ದೇಶ ವಿರೋಧಿ ಶಕ್ತಿಗಳೊಂದಿಗೆ ಮಮತಾ ನಂಟು: ಮೋದಿ


Team Udayavani, Apr 8, 2019, 6:30 AM IST

MODI-1

ದೇಶವನ್ನು ಒಡೆಯುವ ಹಾಗೂ ದೇಶದಲ್ಲಿ ಎರಡು ಪ್ರಧಾನಿಗಳು ಬೇಕು ಎಂದು ವಾದಿಸುವ ಶಕ್ತಿಗಳೊಂದಿಗೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ನಂಟು ಹೊಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಲದ ಕೂಛ…ಬಿಹಾರದಲ್ಲಿ ಪ್ರಚಾರ ರ್ಯಾಲಿ ನಡೆಸಿದ ಅವರು, ಕೇಂದ್ರ ಸರಕಾರದ ಹಲವು ಯೋಜನೆಗಳಿಗೆ ಸ್ಪೀಡ್‌ ಬ್ರೇಕರ್‌ ದೀದಿ ಬ್ರೇಕ್‌ ಹಾಕಿದ್ದಾರೆ. ದೇಶದ ಇತರ ಭಾಗದ ಜನರಿಗೆ ಲಭ್ಯವಾಗುತ್ತಿರುವ ಲಾಭಗಳು ರಾಜ್ಯದ ಜನತೆಗೆ ತಲುಪಲು ಬಿಡುತ್ತಿಲ್ಲ ಎಂದಿದ್ದಾರೆ.

ಶಾರದಾ, ನಾರದ ಹಾಗೂ ರೋಸ್‌ವ್ಯಾಲಿ ಹಗರಣಗಳಿಂದಾಗಿ ರಾಜ್ಯದ ಹೆಸರನ್ನು ದೀದಿ ಹಾಳು ಮಾಡಿದ್ದಾರೆ. ಲೂಟಿ ಮಾಡಿದ ಪ್ರತಿ ಪೈಸೆಗೂ ಈ ಚೌಕಿದಾರ ಲೆಕ್ಕ ಕೇಳುತ್ತಾನೆ. ಮೋದಿ ಮೋದಿ ಎಂಬ ಕೂಗು ದೀದಿಯ ನಿದ್ದೆಗೆಡಿಸಿದೆ. ಚುನಾವಣಾ ಆಯೋಗದ ವಿರುದ್ಧ ಅವರು ತೋರಿಸುತ್ತಿರುವ ಸಿಟ್ಟೇ ಇದಕ್ಕೆ ಉದಾಹರಣೆ ಎಂದಿದ್ದಾರೆ. 7ನೇ ವೇತನ ಆಯೋಗ ಯಾಕೆ ಜಾರಿ ಮಾಡಿಲ್ಲ ಎಂದು ಜನರಿಗೆ ದೀದಿ ಸ್ಪಷ್ಟನೆ ನೀಡಿದ್ದಾರೆಯೇ? ಪರೀಕ್ಷೆ ಬರೆದರೂ ನೇಮಕ ಯಾಕೆ ಆಗುತ್ತಿಲ್ಲ ಎಂದು ನಿಮಗೆ ತಿಳಿಸಿದ್ದಾರೆಯೇ ಎಂದೂ ಮೋದಿ ಪ್ರಶ್ನಿಸಿದರು. ಜತೆಗೆ, ಸದ್ಯದಲ್ಲೇ ದೇಶದಲ್ಲಿ ಫೋನ್‌ ಕರೆಗಳು ಉಚಿತವಾಗಲಿವೆ. ಇಂಟರ್ನೆಟ್‌ ಶುಲ್ಕ ಜಗತ್ತಿನಲ್ಲೇ ಅತಿ ಅಗ್ಗದಲ್ಲಿ ದೊರೆಯಲಿದೆ ಎಂದಿದ್ದಾರೆ.

