ಮಂಡ್ಯ ಬಂಡಾಯ: ಗೊಂದಲದಲ್ಲಿ “ಕೈ’ ನಾಯಕರು


Team Udayavani, Apr 16, 2019, 3:00 AM IST

congress-logo

ಬೆಂಗಳೂರು: ಮಂಡ್ಯದ ಕಾಂಗ್ರೆಸ್‌ ನಾಯಕರ ಬಂಡಾಯ ಕೆಪಿಸಿಸಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಶಿಸ್ತು ಕ್ರಮಕ್ಕೆ ಮುಂದಾದರೆ ಜಿಲ್ಲೆಯಲ್ಲಿ ಪಕ್ಷದ ಬೇರುಗಳು ಅಲುಗಾಡಬಹುದು ಎಂಬ ಆತಂಕ ಕಾಡುತ್ತಿದೆ.

ಲೋಕಸಭೆ ಚುನಾವಣೆ ಆರಂಭದಿಂದಲೂ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರುವ ಮಂಡ್ಯದ ಏಳು ಜನ ಕಾಂಗ್ರೆಸ್‌ ನಾಯಕರು ಮೈತ್ರಿ ಪಕ್ಷದ ಅಭ್ಯರ್ಥಿ ವಿಷಯದಲ್ಲಿ ತಟಸ್ಥ ಧೋರಣೆ ಅನುಸರಿಸುತ್ತಿದ್ದಾರೆ. ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಮನವೊಲಿಕೆ ನಂತರವೂ ಮಂಡ್ಯ ಕಾಂಗ್ರೆಸ್‌ ಮುಖಂಡರು ಮಣಿದಿಲ್ಲ.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖೀಲ್‌ ಪರವಾಗಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೂ, ಗೈರು ಹಾಜರಾಗಿ ಅಂತರ ಕಾಯ್ದುಕೊಂಡಿದ್ದು ರಾಜ್ಯ ಕಾಂಗ್ರೆಸ್‌ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಜೆಡಿಎಸ್‌ ನಾಯಕರೂ ಕೂಡ ಪಕ್ಷದ ಆದೇಶ ಉಲ್ಲಂಘಿಸಿರುವವರ ವಿರುದ್ಧ ಕ್ರಮ ಕೈಗೊಂಡು ಕ್ಷೇತ್ರದಲ್ಲಿ ಸಂದೇಶ ರವಾನಿಸಬೇಕು ಎಂದು ಒತ್ತಡ ಹೇರಿದ್ದಾರೆ.

ಆದರೆ, ಕಾಂಗ್ರೆಸ್‌ ನಾಯಕರು ಮಂಡ್ಯ ಅತೃಪ್ತರ ಬಗ್ಗೆ ಕ್ರಮ ಕೈಗೊಳ್ಳುವ ವಿಷಯದಲ್ಲಿ ಗೊಂದಲಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಇನ್ನೆರಡು ದಿನ ಚುನಾವಣೆ ಇರುವುದರಿಂದ ಈ ಸಂದರ್ಭದಲ್ಲಿ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದರೆ, ಜಿಲ್ಲೆಯಲ್ಲಿ ತಪ್ಪು ಸಂದೇಶ ರವಾನೆಯಾಗಬಹುದು. ಪಕ್ಷದ ವಿರುದ್ಧ ಕಾರ್ಯಕರ್ತರೂ ಬಂಡಾಯ ಸಾರಿದರೆ, ಜಿಲ್ಲೆಯಲ್ಲಿ ಪಕ್ಷದ ಭವಿಷ್ಯಕ್ಕೆ ತೊಂದರೆಯಾಗಬಹುದು ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ. ಅದೇ ಕಾರಣಕ್ಕೆ ರಾಜ್ಯ ನಾಯಕರು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಾಯಕರ ಪರ ಮೃಧು ಧೋರಣೆ: ಮಂಡ್ಯದಲ್ಲಿ ಪಕ್ಷದ ಆದೇಶ ಉಲ್ಲಂ ಸುತ್ತಿರುವವರು ಸಿದ್ದರಾಮಯ್ಯ ಆಪ್ತರಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ವಿಷಯದಲ್ಲಿ ಮೃಧು ಧೋರಣೆ ಅನುಸರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎನ್ನುವುದಕ್ಕೆ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಅಲ್ಲದೇ ಮೈತ್ರಿ ಅಭ್ಯರ್ಥಿ ನಿಖೀಲ್‌ ವಿರುದ್ಧವೂ ಎಲ್ಲಿಯೂ ಬಹಿರಂಗವಾಗಿ ಹೇಳಿಕೆಗಳನ್ನು ನೀಡದಿರುವುದರಿಂದ ಶಿಸ್ತ ಕ್ರಮಕ್ಕೆ ಮುಂದಾದರೆ, ಪರ್ಯಾಯ ರಾಜಕೀಯ ದಾರಿ ಹುಡುಕಿಕೊಳ್ಳಬಹುದು. ಬಿಜೆಪಿಯತ್ತಲೂ ಹೋಗಬಹುದು ಎಂಬ ಕಾರಣಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ.

