಕ 72,000 ರೂ. ನೀಡಲಾಗುವುದು. ರೈತರಿಗೆ ಸಾಲ ಮನ್ನಾ, ಸಾಲ ಮುಕ್ತಿ ಯೋಜನೆ, ಪ್ರತ್ಯೇಕ ಬಜೆಟ್‌ ಮಂಡನೆ, ಒಂದೇ ಸ್ಲಾ$Âಬ್‌ನ ಅಡಿ ಜಿಎಸ್‌ಟಿಯನ್ನು ತಂದು ರೈತರಿಗೆ ಮತ್ತು ಬಡ ಮಧ್ಯಮ ಜನತೆ ಸಂತೃಪ್ತಿಯ ಜೀವನ ಸಾಗಿಸುವಂತೆ ಕಾಂಗ್ರೆಸ್‌ ಕ್ರಮ ಕೈಗೊಳ್ಳಲಿದೆ. ಯಾವುದೇ ಹೊಸ ಉದ್ಯಮಗಳಿಗೆ ಮೊದಲ 3 ವರ್ಷ ಅನುಮತಿ ಕಡ್ಡಾಯವನ್ನು ರದ್ದುಗೊಳಿಸಿ ಹೊಸ ಉದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು. 2020ರ ಒಳಗೆ ಖಾಲಿ ಇರುವ 22 ಲಕ್ಷ ಸರಕಾರಿ ಹುದ್ದೆಗಳ ಭರ್ತಿಯೊಂದಿಗೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರಮೋದ್‌ ಮಧ್ವರಾಜ್‌ ಗೆಲುವು ಖಚಿತ, ಲೋಕಸಭಾ ಕ್ಷೇತ್ರದ ಅಭಿವೃದ್ಧಿ ನಿಶ್ಚಿತ ಎಂದು ವಿನಯ ಕುಮಾರ್‌ ಸೊರಕೆ ಹೇಳಿದರು.

ನಿಮ್ಮ ಚಾಕರಿಯವನಾಗಲು ತೆನೆ ಹೊತ್ತ ಮಹಿಳೆಗೆ ಮತ ನೀಡಿ – ಪ್ರಮೋದ್‌
ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮಾತನಾಡಿ, ಐದು ವರ್ಷಗಳಿಂದ ಜನರ ಸಂಪರ್ಕಕ್ಕೆ ಸಿಗದೇ ಇದ್ದ ಸಂಸದರನ್ನು ನೀವು ಆಯ್ಕೆ ಮಾಡುವಿರೇ ಎಂಬ ಪ್ರಶ್ನೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ. ನಾನು ಸಚಿವನಾಗಿದ್ದಾಗ ವಿಧಾನಸಭಾ ಕ್ಷೇತ್ರದ ಜನತೆಯ ಸಮಸ್ಯೆಗೆ ಸ್ಪಂದಿಸಿದ್ದೇನೆ. ವಿಶೇಷವಾಗಿ ದಿನದ 24 ಗಂಟೆಗಳ ಅವಧಿಯೂ ವಿದ್ಯುತ್‌ ಪೂರೈಕೆಯಾಗುವಂತೆ ಪ್ರಯತ್ನ ಮಾಡಿದ್ದೇನೆ. ಮೀನುಗಾರರ ಸಮಸ್ಯೆ, ಮರಳುಗಾರಿಕೆ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಅಲ್ಪಸಂಖ್ಯಾಕರ ಸಮಸ್ಯೆ ಅಲ್ಲದೆ ಪ್ರಮುಖ ಸಮಸ್ಯೆಗಳನ್ನು ಸಂಸತ್ತಿ
ನಲ್ಲಿ ನಿಮ್ಮ ಧ್ವನಿಯಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ವಿನಯ ಕುಮಾರ್‌ ಸೊರಕೆ ನಡೆಸಿದ್ದಾರೆ. ಇನ್ನು ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅವರೊಂದಿಗೆ ಸೇರಿ ಕೋಟಿ- ಚೆನ್ನಯರಂತೆ ಮಾಡುತ್ತೇವೆ. ನನ್ನ ಚಿಹ್ನೆ ತೆನೆ ಹೊತ್ತ ಮಹಿಳೆಗೆ ಮತ ನೀಡಿ ಎಂದು ವಿನಂತಿಸಿ
ಕೊಂಡರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂ.ಎ. ಗಫ‌ೂರ್‌, ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಅಬ್ದುಲ್‌ ಅಜೀಜ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಅಲೆವೂರು ಹರೀಶ್‌ ಕಿಣಿ, ಸರಸು ಡಿ. ಬಂಗೇರಾ, ನವೀನ್‌ಚಂದ್ರ ಸುವರ್ಣ, ವಿಶ್ವಾಸ್‌ ವಿ. ಅಮೀನ್‌, ಎಂ.ಪಿ. ಮೊಯಿದಿನಬ್ಬ, ಗಣೇಶ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.