ಶಾರದಾ ಹಗರಣ ಕುರಿತ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, “ಶಾರದಾ ಹಗರಣದ ಆರೋಪಿ ಮುಕುಲ್‌ ರಾಯ್‌ ನಿಮ್ಮ ಜೊತೆಗೇ ಇದ್ದಾರಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌, ಪಾಕಿಸ್ಥಾನದ ಮೈತ್ರಿ: ಮಣಿಪುರದಲ್ಲೂ ರವಿವಾರ ರ್ಯಾಲಿ ನಡೆಸಿದ ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಯಾಕೆಂದರೆ ಇಬ್ಬರೂ ಕಲಂ 370 ರದ್ದತಿಗೆ ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿದ ಮರುದಿನವೇ ಪಾಕಿಸ್ಥಾನದಿಂದಲೂ ಈ ಬಗ್ಗೆ ಪ್ರತಿಕ್ರಿಯೆ ಬಂದಿದೆ. ಕಲಂ 370ರಲ್ಲಿ ಯಾವುದೇ ಸಾಂವಿಧಾನಿಕ ಬದಲಾವಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ವಿವರಿಸಿತ್ತು.

ಈ ಬಾರಿ ಆಡಳಿತ ಪರ ಅಲೆಯಿದೆ. ಪ್ರತಿಪಕ್ಷಗಳ ವಿರುದ್ಧವೇ ಜನರು ಸಿಟ್ಟಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ. ವಿಪಕ್ಷ‌ ನಾಯಕರು ಈಶಾನ್ಯ ಭಾಗವನ್ನು ಉತ್ಪಾದನೆಯ ಕೇಂದ್ರವನ್ನಾಗಿಸುತ್ತೇನೆ ಎಂದಿ ದ್ದಾರೆ. ಇಷ್ಟು ವರ್ಷಗಳವರೆಗೆ ಅವರು ಯಾವ ಉತ್ಪಾದನೆಯ ಕೇಂದ್ರವನ್ನಾಗಿ ಸಿದ್ದರು ಎಂದು ಮೋದಿ ಪ್ರಶ್ನಿಸಿದ್ದಾರೆ.

ಅಧಿಕಾರದಿಂದ ದೂರವಿಡಲು ಪ್ರಯತ್ನ
ನನ್ನನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳು ಶತಪ್ರಯತ್ನ ನಡೆಸಿವೆ. ವಿಪಕ್ಷಗಳು ಇದಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯಬಹುದಾಗಿದೆ. ಎನ್‌ಡಿಎ ಸರಕಾರ ಒಂದೆಡೆ ಉಗ್ರರ ವಿರುದ್ಧ ಹೋರಾಟ ನಡೆಸುತ್ತಿದ್ದರೆ ವಿಪಕ್ಷಗಳು ಪಾಕಿಸ್ಥಾನದ ರಾಗ ಹಾಡುತ್ತಿವೆ ಎಂದು ಮೋದಿ ತ್ರಿಪುರಾದ ಉದಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಟೀಕಿಸಿದ್ದಾರೆ. ತ್ರಿಪುರಾದಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್‌ ಹೊಡೆದಾಡುತ್ತಿವೆ. ಆದರೆ ದಿಲ್ಲಿಯಲ್ಲಿ ಅವರು ಒಟ್ಟಾಗುತ್ತಾರೆ. ತೆರೆಮರೆಯಲ್ಲಿ ಯಾವುದೇ ನಾಟಕ ಇಲ್ಲದೇ ಇದ್ದರೆ, ಕಾಂಗ್ರೆಸ್‌ನ ನಾಮದಾರ್‌ ಯಾಕೆ ಕೇರಳದಲ್ಲಿ ಸ್ಪರ್ಧಿಸಲು ತೆರಳುತ್ತಿದ್ದರು ಎಂದು ಮೋದಿ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.