ಮೈತ್ರಿ ಪಕ್ಷದ ಆಕ್ಷೇಪ ಹಾಗೂ ಪಕ್ಷದಲ್ಲಿ ಶಿಸ್ತು ಪಾಲನೆ ಮಾಡುವ ಸಂದೇಶ ರವಾನಿಸಲು ಬಂಡಾಯ ಹಾಗೂ ತಟಸ್ಥ ಧೋರಣೆ ಅನುಸರಿಸುತ್ತಿರುವ ನಾಯಕರಿಗೆ ಕಾರಣ ಕೇಳಿ ನೋಟಿಸ್‌ ನೀಡಿ ಪ್ರಹಸನಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಚುನಾವಣೆಯ ಆರಂಭದಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮಗೆ ಯಾವ ಕಾಂಗ್ರೆಸ್‌ ನಾಯಕರ ಬೆಂಬಲವೂ ಬೇಕಿಲ್ಲ. ನಾನು ಯಾರ ಮನೆ ಬಾಗಿಲಿಗೂ ಹೋಗುವುದಿಲ್ಲ. ಬೆನ್ನಿಗೆ ಚೂರಿ ಹಾಕುವ ನಾಯಕರ ಅಗತ್ಯವಿಲ್ಲ ಎಂದು ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ಮುಖಂಡರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಅದೇ ಹೇಳಿಕೆಯನ್ನೇ ಅತೃಪ್ತ ಕಾಂಗ್ರೆಸ್‌ ನಾಯಕರು ತಮ್ಮ ಪಕ್ಷದ ಮುಖಂಡರ ಮುಂದಿಟ್ಟು, ಅವರು ಬೇಡವೆಂದರೂ, ಅವರ ಪರವಾಗಿ ಪ್ರಚಾರ ಮಾಡಿದರೆ, ನಮ್ಮನ್ನು ಏನೆಂದುಕೊಳ್ಳುತ್ತಾರೆ. ಜಿಲ್ಲೆಯಲ್ಲಿ ಪಕ್ಷದ ಅಸ್ಥಿತ್ವ ಉಳಿಸಲು, ನಮ್ಮ ಸ್ವಾಭಿಮಾನ ಕಾಪಾಡಿಕೊಳ್ಳಲು ತಟಸ್ಥ ನಿಲುವು ತಾಳಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ಆದೇಶ ಉಲ್ಲಂಘಿಸಿ ಬಹಿರಂಗವಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಏಳು ಜನ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾ ಮಾಡಿರುವುದಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಎಲ್ಲರನ್ನೂ ಪಕ್ಷದಿಂದ ತೆಗೆದು ಹಾಕಿದರೆ ಮುಂದೆ ಪಕ್ಷದ ಧ್ವಜ ಹಿಡಿಯಲು ಮುಖಂಡರು ಸಿಗುವುದಿಲ್ಲ ಎಂಬ ಆತಂಕ ಇದಕ್ಕೆ ಕಾರಣ ಎನ್ನಲಾಗಿದೆ.

ಈ ಮಧ್ಯೆ, ಮಂಡ್ಯದಲ್ಲಿ ರಾಜಕೀಯ ಅಸ್ಥಿತ್ವಕ್ಕಾಗಿ ಹರಸಾಹಸ ಪಡುತ್ತಿರುವ ಬಿಜೆಪಿ, ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಯಕರ ಬಂಡಾಯದಿಂದ ಶಕ್ತಿ ವೃದ್ಧಿಸಿಕೊಳ್ಳಲು ಕಸರತ್ತು ನಡೆಸಿದೆ. ಈಗ ಒಂದು ವೇಳೆ ಬಂಡಾಯ ನಾಯಕರ ವಿರುದ್ಧ ಕಾಂಗ್ರೆಸ್‌ ಶಿಸ್ತು ಕ್ರಮ ಕೈಗೊಂಡರೆ, ಅವರಿಗೆ ಪರ್ಯಾಯವಾಗಿ ಬಿಜೆಪಿಗೆ ಸ್ವಾಗತಿಸಲು ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.